ಬ್ರೇಕಿಂಗ್ ನ್ಯೂಸ್
17-06-24 10:56 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 17: ಲೋಕಸಭೆ ಚುನಾವಣೆಯಲ್ಲಿ ಎರಡು ಕಡೆ ಗೆದ್ದಿದ್ದ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರವನ್ನು ಕೊನೆಗೂ ತ್ಯಜಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಈ ಬಗ್ಗೆ ಪ್ರಕಟಣೆ ನೀಡಲಾಗಿದ್ದು, ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವುಗೊಳಿಸಲಿದ್ದು, ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಹೇಳಿದೆ.
ರಾಹುಲ್ ಗಾಂಧಿ ಅವರಿಂದ ತೆರವಾಗಲಿರುವ ವಯನಾಡು ಲೋಕಸಭೆ ಕ್ಷೇತ್ರದಿಂದ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಕಟಿಸಿದೆ. ಆಮೂಲಕ ಪ್ರಿಯಾಂಕಾ ಕಡೆಗೂ ಚುನಾವಣಾ ರಾಜಕಾರಣಕ್ಕೆ ಪ್ರವೇಶ ಮಾಡುವುದು ಖಚಿತವಾಗಿದೆ.
ನಿಯಮಗಳ ಪ್ರಕಾರ, ಜೂನ್ 4 ರಂದು ಹೊರಬಿದ್ದ ಲೋಕಸಭೆಯ ಫಲಿತಾಂಶದ 14 ದಿನಗಳಲ್ಲಿ ರಾಹುಲ್ ಗಾಂಧಿ ಒಂದು ಸ್ಥಾನವನ್ನು ಖಾಲಿ ಮಾಡಬೇಕಾಗಿತ್ತು. ಇದೀಗ ರಾಹುಲ್ ಗಾಂಧಿ ರಾಯ್ ಬರೇಲಿ ಸಂಸದ ಸ್ಥಾನವನ್ನು ಉಳಿಸಿಕೊಂಡಿದ್ದು ಮುಸ್ಲಿಂ ಬಾಹುಳ್ಯದ ಕಾಂಗ್ರೆಸ್ ಭದ್ರಕೋಟೆ ವಯನಾಡು ಕ್ಷೇತ್ರದಲ್ಲಿ ಮರು ಚುನಾವಣೆಗೆ ಅವಕಾಶ ನೀಡಿದ್ದಾರೆ.
ಪ್ರಿಯಾಂಕಾ ಅವರು ವಯನಾಡು ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಬಹುತೇಕ ಪಕ್ಕಾ ಆಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಟ್ವೀಟ್ ಮಾಡಿದ್ದು ಕಾನೂನಿನ ಪ್ರಕಾರ ರಾಹುಲ್ ಅವರು ಒಂದನ್ನು ತೆರವು ಮಾಡಬೇಕು. ಅದರಂತೆ, ರಾಯ್ ಬರೇಲಿಯನ್ನು ರಾಹುಲ್ ಉಳಿಸಿಕೊಂಡಿದ್ದು, ಪ್ರಿಯಾಂಕಾ ವಯನಾಡಿನಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.
ವಯನಾಡು ಕ್ಷೇತ್ರದಲ್ಲಿ ಮುಸ್ಲಿಂ ಮತಗಳು ಅತ್ಯಧಿಕ ಆರು ಲಕ್ಷದಷ್ಟಿದ್ದು ಕಾಂಗ್ರೆಸ್ ಗೆಲುವಿಗೆ ದೊಡ್ಡ ಕೊಡುಗೆ ನೀಡಿದೆ. ಮುಸ್ಲಿಂ ಮತ ಯಾರಿಗೆ ಬೀಳುತ್ತಾ ಅವರು ಗೆಲ್ಲುತ್ತಾರೆ. ಇದೇ ಕಾರಣಕ್ಕೆ ರಾಹುಲ್ ಗೆಲುವಿಗೆ ಇದೇ ಕ್ಷೇತ್ರ ಆಯ್ಕೆ ಮಾಡಲಾಗಿತ್ತು. ಇದೀಗ ಪ್ರಿಯಾಂಕಾ ಸ್ಪರ್ಧಿಸಿದರೂ, ಕಾಂಗ್ರೆಸ್ ಗೆಲ್ಲುವುದು ಖಚಿತ. ಆಮೂಲಕ ಅಣ್ಣ- ತಂಗಿಯ ಜೋಡಿ ಸಂಸತ್ತಿನಲ್ಲಿ ಬಿಜೆಪಿಯನ್ನು ಎದುರಿಸಲು ಸಜ್ಜಾದಂತಿದೆ. ಅಲ್ಲದೆ, 99 ಸದಸ್ಯರನ್ನು ಹೊಂದಿರುವ ಕಾಂಗ್ರೆಸಿಗೆ ನೂರನೇ ಸ್ಥಾನದ ಕೊಡುಗೆ ನೀಡಲಿದ್ದಾರೆ.
ಬಹುತೇಕ ವಿವಿಧ ರಾಜ್ಯಗಳಲ್ಲಿ ತೆರವಾದ ಅಸೆಂಬ್ಲಿ ಕ್ಷೇತ್ರಗಳು ಹಾಗೂ ಲೋಕಸಭೆ ಕ್ಷೇತ್ರಗಳಲ್ಲಿ ಒಂದೇ ಬಾರಿಗೆ ಉಪ ಚುನಾವಣೆ ಘೋಷಣೆಯಾಗಲಿದೆ.
Congress president Rahul Gandhi, who won two seats in the Lok Sabha elections, has finally quit the Wayanad constituency in Kerala. A statement from the Congress party said that Rahul Gandhi will vacate the Wayanad Lok Sabha seat and retain the Rae Bareli seat in Uttar Pradesh.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm