ಬ್ರೇಕಿಂಗ್ ನ್ಯೂಸ್
17-06-24 02:32 pm HK News Desk ದೇಶ - ವಿದೇಶ
ಡಾರ್ಜಿಲಿಂಗ್, ಜೂ 17: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಅಸ್ಸಾಂನ ಸಿಲ್ಚಾರ್ನಿಂದ ಕಲ್ಕತ್ತಾಗೆ ತೆರಳುತ್ತಿದ್ದ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲಿಗೆ, ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಹಾಗೂ 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ನ್ಯೂ ಜಲ್ಪೈಗುರಿಗೆ ಸಮೀಪವಿರುವ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು, ಪ್ಯಾಸೆಂಜರ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಪ್ಯಾಸೆಂಜರ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿವೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದ್ದು, 15ಕ್ಕೂ ಹೆಚ್ಚು ಆಂಬ್ಯಲೆನ್ಸ್ಗಳು ಸ್ಥಳದಲ್ಲಿವೆ.

)

ಕಾಂಚನಜುಂಗಾ ಎಕ್ಸ್ಪ್ರೆಸ್ ಅಸ್ಸಾಂನ ಸಿಲ್ಚಾರ್ನಿಂದ ಕಲ್ಕತ್ತಾದ ಸೀಲ್ದಾ ಮಧ್ಯೆ ಚಲಿಸುತ್ತದೆ. ಸೀಲ್ದಾಗೆ ಬರುತ್ತಿದ್ದ ವೇಳೆ ಇಂದು ಬೆಳಗ್ಗೆ 8.45ರ ಸುಮಾರಿಗೆ ನ್ಯೂ ಜಲ್ಪೈಗುರಿ ಜಂಕ್ಷನ್ ಮುಂದೆ ಕತಿಹಾರ್ ರೈಲ್ವೆ ವಿಭಾಗದ ರಂಗಪಾಣಿ ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆಯ(NFR) ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸಬ್ಯಸಾಚಿ ಡಿ. ತಿಳಿಸಿದ್ದಾರೆ.


ಎನ್ಎಫ್ಆರ್ ವಲಯದಲ್ಲಿ ದುರದೃಷ್ಟಕರ ಅಪಘಾತ ಸಂಭವಿಸಿದೆ. ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ರೈಲ್ವೆ, ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ನಿಕಟ ಸಮನ್ವಯದಲ್ಲಿ ರಕ್ಷಣಾ ಕಾರ್ಯವನ್ನು ಮಾಡುತ್ತಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ" ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.
ವಿಷಾದ ವ್ಯಕ್ತಪಡಿಸಿದ ಪ್ರಧಾನಿ ಮೋದಿ ;
ಭೀಕರ ರೈಲು ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತ ದುಃಖಕರವಾಗಿದೆ. ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಘಟನೆಯ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸಂತ್ರಸ್ತರ ನೆರವಿಗಾಗಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅಪಘಾತ ನಡೆದ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿಸಿದರು.
As many as 15 people have died and about 60 others were injured after a goods train rammed into the Kanchanjungha Express in West Bengal’s Darjeeling district on Monday morning. The accident took place at around 9 am near Rangapani, close to New Jalpaiguri station, according to a senior official of the North Frontier Railway.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm