ಬ್ರೇಕಿಂಗ್ ನ್ಯೂಸ್
09-06-24 09:36 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 8: ಮೋದಿ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಸಿಗದೇ ಇದ್ದುದಕ್ಕೆ ಎನ್ ಸಿಪಿ ಅಜಿತ್ ಪವಾರ್ ಬಣ ಅಸಮಾಧಾನಗೊಂಡಿದೆ. ಕೇಂದ್ರದ ಕಡೆಯಿಂದ ರಾಜ್ಯ ಸಚಿವ ಸ್ಥಾನ ನೀಡುವ ಬಗ್ಗೆ ಆಫರ್ ಬಂದಿದ್ದನ್ನು ಅಜಿತ್ ಪವಾರ್ ನಿರಾಕರಿಸಿದ್ದಾರೆ.
ರಾಜ್ಯ ಸಚಿವ ಸ್ಥಾನ ನೀಡುವುದು ನಮಗೆ ಹಿನ್ನಡೆ ಎಂದು ಭಾವಿಸುತ್ತೇವೆ. ಕ್ಯಾಬಿನೆಟ್ ಸಚಿವ ಸ್ಥಾನ ಸಿಗಬೇಕೆಂದು ನಮ್ಮ ಬೇಡಿಕೆ. ಅದಕ್ಕಾಗಿ ಕಾಯಲು ಸಿದ್ಧರಿದ್ದೇವೆ ಎಂದು ಅಜಿತ್ ಪವಾರ್ ಹೇಳಿದ್ದಾರೆ. ಅಜಿತ್ ಪವಾರ್ ಬಣದ ಪ್ರಫುಲ್ ಪಟೇಲ್ ಅವರಿಗೆ ರಾಜ್ಯ ಸಚಿವ ಸ್ಥಾನ (ಸ್ವತಂತ್ರ ಖಾತೆ) ನೀಡುವ ಬಗ್ಗೆ ಆಫರ್ ನೀಡಲಾಗಿತ್ತು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಘಟಕದ ಬಿಜೆಪಿ ರಾಜ್ಯಾಧ್ಯಕ್ಷ ದೇವೇಂದ್ರ ಫಡ್ನವಿಸ್, ಮುಂದಿನ ಬಾರಿ ಸಚಿವ ಸಂಪುಟ ವಿಸ್ತರಣೆಗೊಳ್ಳುವ ಸಂದರ್ಭದಲ್ಲಿ ಆದ್ಯತೆ ಸಿಗಬಹುದು. ಸ್ವತಂತ್ರ ರಾಜ್ಯ ಖಾತೆಯ ಆಫರ್ ನೀಡಲಾಗಿತ್ತು. ಆದರೆ ನಿರಾಕರಣೆ ಮಾಡಿದ್ದಾರೆ. ಮೈತ್ರಿ ಪಕ್ಷಗಳ ಸರಕಾರ ರಚನೆ ಸಂದರ್ಭದಲ್ಲಿ ಹಲವು ವಿಚಾರಗಳನ್ನು ಪರಿಗಣಿಸಬೇಕಾಗುತ್ತದೆ. ಒಂದು ಪಕ್ಷದ ಕಾರಣಕ್ಕಾಗಿ ಮಾನದಂಡಗಳನ್ನು ಉಲ್ಲಂಘಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಹಾಗಿದ್ದರೂ, ಅಜಿತ್ ಪವಾರ್ ಅವರು ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಪ್ರಫುಲ್ ಪಟೇಲ್ ಈ ಹಿಂದೆ ಕೇಂದ್ರ ಸಚಿವರಾಗಿ ಕರ್ತವ್ಯ ನಿಭಾಯಿಸಿದ್ದಾರೆ. ಹಾಗಿರುವಾಗ, ಈಗ ರಾಜ್ಯ ಖಾತೆಯನ್ನು ಒಪ್ಪಿಕೊಳ್ಳುವುದು ಸರಿಯಾಗಲ್ಲ. ನಾವು ಈಗಾಗಲೇ ಬಿಜೆಪಿಗೆ ತಿಳಿಸಿದ್ದೇವೆ, ಕಾಯಲು ಸಿದ್ಧರಿದ್ದೇವೆ. ಆದರೆ ನಮಗೆ ಕ್ಯಾಬಿನೆಟ್ ಸ್ಥಾನವೇ ಕೊಡಬೇಕು ಎಂದು ಅಜಿತ್ ಪವಾರ್ ಹೇಳಿದ್ದಾರೆ. ಶರದ್ ಪವಾರ್ ನೇತೃತ್ವದ ಎನ್ ಸಿಪಿ ಪಕ್ಷದಿಂದ ಸಿಡಿದು ಹೊರಬಂದಿರುವ ಅಜಿತ್ ಪವಾರ್, ಈ ಬಾರಿ ಬಿಜೆಪಿ ಮೈತ್ರಿಕೂಟದಲ್ಲಿದ್ದು ಚುನಾವಣೆ ಎದುರಿಸಿದ್ದರು.
The Ajit Pawar camp of the NCP, part of Mahayuti alliance in Maharashtra, has been left disappointed after their request for a Cabinet berth in the new Modi government was not accommodated. The NCP was instead offered the post of a Minister of State with independent charge, which party leader Praful Patel called a “demotion”.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am