ಬ್ರೇಕಿಂಗ್ ನ್ಯೂಸ್
23-06-24 09:39 pm HK News Desk ದೇಶ - ವಿದೇಶ
ನವದೆಹಲಿ, ಜೂನ್.23: ಮೆಡಿಕಲ್, ಇಂಜಿನಿಯರಿಂಗ್ ಸೀಟುಗಳಿಗೆ ಅರ್ಹತೆ ಗಿಟ್ಟಿಸುವ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ದೇಶಾದ್ಯಂತ ವಿವಾದಕ್ಕೆ ಈಡಾಗಿರುವಾಗಲೇ ಈ ಕುರಿತ ತನಿಖೆಯನ್ನು ಕೇಂದ್ರ ಸರಕಾರ ಸಿಬಿಐಗೆ ವಹಿಸಿದೆ. ಇದರ ಬೆನ್ನಲ್ಲೇ ಸಿಬಿಐ ಎಫ್ಐಆರ್ ದಾಖಲು ಮಾಡಿದ್ದು, ಪ್ರತ್ಯೇಕ ತಂಡಗಳನ್ನು ರಚಿಸಿ ಅಕ್ರಮ ಬೆಳಕಿಗೆ ಬಂದಿರುವ ಗುಜರಾತ್ ಮತ್ತು ಬಿಹಾರಗಳಿಗೆ ತಂಡಗಳನ್ನು ಕಳಿಸಿಕೊಟ್ಟಿದೆ.
ಇದೇ ವೇಳೆ, ಅಕ್ರಮ ಆರೋಪ ಕೇಳಿಬಂದಿರುವ ಗುಜರಾತ್, ದೆಹಲಿ, ಹರ್ಯಾಣ, ಬಿಹಾರದ ಕೆಲವು ಸೆಂಟರ್ ಗಳಲ್ಲಿ ಭಾನುವಾರ 1563 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಮಾಡಲಾಗಿದೆ. ಮಧ್ಯಾಹ್ನ 2ರಿಂದ ಸಂಜೆ 5.20ರ ವರೆಗೆ ಪರೀಕ್ಷೆ ನಡೆದಿದ್ದು, 52 ಶೇಕಡಾ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಬಿಹಾರದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆಯನ್ನು ಪಡೆದಿದ್ದಾರೆಂದು ಆರೋಪಕ್ಕೀಡಾದ 17 ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ಡಿಬಾರ್ ಮಾಡಲಾಗಿದೆ. ಇದಕ್ಕೂ ಮುನ್ನ ಗುಜರಾತ್, ದೆಹಲಿ ಸೇರಿ ದೇಶದ ವಿವಿಧೆಡೆ 63 ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ಸಸ್ಪೆಂಡ್ ಮಾಡಲಾಗಿತ್ತು. ಇದರಲ್ಲಿ ಗೋಧ್ರಾ ಜಿಲ್ಲೆಯ 30 ಮಂದಿ ವಿದ್ಯಾರ್ಥಿಗಳಿದ್ದಾರೆ. ಮರು ಪರೀಕ್ಷೆಯ ಫಲಿತಾಂಶ ಜೂನ್ 30ರಂದು ಬರಲಿದೆ.
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ನ್ಯಾಶನಲ್ ಟೆಸ್ಟಿಂಗ್ ಏಜನ್ಸಿಯ ಮುಖ್ಯಸ್ಥರಾಗಿದ್ದ ಡೈರೆಕ್ಟರ್ ಜನರಲ್ ಸುಬೋಧ್ ಸಿಂಗ್ ಅವರನ್ನು ಶನಿವಾರ ಹುದ್ದೆಯಿಂದ ಕಿತ್ತು ಹಾಕಲಾಗಿತ್ತು. ಅಲ್ಲದೆ, ಪರೀಕ್ಷಾ ಮಂಡಳಿಯ ಬಗ್ಗೆ ತನಿಖೆ ನಡೆಸಲು ಮತ್ತು ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಬಗ್ಗೆ ಸಲಹೆ ನೀಡಲು ಇಸ್ರೋ ಮಾಜಿ ಮುಖ್ಯಸ್ಯ ರಾಧಾಕೃಷ್ಣನ್ ನೇತೃತ್ವದ ಏಳು ಮಂದಿ ತಜ್ಞರನ್ನು ಒಳಗೊಂಡ ಕಮಿಟಿಯನ್ನು ರಚಿಸಲಾಗಿದೆ. ಇದಲ್ಲದೆ, ಎನ್ ಟಿಎ ಮುಖ್ಯಸ್ಥರ ಪ್ರಭಾರ ಹೊಣೆಯನ್ನು ಇಂಡಿಯನ್ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ ಡೈರೆಕ್ಟರ್ ಪ್ರದೀಪ್ ಸಿಂಗ್ ಕರೋಲಾ ಅವರಿಗೆ ವಹಿಸಲಾಗಿದೆ.
ಬಿಹಾರ, ಉತ್ತರ ಪ್ರದೇಶ, ಗುಜರಾತ್, ಹರ್ಯಾಣದಲ್ಲಿ ಪ್ರತ್ಯೇಕ ದೂರುಗಳು ದಾಖಲಾಗಿದ್ದು, ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಇದಲ್ಲದೆ, ಹೈಕೋರ್ಟ್, ಸುಪ್ರೀಂ ಕೋರ್ಟಿನಲ್ಲೂ ದೂರು ಸಲ್ಲಿಕೆಯಾಗಿದ್ದು, ಸುಪ್ರೀಂ ಕೋರ್ಟ್ ಉನ್ನತ ಮಟ್ಟದ ಪರೀಕ್ಷೆಗಳಲ್ಲಿ ಅಕ್ರಮಗಳನ್ನು ಸಹಿಸುವುದಿಲ್ಲ ಎಂದು ಕೇಂದ್ರ ಸರಕಾರಕ್ಕೆ ಚಾಟಿ ಬೀಸಿತ್ತು. ಬಿಹಾರದಲ್ಲಿ ವಿದ್ಯಾರ್ಥಿಗಳು ಸೇರಿ 20ಕ್ಕೂ ಹೆಚ್ಚು ಮಂದಿ ಬಂಧಿತರಾಗಿದ್ದು, ಆರ್ಥಿಕ ಅಪರಾಧ ಹಿನ್ನೆಲೆಯಲ್ಲಿ ಇಡಿಯವರೂ ತನಿಖೆ ನಡೆಸುತ್ತಿದ್ದಾರೆ.
ಮೇ 5ರಂದು ದೇಶಾದ್ಯಂತ 4750 ಸೆಂಟರ್ ಗಳಲ್ಲಿ ನಡೆದಿದ್ದ ನೀಟ್ ಪರೀಕ್ಷೆಯಲ್ಲಿ 24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರ ಫಲಿತಾಂಶ ಜೂನ್ 4ರಂದು ಪ್ರಕಟವಾಗಿದ್ದು, 67 ಮಂದಿ 720 ಪೂರ್ಣ ಅಂಕ ಪಡೆದಿದ್ದು ಭಾರೀ ಸಂಶಯಕ್ಕೆ ಕಾರಣವಾಗಿತ್ತು. ಈ ರೀತಿಯ ಫಲಿತಾಂಶ ನೀಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಂದಿತ್ತು. ಪೂರ್ಣ ಅಂಕ ಪಡೆದವರಲ್ಲಿ ಆರು ಮಂದಿ ಹರ್ಯಾಣದ ಫರೀದಾಬಾದ್ ಕೇಂದ್ರವೊಂದರ ವಿದ್ಯಾರ್ಥಿಗಳಾಗಿದ್ದು ಅಕ್ರಮದ ಬಗ್ಗೆ ಸಂಶಯ ಹುಟ್ಟಲು ಕಾರಣವಾಗಿತ್ತು.
The Gujarat government on Sunday decided to hand over the investigation into the alleged multi-crore NEET (National Eligibility-cum-Entrance Test) cheating scam in Godhra to the Central Bureau of Investigation (CBI).
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm