ಬ್ರೇಕಿಂಗ್ ನ್ಯೂಸ್
06-06-24 10:23 pm HK News Desk ದೇಶ - ವಿದೇಶ
ಚಂಡೀಗಢ, ಜೂನ್ 6: ಬಾಲಿವುಡ್ ನಟಿ, ಬಿಜೆಪಿಯ ನೂತನ ಸಂಸದೆ ಕಂಗನಾ ರನೌತ್ ಮೇಲೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಸಿಬಂದಿಯೊಬ್ಬರು ಹಲ್ಲೆ ನಡೆಸಿದ್ದಾರೆ.
ಸಂಸದೆಯಾದ ಬಳಿಕ ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದು ತಪಾಸಣೆಗೆ ಒಳಗಾಗಿದ್ದಾಗ ಮಹಿಳಾ ಸೆಕ್ಯುರಿಟಿ ಸಿಬಂದಿ ಕುಲ್ವಿಂದರ್ ಸಿಂಗ್ ಎಂಬವರು ಮಾತಿಗೆ ಮಾತು ಬೆಳೆಸಿ ಜಟಾಪಟಿ ನಡೆಸಿದ್ದು, ಆನಂತರ ಕಂಗನಾ ಕೆನ್ನೆಗೆ ಬಾರಿಸಿದ್ದಾರೆ. ಪಂಜಾಬ್ ನಲ್ಲಿ ರೈತರ ಪ್ರತಿಭಟನೆ ವಿಚಾರದಲ್ಲಿ ಕಂಗನಾ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಕುಲ್ವಿಂದರ್ ಕೌರ್ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ತಕ್ಷಣವೇ ಹಲ್ಲೆಗೈದ ಸಿಬಂದಿಯನ್ನು ಅಮಾನತು ಮಾಡಿದ್ದು, ಘಟನೆ ಬಗ್ಗೆ ಎಫ್ಐಆರ್ ದಾಖಲು ಮಾಡಲಾಗಿದೆ. ಕಂಗನಾ ಈ ಬಗ್ಗೆ ವಿಡಿಯೋ ಮಾಡಿ ಟ್ವೀಟ್ ಮಾಡಿದ್ದು, ಪಂಜಾಬಿನಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆಯನ್ನು ಹೇಗೆ ನಿಯಂತ್ರಣ ಮಾಡೋದು ಎಂದು ಪ್ರಶ್ನೆ ಮಾಡಿದ್ದಾರೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿ ಚೆಕ್ ಮಾಡುತ್ತಿದ್ದಾಗ ಘಟನೆ ನಡೆದಿದೆ. ಮಹಿಳಾ ಸಿಬಂದಿಯಿಂದ ತಪಾಸಣೆಗೆ ಕಾಯುತ್ತಿದ್ದಾಗಲೇ ಒಬ್ಬಾಕೆ ಬಂದು ಹಲ್ಲೆ ನಡೆಸಿದ್ದಾಳೆ. ನನ್ನನ್ನು ತುಚ್ಛವಾಗಿ ನಿಂದಿಸಿದ್ದಾಳೆ. ಪ್ರಶ್ನೆ ಮಾಡಿದ್ದಕ್ಕೆ, ನಾನು ಪಂಜಾಬಿ ರೈತರ ಪರವಾಗಿದ್ದೇನೆ ಎಂದು ಆಕೆ ತಿಳಿಸಿದ್ದಾನೆ. ನಾನು ಸ್ವಸ್ಥಳಿದ್ದೇನೆ. ಆದರೆ ಪ್ರಶ್ನೆ ಇರುವುದು, ಪಂಜಾಬಿನಲ್ಲಿ ಬೆಳೆಯುತ್ತಿರುವ ಈ ರೀತಿಯ ಆತಂಕವಾದ ಮತ್ತು ಅಲ್ಲಿನ ಜನರಲ್ಲಿ ಹಿಂಸೆಯ ಬಗ್ಗೆ ಎಂದು ಹೇಳಿದ್ದಾರೆ.
ಇದೇ ವೇಳೆ, ಮತ್ತೊಂದು ವಿಡಿಯೋ ವೈರಲ್ ಆಗಿದ್ದು ಅದರಲ್ಲಿ ಹಲ್ಲೆಗೈದ ಮಹಿಳಾ ಸಿಬಂದಿ ತನ್ನ ತಾಯಿಯೂ ಅಂದು ರೈತರ ಪ್ರತಿಭಟನೆಯಲ್ಲಿದ್ದರು, ಅದಕ್ಕಾಗಿ ಸಿಟ್ಟು ಇತ್ತು ಎಂಬ ಮಾತನ್ನು ಹೇಳುತ್ತಿದ್ದಾಳೆ. ಆಕೆಯನ್ನು ಕೂಡಲೇ ಹಿರಿಯ ಅಧಿಕಾರಿಗಳು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ದೆಹಲಿಗೆ ತೆರಳಿದ ಬಳಿಕ ಕಂಗನಾ ರನೌತ್ ಅವರು ಸಿಐಎಸ್ಎಫ್ ಡಿಜಿ ನೈನಾ ಸಿಂಗ್ ಮತ್ತಿತರ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದು, ಘಟನೆಯ ಬಗ್ಗೆ ವಿವರಿಸಿದ್ದಾರೆ. ಕಂಗನಾ ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ.
Kangana Ranaut, Bollywood actor and BJP’s MP-elect from Himachal Pradesh's Mandi, on Thursday alleged that a CISF security official at Chandigarh Airport slapped her while she was travelling to Delhi.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm