ಬ್ರೇಕಿಂಗ್ ನ್ಯೂಸ್
20-06-24 11:56 am HK News Desk ದೇಶ - ವಿದೇಶ
ನವದೆಹಲಿ, ಜೂನ್.20: ದೇಶದಲ್ಲಿ ‘ನೀಟ್’ ಪರೀಕ್ಷೆ ವಿವಾದಕ್ಕೀಡಾಗಿರುವಾಗಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಎರಡು ದಿನಗಳ ಹಿಂದೆ ನಡೆಸಿದ್ದ ‘ಯುಜಿಸಿ-ನೆಟ್’ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯ ರದ್ದುಪಡಿಸಿದೆ. ದೇಶಾದ್ಯಂತ ಪರೀಕ್ಷೆಯನ್ನು ನಡೆಸಿದ ಒಂದೇ ದಿನದ ಅಂತರದಲ್ಲಿ ರದ್ದುಪಡಿಸುವ ತೀರ್ಮಾನ ತೆಗೆದುಕೊಂಡಿದ್ದು ಅಕ್ರಮದ ಬಗ್ಗೆ ಸಿಬಿಐ ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ.
ದೇಶಾದ್ಯಂತ ಎಲ್ಲ ವಿಶ್ವವಿದ್ಯಾನಿಲಯಗಳು ಮತ್ತು ಸರಕಾರಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಪಡೆಯಲು ಮತ್ತು ಜೂನಿಯರ್ ಸಂಶೋಧನಾ ಫೆಲೋಶಿಪ್ಗೆ ಅರ್ಹತೆಯನ್ನು ನಿರ್ಧರಿಸಲು ಪ್ರತಿ ವರ್ಷ ನಡೆಯುವ ಈ ಪರೀಕ್ಷೆಗೆ ಈ ಬಾರಿ 9 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಜೂನ್ 18ರಂದು ಕರ್ನಾಟಕ ಸೇರಿದಂತೆ ದೇಶಾದ್ಯಂತ ಎಲ್ಲ ರಾಜ್ಯಗಳಲ್ಲಿ ಪರೀಕ್ಷೆ ನಡೆದಿತ್ತು. ಆದರೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಹಲವು ವರ್ಷಗಳ ಬಳಿಕ ಈ ಬಾರಿ ಕಂಪ್ಯೂಟರ್ ಬದಲು ಓಎಂಆರ್ ಪ್ರಶ್ನೆ ಪತ್ರಿಕೆಯ ಮೂಲಕ ಆಫ್ ಲೈನಲ್ಲಿ ಪರೀಕ್ಷೆ ನಡೆದಿತ್ತು.


ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯೂನಿಟ್ನಿಂದ ‘ಪರೀಕ್ಷೆಯಲ್ಲಿ ಅಕ್ರಮ ನಡೆದಿರಬಹುದು’ ಎಂಬ ಮಾಹಿತಿಯನ್ನು ಪಡೆದ ನಂತರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ. 2024ರ ಯುಜಿಸಿ ನೆಟ್ ಮರು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಇಲಾಖೆ ಹೇಳಿದೆ.
ನೀಟ್ ಪರೀಕ್ಷೆಯಲ್ಲು ಅಕ್ರಮ
ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳನ್ನು ಖಾತ್ರಿಪಡಿಸಲು ಇತ್ತೀಚೆಗೆ ನಡೆದ ಯುಜಿಸಿ ನೀಟ್ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದ್ದು ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಕೇಂದ್ರ ಸರಕಾರ ಎಚ್ಚತ್ತುಕೊಂಡಿದೆ. ದೆಹಲಿ, ಬಿಹಾರ, ಪಂಜಾಬ್, ಗುಜರಾತ್ ನಲ್ಲಿ ನೀಟ್ ಪರೀಕ್ಷೆ ಅಕ್ರಮ ನಡೆದಿರುವ ಶಂಕೆಯಿದ್ದು ನೂರಾರು ವಿದ್ಯಾರ್ಥಿಗಳು ಪೂರ್ಣ ಅಂಕ ಪಡೆದಿರುವುದು ಅಕ್ರಮದ ವಾಸನೆ ಎಬ್ಬಿಸಿದೆ. ಕೋಚಿಂಗ್ ಸೆಂಟರ್ ಗಳಿಂದಲೇ ಈ ರೀತಿಯ ಅಕ್ರಮ ನಡೆದಿರುವ ಶಂಕೆಯಿದ್ದು ಉತ್ತರ ಭಾರತದಲ್ಲಿ 15ಕ್ಕು ಹೆಚ್ಚು ಮಂದಿಯನ್ನು ಬಂಧನ ಮಾಡಲಾಗಿದೆ.
Anurag Yadav, the National Eligibility-cum-Entrance Test (NEET) candidate arrested in connection with the result irregularities, has admitted that the leaked question paper provided to him matched the actual exam question paper.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm