ಬ್ರೇಕಿಂಗ್ ನ್ಯೂಸ್
25-06-24 02:56 pm HK News Desk ದೇಶ - ವಿದೇಶ
ಅಯೋಧ್ಯೆ, ಜೂನ್ 25: ಜನವರಿ 22ರಂದು ತರಾತುರಿಯಲ್ಲಿ ಲೋಕಾರ್ಪಣೆಗೊಂಡಿದ್ದ ಪ್ರಭು ಶ್ರೀರಾಮಚಂದ್ರನ ಅಪೂರ್ವ ಮಂದಿರದ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆ ಆಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಎರಡು ದಿನಗಳ ಹಿಂದೆ ಶನಿವಾರ ರಾತ್ರಿ ಮೊದಲ ಮಳೆಗೇ ಸೋರಿಕೆ ಆಗಿರುವುದನ್ನು ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಖಚಿತಪಡಿಸಿದ್ದಾರೆ.
ವಿಷಯ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಎಚ್ಚೆತ್ತುಕೊಂಡ ಮಂದಿರ ನಿರ್ವಹಣಾ ಸಿಬ್ಬಂದಿ ಗರ್ಭಗುಡಿಯ ಮೇಲ್ಚಾವಣಿ ಸರಿಪಡಿಸಲು ಕ್ರಮ ಕೈಗೊಂಡಿದ್ದಾರೆ. ಸೋರಿಕೆ ದೃಢಪಡಿಸಿರುವ ಮಂದಿರ ನಿರ್ಮಾಣ ಉಸ್ತುವಾರಿ ಹೊತ್ತಿದ್ದ ನೃಪೇಂದ್ರ ಮಿಶ್ರಾ, ''ಗುರು ಮಂಟಪ ಇರುವ ಮೊದಲ ಮಹಡಿಗೆ ಯಾವುದೇ ಮೇಲ್ಚಾವಣಿ ಇಲ್ಲ. ಹೀಗಾಗಿ ಮಳೆ ನೀರು ತುಂಬಿಕೊಂಡು ಗರ್ಭಗುಡಿಯ ಮೂಲಕ ಸೋರಿಕೆಯಾಗಿದೆ. ಶೀಘ್ರವೇ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಮೊದಲ ಮಹಡಿಯ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಅದು ಈ ವರ್ಷದ ಜುಲೈ ವೇಳೆಗೆ ಅಂತ್ಯಗೊಳ್ಳಲಿದೆ. ಡಿಸೆಂಬರ್ ಕೊನೆಗೆ ದೇವಸ್ಥಾನ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಮಿಶ್ರಾ ತಿಳಿಸಿದ್ದಾರೆ. ಮೇಲ್ಛಾವಣಿಯನ್ನು ತುರ್ತು ದುರಸ್ತಿಗೊಳಿಸಲು ಮತ್ತು ಅದನ್ನು ವಾಟರ್ಫ್ರೂಫ್ ಮಾಡುವಂತೆ ಸೂಚನೆ ನೀಡಿದ್ದಾರೆ.
ಬಾಲರಾಮನ ವಿಗ್ರಹದ ಮುಂದೆ ಅರ್ಚಕರು ಕೂರುವ ಸ್ಥಳದಲ್ಲೇ ಮಳೆ ನೀರು ಸೋರಿಕೆಯಾಗುತ್ತಿದೆ. ಜತೆಗೆ ವಿಐಪಿ ದರ್ಶನಕ್ಕಾಗಿ ಜನರು ಬರುವ ಸ್ಥಳದಲ್ಲಿಯೂ ನೀರು ಬೀಳುತ್ತಿದೆ ಎಂದು ಅರ್ಚಕರು ತಿಳಿಸಿದ್ದಾರೆ. ದೇಶದ ಮೂಲೆ ಮೂಲೆಯಿಂದ ಬಂದ ಎಂಜಿನಿಯರ್ಗಳು ರಾಮ ಮಂದಿರವನ್ನು ನಿರ್ಮಿಸುತ್ತಿರುವುದು ಬಹಳ ಅಚ್ಚರಿ ಮೂಡಿಸುತ್ತಿದೆ. ಜನವರಿ 22ರಂದು ಮಂದಿರವನ್ನು ಉದ್ಘಾಟಿಸಲಾಗಿತ್ತು. ಆದರೆ ಮಳೆ ಬಂದರೆ ಛಾವಣಿ ಸೋರಲಿದೆ ಎಂದು ಒಬ್ಬರಿಗೂ ತಿಳಿಯಲಿಲ್ಲ. ವಿಶ್ವ ಪ್ರಸಿದ್ಧ ದೇವಸ್ಥಾನದ ಛಾವಣಿ ಸೋರುತ್ತಿರುವುದು ಅಚ್ಚರಿಯ ವಿಷಯ. ಇದು ಏಕೆ ಆಯಿತು? ಅಷ್ಟು ದೊಡ್ಡ ಎಂಜಿನಿಯರ್ಗಳ ಹಾಜರಿಯಲ್ಲಿ ಇಂತಹ ಘಟನೆ ನಡೆಯುತ್ತಿರುವುದು ದೊಡ್ಡ ತಪ್ಪು" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Water was leaking from the roof of the sanctum sanctorum at the Ram temple after the first heavy showers since it was opened to the public, chief priest of Ram Janmabhoomi temple Acharya Satyendra Das said on Monday.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm