ಬ್ರೇಕಿಂಗ್ ನ್ಯೂಸ್
26-06-24 05:50 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 26: 48 ವರ್ಷಗಳ ಬಳಿಕ ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಎನ್ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಸಾಮಾನ್ಯವಾಗಿ ಸ್ಪೀಕರ್ ಹುದ್ದೆಗೆ ಅವಿರೋಧ ಆಯ್ಕೆ ಮಾಡಲಾಗುತ್ತದೆ. ಆದರೆ ಇಂಡಿಯಾ ಒಕ್ಕೂಟದಿಂದ ಅಭ್ಯರ್ಥಿ ಇಳಿಸಿದ್ದರಿಂದ ಚುನಾವಣೆ ನಡೆದಿತ್ತು.
ಇಂಡಿಯಾ ಬಣದಿಂದ ಕಾಂಗ್ರೆಸಿನ ಎಂಟು ಬಾರಿಯ ಸಂಸದ ಕೋಡಿಕುನ್ನಿಲ್ ಸುರೇಶ್ ಅವರನ್ನು ಕಣಕ್ಕಿಳಿಸಲಾಗಿತ್ತು. ಭಾರೀ ಕುತೂಹಲ ಮೂಡಿಸಿದ್ದ ಈ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದ್ದು ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಾಖಡ್ (1980-89) ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಲೋಕಸಭೆಯ ಎರಡನೇ ಸ್ಪೀಕರ್ ಎಂ.ಎ.ಅಯ್ಯಂಗಾರ್ ಮತ್ತು ಗುರ್ದಿಯಾಲ್ ಸಿಂಗ್ ಧಿಲ್ಲಾನ್ ಈ ಹಿಂದೆ ಎರಡು ಬಾರಿ ಈ ಹುದ್ದೆಗೆ ಆಯ್ಕೆಯಾಗಿದ್ದರೂ ಎರಡನೇ ಅವಧಿ ಒಂದೂವರೆ ವರ್ಷಕ್ಕಿಂತ ಹೆಚ್ಚು ಕಾಲ ಉಳಿದಿರಲಿಲ್ಲ. ಹಂಗಾಮಿ ಸ್ಪೀಕರ್ ಭಾರ್ತೃಹರಿ ಮಹತಾಬ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.
ಆರಂಭದಲ್ಲಿ ಎನ್ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನ ಮಾಡಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿಯಾ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂದು ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ಕೋಡಿಕುನ್ನಿಲ್ ಸುರೇಶ್ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣೆಯಲ್ಲಿ ಎಲ್ಲ ಸದಸ್ಯರು ಹಾಜರಾಗುವಂತೆ ವಿಪ್ ಜಾರಿ ಮಾಡಿದ್ದವು.
BJP MP Om Birla was elected speaker of the 18th Lok Sabha after Prime Minister Narendra Modi moved a motion to elect the NDA nominee for his second term.“I congratulate you on behalf of entire House and look forward to your guidance for next five years,” said Mr. Modi.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm