ಬ್ರೇಕಿಂಗ್ ನ್ಯೂಸ್
04-12-20 10:56 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಡಿ.4: ಭಾರೀ ಜಿದ್ದಾಜಿದ್ದಿನ ಸೆಣಸಿಗೆ ಸಾಕ್ಷಿಯಾಗಿರುವ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಆಡಳಿತಾ ರೂಢ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಅತಿ ದೊಡ್ಡ ಪಕ್ಷವಾಗಿ ಮೂಡಿಬಂದಿದೆ. ಟಿಆರ್ ಎಸ್ 55 ಸ್ಥಾನಗಳನ್ನು ಪಡೆದರೆ, ಈ ಬಾರಿ ಅಧಿಕಾರ ಪಡೆಯಲೇಬೇಕೆಂದು ಸೆಣಸಿದ್ದ ಬಿಜೆಪಿ 48 ಸ್ಥಾನಗಳನ್ನು ಪಡೆದಿದೆ. ಅಸಾದುದ್ದೀನ್ ಓವೈಸಿಯ ಎಐಎಂಐಎಂ ಪಕ್ಷ 44 ಸ್ಥಾನಗಳಲ್ಲಿ ಜಯ ಗಳಿಸಿದೆ.
ಕಾಂಗ್ರೆಸ್ ಹೀನಾಯ ಸೋಲಿನ ಪರ್ವ ಮುಂದುವರಿದಿದ್ದು ಕೇವಲ ಎರಡು ಸ್ಥಾನ ಗಳಿಸಿ ತೀವ್ರ ಮುಖಭಂಗ ಅನುಭವಿಸಿದೆ.
ಒಟ್ಟು 150 ಸದಸ್ಯ ಬಲದ ಪಾಲಿಕೆಯಲ್ಲಿ 1122 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಈ ಬಾರಿ ಕೊರೊನಾ ಕಾರಣದಿಂದಾಗಿ ಮತದಾನಕ್ಕೆ ಬ್ಯಾಲೆಟ್ ಪೇಪರ್ ಬಳಕೆ ಮಾಡಿದ್ದು ಫಲಿತಾಂಶ ವಿಳಂಬವಾಗಿದೆ. ರಾತ್ರಿಯಾದರೂ ಪೂರ್ಣ ಫಲಿತಾಂಶ ಪ್ರಕಟವಾಗಿಲ್ಲ. ರಾತ್ರಿ 10.30 ರ ವೇಳೆಗೆ 149 ಸ್ಥಾನಗಳ ಫಲಿತಾಂಶ ಪ್ರಕಟಗೊಂಡಿದೆ.
ಈ ಬಾರಿ ಬಿಜೆಪಿಯ ಭರ್ಜರಿ ಎಂಟ್ರಿಯಿಂದಾಗಿ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ರಾಷ್ಟ್ರದ ಗಮನ ಸೆಳೆದಿದೆ. ಬಿಜೆಪಿಯ ಘಟಾನುಘಟಿ ನಾಯಕರು ಸೇರಿ ಸ್ವತಃ ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡ ಪಾಲಿಕೆ ಚುನಾವಣೆಯ ಪ್ರಚಾರಕ್ಕಾಗಿ ಹೈದರಾಬಾದ್ ಬಂದಿದ್ದರು. ಬಿಜೆಪಿ ಗೆದ್ದರೆ ಹೈದರಾಬಾದ್ ಹೆಸರನ್ನು ಭಾಗ್ಯ ನಗರ ಎಂದು ಮರು ನಾಮಕರಣ ಮಾಡುವುದಾಗಿ ಹೇಳಿದ್ದು ಚುನಾವಣಾ ಕಣ ರಂಗೇರುವಂತೆ ಮಾಡಿತ್ತು. ಇದರಿಂದಾಗಿ ಈ ಬಾರಿ ಅತಿ ಹೆಚ್ಚು ಮತದಾನವೂ (46.55 ಶೇ) ಆಗಿತ್ತು. ಒಟ್ಟು 74.67 ಲಕ್ಷ ಮತದಾರರ ಪೈಕಿ 34.50 ಲಕ್ಷ ಜನ ಮತದಾನ ಮಾಡಿದ್ದರು.
2016ರ ಚುನಾವಣೆಯಲ್ಲಿ ಟಿಆರ್ ಎಸ್ 88 ಸ್ಥಾನಗಳನ್ನು ಪಡೆದು ಪೂರ್ಣ ಬಹುಮತ ಪಡೆದಿತ್ತು. ಈ ಬಾರಿ ಬಿಜೆಪಿ ಟಿಆರ್ ಎಸ್ ಮತ್ತು ಓವೈಸಿಯ ಪಕ್ಷವನ್ನು ಸೋಲಿಸಬೇಕೆಂದು ಪಣ ತೊಟ್ಟು ಪ್ರಚಾರದಲ್ಲಿ ತೊಡಗಿತ್ತು. ಇದರಿಂದಾಗಿ ಬಿಜೆಪಿ ಈಗ ನಿರ್ಣಾಯಕ ಹಂತದಷ್ಟು ಮತ ಪಡೆದು ಗಮನ ಸೆಳೆದಿದೆ. ತ್ರಿಕೋನ ಸ್ಪರ್ಧೆಯಿಂದಾಗಿ ಪಾಲಿಕೆಯ ಅಧಿಕಾರ ಪಡೆಯಲು ಯಾವುದೇ ಎರಡು ಪಕ್ಷಗಳು ಒಗ್ಗೂಡಲೇಬೇಕಾದ ಅನಿವಾರ್ಯ ಎನಿಸುವಂತಾಗಿದೆ. ಬಿಜೆಪಿ ಇದೇ ಮೊದಲ ಬಾರಿಗೆ ಹೈದರಾಬಾದ್ ಪಾಲಿಕೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದಿದೆ.
The ruling Telangana Rashtra Samiti (TRS) has emerged as the single-largest party in the Hyderabad civic polls, winning 55 seats, followed by the BJP which has made significant electoral inroads, winning 48 seats.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm