ಬ್ರೇಕಿಂಗ್ ನ್ಯೂಸ್
08-06-24 08:13 pm HK News Desk ದೇಶ - ವಿದೇಶ
ಲಕ್ನೋ, ಜೂನ್ 8: ಹಿಂದುಗಳನ್ನು ಪ್ರಚೋದಿಸುವ ಉದ್ದೇಶದಿಂದ ಮುಸ್ಲಿಮ್ ವ್ಯಕ್ತಿಯಂತೆ ವೇಷ ಹಾಕಿ ವಿಡಿಯೋ ಮಾಡಿ ಕೋಮು ವೈಷಮ್ಯಕ್ಕೆ ಸಂಚು ರೂಪಿಸಿದ ಘಟನೆ ಅಯೋಧ್ಯೆಯಲ್ಲಿ ನಡೆದಿದ್ದು ಆರೋಪಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನ ಧೀರೇಂದ್ರ ರಾಘವ್ ಎಂದು ಗುರುತಿಸಲಾಗಿದೆ.
ಮುಸ್ಲಿಮರ ರೀತಿ ಸ್ಕಲ್ ಕ್ಯಾಪ್ ಧರಿಸಿ ವ್ಯಕ್ತಿ ಹಿಂದೂಗಳನ್ನು ಉದ್ದೇಶಿಸಿ ಮಾತನಾಡುವ ವಿಡಿಯೋ ಭಾರೀ ವೈರಲ್ ಆಗಿತ್ತು. ತನ್ನನ್ನು ಮುಸ್ಲಿಂ ವ್ಯಕ್ತಿ ಎಂದು ಹೇಳಿಕೊಂಡಿದ್ದಲ್ಲದೆ, ಅಯೋಧ್ಯೆಯ ಹಿಂದೂಗಳನ್ನು ಎರಡು ಮುಖದವರು ಎಂದು ಕರೆದು ಎತ್ತಿಕಟ್ಟುವ ಪ್ರಯತ್ನ ಮಾಡಿದ್ದಾನೆ ಎನ್ನಲಾಗಿದೆ. ರಾಹುಲ್ ಗಾಂಧಿ ಅಧಿಕಾರಕ್ಕೆ ಬಂದಿದ್ದರೆ, ಮುಸ್ಲಿಮರಿಗೆ ಮೀಸಲಾತಿ ನೀಡುತ್ತಿದ್ದರು. ಒಬ್ಬ ನಾಯಕ ನಮಗೆ ಮಸೀದಿ ನಿರ್ಮಿಸಿ ಕೊಟ್ಟರೆ, ಅಂಥವರನ್ನು ನಾವು ಮರೆಯುವುದಿಲ್ಲ. ಆದರೆ ನೀವು ಮೋದಿ ಎಲ್ಲವನ್ನು ಮಾಡಿಕೊಟ್ಟರೂ ಮತ ಹಾಕಿಲ್ಲ ಎಂದು ವಿಡಿಯೋದಲ್ಲಿ ಹೇಳಿದ್ದ.

ಚುನಾವಣೆಗೆ ಕೆಲ ತಿಂಗಳ ಹಿಂದೆ ರಾಮಮಂದಿರ ಉದ್ಘಾಟನೆಯಾಗಿದ್ದರೂ, ಅಯೋಧ್ಯೆಯಲ್ಲಿ ಬಿಜೆಪಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಈ ವಿಡಿಯೋ ವೈರಲ್ ಆಗಿತ್ತು. ಇದನ್ನು ದೃಢೀಕರಿಸುವಂತೆ ಕೋರಿ ಹಲವು ಮಂದಿ ಸಂದೇಹಗಳನ್ನು ವ್ಯಕ್ತಪಡಿಸಿದ್ದರು. ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿ ಬಗ್ಗೆ ಶೋಧ ನಡೆಸಿದ ಪೊಲೀಸರು, ಧೀರೇಂದ್ರ ರಾಘವ್ ನನ್ನ ಬಂಧಿಸಿದ್ದಾರೆ
ಮುಸ್ಲಿಮರ ವೇಷ ಹಾಕಿ ಹಿಂದೂಗಳ ಮೇಲೆ ಎತ್ತಿಕಟ್ಟುವ ರೀತಿ ಟೀಕಿಸಿ ಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.
An Agra Court on Friday sent Dhirendra Raghav to judicial custody for allegedly inciting communal tension after the local police detained him for making a video abusing the Hindu community. The man had made the video pretending to an extremist in traditional Muslim attire.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm