ಬ್ರೇಕಿಂಗ್ ನ್ಯೂಸ್
06-06-24 10:23 pm HK News Desk ದೇಶ - ವಿದೇಶ
ಚಂಡೀಗಢ, ಜೂನ್ 6: ಬಾಲಿವುಡ್ ನಟಿ, ಬಿಜೆಪಿಯ ನೂತನ ಸಂಸದೆ ಕಂಗನಾ ರನೌತ್ ಮೇಲೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಸಿಬಂದಿಯೊಬ್ಬರು ಹಲ್ಲೆ ನಡೆಸಿದ್ದಾರೆ.
ಸಂಸದೆಯಾದ ಬಳಿಕ ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದು ತಪಾಸಣೆಗೆ ಒಳಗಾಗಿದ್ದಾಗ ಮಹಿಳಾ ಸೆಕ್ಯುರಿಟಿ ಸಿಬಂದಿ ಕುಲ್ವಿಂದರ್ ಸಿಂಗ್ ಎಂಬವರು ಮಾತಿಗೆ ಮಾತು ಬೆಳೆಸಿ ಜಟಾಪಟಿ ನಡೆಸಿದ್ದು, ಆನಂತರ ಕಂಗನಾ ಕೆನ್ನೆಗೆ ಬಾರಿಸಿದ್ದಾರೆ. ಪಂಜಾಬ್ ನಲ್ಲಿ ರೈತರ ಪ್ರತಿಭಟನೆ ವಿಚಾರದಲ್ಲಿ ಕಂಗನಾ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಕುಲ್ವಿಂದರ್ ಕೌರ್ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ತಕ್ಷಣವೇ ಹಲ್ಲೆಗೈದ ಸಿಬಂದಿಯನ್ನು ಅಮಾನತು ಮಾಡಿದ್ದು, ಘಟನೆ ಬಗ್ಗೆ ಎಫ್ಐಆರ್ ದಾಖಲು ಮಾಡಲಾಗಿದೆ. ಕಂಗನಾ ಈ ಬಗ್ಗೆ ವಿಡಿಯೋ ಮಾಡಿ ಟ್ವೀಟ್ ಮಾಡಿದ್ದು, ಪಂಜಾಬಿನಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆಯನ್ನು ಹೇಗೆ ನಿಯಂತ್ರಣ ಮಾಡೋದು ಎಂದು ಪ್ರಶ್ನೆ ಮಾಡಿದ್ದಾರೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿ ಚೆಕ್ ಮಾಡುತ್ತಿದ್ದಾಗ ಘಟನೆ ನಡೆದಿದೆ. ಮಹಿಳಾ ಸಿಬಂದಿಯಿಂದ ತಪಾಸಣೆಗೆ ಕಾಯುತ್ತಿದ್ದಾಗಲೇ ಒಬ್ಬಾಕೆ ಬಂದು ಹಲ್ಲೆ ನಡೆಸಿದ್ದಾಳೆ. ನನ್ನನ್ನು ತುಚ್ಛವಾಗಿ ನಿಂದಿಸಿದ್ದಾಳೆ. ಪ್ರಶ್ನೆ ಮಾಡಿದ್ದಕ್ಕೆ, ನಾನು ಪಂಜಾಬಿ ರೈತರ ಪರವಾಗಿದ್ದೇನೆ ಎಂದು ಆಕೆ ತಿಳಿಸಿದ್ದಾನೆ. ನಾನು ಸ್ವಸ್ಥಳಿದ್ದೇನೆ. ಆದರೆ ಪ್ರಶ್ನೆ ಇರುವುದು, ಪಂಜಾಬಿನಲ್ಲಿ ಬೆಳೆಯುತ್ತಿರುವ ಈ ರೀತಿಯ ಆತಂಕವಾದ ಮತ್ತು ಅಲ್ಲಿನ ಜನರಲ್ಲಿ ಹಿಂಸೆಯ ಬಗ್ಗೆ ಎಂದು ಹೇಳಿದ್ದಾರೆ.
ಇದೇ ವೇಳೆ, ಮತ್ತೊಂದು ವಿಡಿಯೋ ವೈರಲ್ ಆಗಿದ್ದು ಅದರಲ್ಲಿ ಹಲ್ಲೆಗೈದ ಮಹಿಳಾ ಸಿಬಂದಿ ತನ್ನ ತಾಯಿಯೂ ಅಂದು ರೈತರ ಪ್ರತಿಭಟನೆಯಲ್ಲಿದ್ದರು, ಅದಕ್ಕಾಗಿ ಸಿಟ್ಟು ಇತ್ತು ಎಂಬ ಮಾತನ್ನು ಹೇಳುತ್ತಿದ್ದಾಳೆ. ಆಕೆಯನ್ನು ಕೂಡಲೇ ಹಿರಿಯ ಅಧಿಕಾರಿಗಳು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ದೆಹಲಿಗೆ ತೆರಳಿದ ಬಳಿಕ ಕಂಗನಾ ರನೌತ್ ಅವರು ಸಿಐಎಸ್ಎಫ್ ಡಿಜಿ ನೈನಾ ಸಿಂಗ್ ಮತ್ತಿತರ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದು, ಘಟನೆಯ ಬಗ್ಗೆ ವಿವರಿಸಿದ್ದಾರೆ. ಕಂಗನಾ ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ.
Kangana Ranaut, Bollywood actor and BJP’s MP-elect from Himachal Pradesh's Mandi, on Thursday alleged that a CISF security official at Chandigarh Airport slapped her while she was travelling to Delhi.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am