ಬ್ರೇಕಿಂಗ್ ನ್ಯೂಸ್
19-06-24 10:19 pm HK News Desk ದೇಶ - ವಿದೇಶ
ಲಕ್ನೋ, ಜೂನ್ 19: ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅಕ್ಬರ್ ನಗರದಲ್ಲಿ ಮತ್ತೆ ಬುಲ್ಡೋಜರ್ ಸದ್ದು ಮಾಡಿದೆ. ಅಕ್ರಮವಾಗಿ ನಿರ್ಮಿಸಲಾಗಿದ್ದ ಮಸೀದಿ ಮತ್ತು ದೇವಸ್ಥಾನವನ್ನು ತಡರಾತ್ರಿ ಕೆಡವಲಾಗಿದೆ. ಸ್ಥಳೀಯ ಆಡಳಿತ ತಡರಾತ್ರಿಯಲ್ಲಿ ಬುಲ್ಡೋಜರ್ಗಳಿಂದ ಮಸೀದಿ ಮತ್ತು ಮದರಸಾವನ್ನು ನೆಲಸಮಗೊಳಿಸಿದೆ.
ಕಾರ್ಯಾಚರಣೆ ನಡೆಸುವುದಕ್ಕೂ ಮೊದಲು ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಮೂಲೆ ಮೂಲೆಯಲ್ಲಿ ಚೆಕ್ ಪೋಸ್ಟ್ ಅಳವಡಿಸಿದ್ದು, ನಗರದೊಳಕ್ಕೆ ಹೊರಗಿನವರು ಬರದಂತೆ ರಸ್ತೆಗಳನ್ನು ಬಂದ್ ಮಾಡಲಾಗಿತ್ತು.
ಕುಕ್ರೈಲ್ ನದಿಯ ದಂಡೆಯಲ್ಲಿ ನಿರ್ಮಿಸಲಾದ ಅಕ್ರಮ ಕಟ್ಟಡಗಳ ಮೇಲೆ ಬುಲ್ಡೋಜರ್ಗಳನ್ನು ಬಳಸಲಾಗಿದೆ ಎಂದು ಸ್ಥಳೀಯಾಡಳಿತ ಹೇಳಿದೆ. ಇಲ್ಲಿ ಅಕ್ರಮವಾಗಿ ನಿರ್ಮಿಸಿದ್ದ 1169 ಮನೆಗಳು ಹಾಗೂ 101 ವಾಣಿಜ್ಯ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿ ಡಿಸೆಂಬರ್ 2023 ರಿಂದ ಅಕ್ರಮ ಕಟ್ಟಡಗಳನ್ನು ತೆರವು ಮಾಡುವ ಅಭಿಯಾನ ಕೈಗೊಳ್ಳಲಾಗಿತ್ತು. ಈವರೆಗೆ ಸುಮಾರು 24.5 ಎಕರೆ ಭೂಮಿಯಲ್ಲಿ ನಿರ್ಮಿಸಲಾಗಿದ್ದ 1800ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ.
ಕಂದಾಯ ಅಧಿಕಾರಿಗಳ ಸಮೀಕ್ಷೆಯಲ್ಲಿ ನದಿ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಡಗಳು ನಿರ್ಮಾಣವಾಗಿರುವುದು ಬೆಳಕಿಗೆ ಬಂದಿದೆ. ಯೋಗಿ ಆದಿತ್ಯನಾಥ್ ಸರ್ಕಾರ ಈ ಪ್ರದೇಶವನ್ನು ತೆರವುಗೊಳಿಸಿ ಪರಿಸರ ಪ್ರವಾಸೋದ್ಯಮದ ಕೇಂದ್ರವನ್ನಾಗಿ ಮಾಡಲಿದೆ. ಲಕ್ನೋ ಮೃಗಾಲಯವನ್ನು ಅದೇ ಸ್ಥಳಕ್ಕೆ ಸ್ಥಳಾಂತರಿಸುವ ಯೋಜನೆ ಇದೆ. ಉತ್ತರ ಪ್ರದೇಶ ರಾಜ್ಯ ಸರ್ಕಾರ ಕುಕ್ರೆಲ್ ನದಿ ಪುನರುಜ್ಜೀವನಕ್ಕಾಗಿ ಹೈಕೋರ್ಟ್ ನಿಂದ ಸುಪ್ರೀಂ ಕೋರ್ಟ್ ವರೆಗೆ ಹೋರಾಟ ನಡೆಸಿತ್ತು.
“The demolition work of illegal buildings on the river bed of Kukrail river in Akbarnagar has been completed,” officials of the Lucknow Development Authority (LDA) on June 19 said.“Around 1,169 illegal residential properties and more than 100 commercial properties were demolished using heavy machinery, including bulldozers,” they said.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am