ಬ್ರೇಕಿಂಗ್ ನ್ಯೂಸ್
05-06-24 03:59 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 5: ಲೋಕಸಭೆ ಫಲಿತಾಂಶದ ಬಳಿಕ ಬುಧವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, 17ನೇ ಲೋಕಸಭೆಯನ್ನು ವಿಸರ್ಜಿಸಲಾಗಿದೆ. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಪ್ರಧಾನಿ ಮೋದಿ ರಾಜೀನಾಮೆ ಸಲ್ಲಿಸಿದ್ದು ನೂತನ ಸರ್ಕಾರ ರಚನೆಗೆ ಅವಕಾಶ ಕೋರಿದರು.
ಪ್ರಧಾನ ಮಂತ್ರಿಗಳು ಹಾಗೂ ಸಂಪುಟ ಸದಸ್ಯರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿಗಳು ಹೊಸ ಸರ್ಕಾರ ರಚನೆಯಾಗುವ ವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಮನವಿ ಮಾಡಿದರು ಎಂದು ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ತಿಳಿಸಿದೆ.
ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆತ ಹಿನ್ನೆಲೆಯಲ್ಲಿ ಜೂನ್ 8ರಂದು ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಅದೇ ದಿನ ಕೇಂದ್ರ ಸಚಿವ ಸಂಪುಟ ಸದಸ್ಯರ ಪ್ರಮಾಣ ವಚನ ಸ್ವೀಕಾರವೂ ನಡೆಯುವ ಸಾಧ್ಯತೆ ಇದೆ.
ಜೂನ್ 8 ರಂದು ರಾಷ್ಟ್ರಪತಿ ಅವರಿಂದ ನರೇಂದ್ರ ಮೋದಿಯವರು ಪ್ರಮಾಣವಚನ ತೆಗೆದುಕೊಂಡು ಪ್ರಧಾನಿ ಹುದ್ದೆಗೆ ಏರಲಿದ್ದಾರೆ. ಎನ್ಡಿಎ ಮೈತ್ರಿಕೂಟಗಳ ಜೊತೆ ಸೇರಿ ಮೋದಿ ಸರ್ಕಾರ ರಚನೆ ಮಾಡಲಿದ್ದಾರೆ. 2014, 2019ರಲ್ಲಿ 2 ಬಾರಿ ಪ್ರಧಾನಿ ಆಗಿದ್ದ ಮೋದಿ ಈ ಬಾರಿ 2024ರಲ್ಲೂ ಪ್ರಧಾನಿಯಾದರೆ 3ನೇ ಬಾರಿಗೆ ದೇಶದ ಅತ್ಯುನ್ನತ ಸ್ಥಾನ ಸ್ವೀಕಾರ ಮಾಡಿದಂತಾಗುತ್ತದೆ.
ಬುಧವಾರ ಸಂಜೆ ದೆಹಲಿಯಲ್ಲಿ ನಡೆಯುವ ಎನ್ಡಿಎ ಸಭೆಯಲ್ಲಿ ಪಾಲ್ಗೊಳ್ಳಲು ಈಗಾಗಲೇ ಆಂಧ್ರದ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು, ಬಿಹಾರ ಸಿಎಂ ನಿತೀಶ್ ಕುಮಾರ್, ಆರ್ಜೆಡಿಯ ತೇಜಸ್ವಿ ಯಾದವ್ ಸೇರಿದಂತೆ ಪ್ರಮುಖರು ದೆಹಲಿ ವಿಮಾನವನ್ನು ಹತ್ತಿದ್ದಾರೆ. ಸಭೆಯಲ್ಲಿ ಪಾಲ್ಗೊಂಡು ಕೇಂದ್ರದಲ್ಲಿ ಸರ್ಕಾರ ರಚನೆ ಬಗ್ಗೆ ಮಹತ್ವದ ಚರ್ಚೆ ಮಾಡಲಿದ್ದಾರೆ. ಈ ಬಾರಿ ಉಪಪ್ರಧಾನಿ ಹುದ್ದೆ ಕೂಡ ರಚನೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.
Prime Minister Narendra Modi on June 5 called on President Murmu and tendered his resignation along with the Union Council of Ministers after the Union Cabinet recommended the dissolution of the 17th Lok Sabha. Mr. Modi and the Union Council of Ministers will continue in office till the new Government is formed at the request of the President, the Rashtrapati Bhawan said. The term of the current Lok Sabha ends on June 16.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 12:54 pm
HK News Desk
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm