ಬ್ರೇಕಿಂಗ್ ನ್ಯೂಸ್
14-06-24 08:16 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 14: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಯಾಗಿರುವುದಕ್ಕೆ ನಾಯಕರ ದುರಹಂಕಾರವೇ ಕಾರಣ ಎಂದು ಮತ್ತೊಬ್ಬ ಆರೆಸ್ಸೆಸ್ ನಾಯಕ ಇಂದ್ರೇಶ್ ಕುಮಾರ್ ಟೀಕಿಸಿದ್ದಾರೆ. ರಾಮನ ಮೇಲೆ ಭಕ್ತಿ ಇಟ್ಟ ಕಾರಣಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ದೊಡ್ಡ ಪಕ್ಷವಾಗಿಸಿದ. ಆದರೆ ದುರಹಂಕಾರ ತೋರಿದ್ದಕ್ಕಾಗಿ ರಾಮನೇ ಅವರನ್ನು 241ಕ್ಕೆ ಸೀಮಿತಗೊಳಿಸಿದ ಎಂದು ಬಿಜೆಪಿ ಹೆಸರೆತ್ತದೆ ಇಂದ್ರೇಶ್ ಕುಮಾರ್ ಟೀಕಿಸಿದ್ದಾರೆ.
ಜೈಪುರದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಇಂದ್ರೇಶ್ ಕುಮಾರ್ ಈ ಮಾತುಗಳನ್ನಾಡಿದ್ದಾರೆ. ಇತ್ತೀಚೆಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ನಿಜವಾದ ಜನ ಸೇವಕನಿಗೆ ಅಹಂಕಾರ ಇರಬಾರದು ಎಂದು ಹೇಳಿದ ಮಾತುಗಳನ್ನೇ ಉದ್ಧರಿಸುವಂತೆ ಇಂದ್ರೇಶ್ ಕುಮಾರ್ ಟೀಕೆ ಮಾಡಿದ್ದಾರೆ. ಇದೇ ವೇಳೆ, ವಿರೋಧಿ ಇಂಡಿಯಾ ಒಕ್ಕೂಟದ ಹೆಸರೆತ್ತದೆ, ರಾಮನ ಬಗ್ಗೆ ನಂಬಿಕೆ ಇರಿಸದವರು ಎಲ್ಲ ಒಟ್ಟು ಸೇರಿದರೂ ಅವರನ್ನು ಕೇವಲ 234ಕ್ಕೆ ನಿಲ್ಲಿಸಿಬಿಟ್ಟ. ದೇವರ ತೀರ್ಪು ಸತ್ಯವನ್ನು ತೋರಿಸಿದೆ. ನಾವದನ್ನು ಎಂಜಾಯ್ ಮಾಡಬೇಕು ಎಂದು ಇಂಡಿಯಾ ಒಕ್ಕೂಟ 234 ಸ್ಥಾನ ಪಡೆದಿರುವುದನ್ನು ಪರೋಕ್ಷವಾಗಿ ಕುಟುಕಿದ್ದಾರೆ.
ಆರೆಸ್ಸೆಸ್ ನಾಯಕರ ಟೀಕೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ಆರೆಸ್ಸೆಸ್ ಟೀಕೆಯನ್ನು ಮೋದಿಯವರೇ ಗಂಭೀರವಾಗಿ ಪರಿಗಣಿಸಿಲ್ಲ. ನಾವು ಯಾಕೆ ಸ್ವೀಕರಿಸಬೇಕು. ಸರಿಯಾದ ಸಮಯದಲ್ಲಿ ಇಂಥ ಮಾತುಗಳನ್ನು ಆಡುತ್ತಿದ್ದರೆ ಎಲ್ಲರೂ ಗಂಭೀರವಾಗಿ ತೆಗೆದುಕೊಳ್ಳುತ್ತಿದ್ದರು. ಹೇಳಬೇಕಿದ್ದ ಸಮಯದಲ್ಲಿ ಸೈಲಂಟ್ ಇದ್ದರು. ಅಧಿಕಾರವನ್ನೂ ಅನುಭವಿಸಿದ್ದರು. ಈಗ ಯಾರು ಅವರ ಮಾತನ್ನು ಕೇಳುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ.
In signs of an intensifying rift between the Bharatiya Janata Party and its ideological mentor, Rashtriya Swayamsevak Sangh leader Indresh Kumar on Thursday sought to take a critical view of the saffron party’s lower-than-expected Lok Sabha tally, terming it a punishment by Lord Ram over the party’s “arrogance”.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm