ಬ್ರೇಕಿಂಗ್ ನ್ಯೂಸ್
14-06-24 08:16 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 14: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಯಾಗಿರುವುದಕ್ಕೆ ನಾಯಕರ ದುರಹಂಕಾರವೇ ಕಾರಣ ಎಂದು ಮತ್ತೊಬ್ಬ ಆರೆಸ್ಸೆಸ್ ನಾಯಕ ಇಂದ್ರೇಶ್ ಕುಮಾರ್ ಟೀಕಿಸಿದ್ದಾರೆ. ರಾಮನ ಮೇಲೆ ಭಕ್ತಿ ಇಟ್ಟ ಕಾರಣಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ದೊಡ್ಡ ಪಕ್ಷವಾಗಿಸಿದ. ಆದರೆ ದುರಹಂಕಾರ ತೋರಿದ್ದಕ್ಕಾಗಿ ರಾಮನೇ ಅವರನ್ನು 241ಕ್ಕೆ ಸೀಮಿತಗೊಳಿಸಿದ ಎಂದು ಬಿಜೆಪಿ ಹೆಸರೆತ್ತದೆ ಇಂದ್ರೇಶ್ ಕುಮಾರ್ ಟೀಕಿಸಿದ್ದಾರೆ.
ಜೈಪುರದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಇಂದ್ರೇಶ್ ಕುಮಾರ್ ಈ ಮಾತುಗಳನ್ನಾಡಿದ್ದಾರೆ. ಇತ್ತೀಚೆಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ನಿಜವಾದ ಜನ ಸೇವಕನಿಗೆ ಅಹಂಕಾರ ಇರಬಾರದು ಎಂದು ಹೇಳಿದ ಮಾತುಗಳನ್ನೇ ಉದ್ಧರಿಸುವಂತೆ ಇಂದ್ರೇಶ್ ಕುಮಾರ್ ಟೀಕೆ ಮಾಡಿದ್ದಾರೆ. ಇದೇ ವೇಳೆ, ವಿರೋಧಿ ಇಂಡಿಯಾ ಒಕ್ಕೂಟದ ಹೆಸರೆತ್ತದೆ, ರಾಮನ ಬಗ್ಗೆ ನಂಬಿಕೆ ಇರಿಸದವರು ಎಲ್ಲ ಒಟ್ಟು ಸೇರಿದರೂ ಅವರನ್ನು ಕೇವಲ 234ಕ್ಕೆ ನಿಲ್ಲಿಸಿಬಿಟ್ಟ. ದೇವರ ತೀರ್ಪು ಸತ್ಯವನ್ನು ತೋರಿಸಿದೆ. ನಾವದನ್ನು ಎಂಜಾಯ್ ಮಾಡಬೇಕು ಎಂದು ಇಂಡಿಯಾ ಒಕ್ಕೂಟ 234 ಸ್ಥಾನ ಪಡೆದಿರುವುದನ್ನು ಪರೋಕ್ಷವಾಗಿ ಕುಟುಕಿದ್ದಾರೆ.
ಆರೆಸ್ಸೆಸ್ ನಾಯಕರ ಟೀಕೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ಆರೆಸ್ಸೆಸ್ ಟೀಕೆಯನ್ನು ಮೋದಿಯವರೇ ಗಂಭೀರವಾಗಿ ಪರಿಗಣಿಸಿಲ್ಲ. ನಾವು ಯಾಕೆ ಸ್ವೀಕರಿಸಬೇಕು. ಸರಿಯಾದ ಸಮಯದಲ್ಲಿ ಇಂಥ ಮಾತುಗಳನ್ನು ಆಡುತ್ತಿದ್ದರೆ ಎಲ್ಲರೂ ಗಂಭೀರವಾಗಿ ತೆಗೆದುಕೊಳ್ಳುತ್ತಿದ್ದರು. ಹೇಳಬೇಕಿದ್ದ ಸಮಯದಲ್ಲಿ ಸೈಲಂಟ್ ಇದ್ದರು. ಅಧಿಕಾರವನ್ನೂ ಅನುಭವಿಸಿದ್ದರು. ಈಗ ಯಾರು ಅವರ ಮಾತನ್ನು ಕೇಳುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ.
In signs of an intensifying rift between the Bharatiya Janata Party and its ideological mentor, Rashtriya Swayamsevak Sangh leader Indresh Kumar on Thursday sought to take a critical view of the saffron party’s lower-than-expected Lok Sabha tally, terming it a punishment by Lord Ram over the party’s “arrogance”.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm