ಬ್ರೇಕಿಂಗ್ ನ್ಯೂಸ್
08-06-24 09:28 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 8: ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಪಟ್ಟಕ್ಕೇರಲಿದ್ದು, ಭಾನುವಾರ ಸಂಜೆ ಐತಿಹಾಸಿಕ ಸಮಾರಂಭಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಬಳಿಕ ಮೂರು ಬಾರಿ ಪ್ರಧಾನಿಯಾದ ದಾಖಲೆಯನ್ನು ಮೋದಿ ಈ ಮೂಲಕ ಸರಿಗಟ್ಟಲಿದ್ದಾರೆ.
ಐತಿಹಾಸಿಕ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ವಿವಿಧ ದೇಶಗಳ ಗಣ್ಯರು ಆಗಮಿಸಲಿದ್ದಾರೆ. ಭಾರತದ ನೆರೆಯ ದೇಶಗಳಾದ ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ, ಮಾರಿಷಸ್, ಭೂತಾನ್, ಸೀಶೆಲ್ಸ್ ದೇಶದ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಈಗಾಗಲೇ ಶನಿವಾರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ದೆಹಲಿಗೆ ಆಗಮಿಸಿದ್ದಾರೆ.
ಸೀಶೆಲ್ ಉಪಾಧ್ಯಕ್ಷ ವಿನ್ಸೆಂಟ್ ಮಾರಿಟಾನ್ ಶನಿವಾರ ರಾತ್ರಿ ಆಗಮಿಸಲಿದ್ದಾರೆ. ಮಾರಿಷಸ್ ಪ್ರಧಾನಿ ಭಾನುವಾರ ಬೆಳಗ್ಗೆ ಆಗಮಿಸಲಿದ್ದಾರೆ. ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಭಾರತದ ಆಹ್ವಾನ ಸ್ವೀಕರಿಸಿದ್ದು, ಭಾನುವಾರ ಮಧ್ಯಾಹ್ನ ಆಗಮಿಸುವ ನಿರೀಕ್ಷೆಯಿದೆ. ಭೂತಾನ್ ಪ್ರಧಾನಿ ಶೇರಿಂಗ್ ತೋಗ್ಬೆ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರೂ ಭಾನುವಾರ ಬೆಳಗ್ಗೆ ಆಗಮಿಸುವುದನ್ನು ಖಚಿತಪಡಿಸಿದ್ದಾರೆ. ನೇಪಾಳ ಪ್ರಧಾನಿ ಪುಷ್ಪ ಕಮಲ್ ಧಮಾಲ್ ಅವರು ಭಾನುವಾರ ಸಂಜೆ ದೆಹಲಿಗೆ ಆಗಮಿಸಲಿದ್ದಾರೆ.
ನೆರೆಹೊರೆಯವರು ಫಸ್ಟ್ ಅನ್ನುವ ನೆಲೆಯಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಸಾರ್ಕ್ ನಾಯಕರು ಮೋದಿ ಮೂರನೇ ಬಾರಿಗೆ ಪ್ರಧಾನಿ ಸ್ಥಾನಕ್ಕೇರುವ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಒಕ್ಕೂಟ 293 ಸ್ಥಾನಗಳನ್ನು ಪಡೆದು ಸರಕಾರ ರಚಿಸಲು ಮುಂದಾಗಿದೆ.
India has invited several leaders from neighbouring countries to attend the swearing-in ceremony of Narendra Modi, who is set to become the Prime Minister for a third consecutive term. The ceremony will take place on Sunday, June 9 at 7:15 pm at Rashtrapati Bhavan.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm