ಬ್ರೇಕಿಂಗ್ ನ್ಯೂಸ್
29-06-24 07:21 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 29: ಜಮ್ಮು ಕಾಶ್ಮೀರದ ಲಡಾಖ್ ಪ್ರಾಂತ್ಯದ ಚೀನಾ ಗಡಿಭಾಗದಲ್ಲಿ ನದಿಯೊಂದನ್ನು ಯುದ್ಧ ಟ್ಯಾಂಕರಿನಲ್ಲಿ ದಾಟುತ್ತಿದ್ದಾಗ ಒಮ್ಮೆಲೇ ನೀರಿನ ಪ್ರಮಾಣ ಹೆಚ್ಚಾಗಿ ಅದರಲ್ಲಿದ್ದ ಐವರು ಯೋಧರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
ಲಡಾಖ್ ಗಡಿಭಾಗದ ದೌಲತ್ ಬೇಗ್ ಓಲ್ಡೀ ಏರಿಯಾದಲ್ಲಿ ಘಟನೆ ನಡೆದಿದ್ದು, ಚೀನಾ ಭಾಗದಿಂದ ಹರಿದು ಬರುವ ನ್ಯೋಮಾ ಚುಶೂಲ್ ಎನ್ನುವ ನದಿಯನ್ನು ದಾಟುತ್ತಿದ್ದಾಗ ದುರಂತ ಉಂಟಾಗಿದೆ. ಟಿ-72 ಹೆಸರಿನ ಯುದ್ಧ ಟ್ಯಾಂಕರನ್ನು ನಸುಕಿನಲ್ಲಿ ಐವರು ಯೋಧರು ದಾಟಿಸುತ್ತಿದ್ದಾಗ ಒಮ್ಮಿಂದೊಮ್ಮೆಲೇ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತ್ತು. ನದಿಯ ಪ್ರವಾಹದಲ್ಲಿ ಸಿಲುಕಿದ ಐವರು ಯೋಧರು ಕೊಚ್ಚಿ ಹೋಗಿದ್ದು ದುರಂತ ಸಾವಿಗೀಡಾಗಿದ್ದಾರೆ.
ಯುದ್ಧ ಟ್ಯಾಂಕ್ ನದಿಯ ಮಧ್ಯೆ ಸ್ಥಗಿತಗೊಂಡಿದ್ದರಿಂದ ದುರ್ಘಟನೆ ಸಂಭವಿಸಿದೆ. ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಲು ಯತ್ನಿಸಿದ್ದು, ನೀರಿನ ಪ್ರವಾಹ ಹೆಚ್ಚಿದ್ದರಿಂದ ಸಾಧ್ಯವಾಗಲಿಲ್ಲ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ತರಬೇತಿ ಉದ್ದೇಶದ ಭಾಗವಾಗಿ ಯೋಧರು ಯುದ್ಧ ಟ್ಯಾಂಕ್ ಅನ್ನು ನದಿ ದಾಟಿಸುತ್ತಿದ್ದರು. ಅದೇ ಸಂದರ್ಭದಲ್ಲಿ ದುರ್ಘಟನೆ ಆಗಿದ್ದು ಆರ್ಮಿ ಚೀಫ್ ಮನೋಜ್ ಪಾಂಡೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರಲ್ಲಿ ಐವರು ಭೂಸೇನೆಯ ಸೈನಿಕರು ಮತ್ತು ಒಬ್ಬರು ಜೂನಿಯರ್ ಕಮಿಷನ್ಡ್ ಅಧಿಕಾರಿ ಇದ್ದಾರೆ. ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನದಿಯಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಶಿಮ್ಲಾ, ಕುಲು, ಕಿನ್ನೌರ್ ಜಿಲ್ಲೆಗಳಲ್ಲಿ ಭೂಕುಸಿತ ಘಟನೆಗಳು ನಡೆದಿವೆ. ಶಿಮ್ಲಾದಲ್ಲಿ ಭೂಕುಸಿತದಿಂದ ಹಲವಾರು ವಾಹನಗಳು ಜಖಂ ಆಗಿವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
Five soldiers of the Indian Army died after they were swept away in flash floods while their tank was crossing a river in the Daulat Beg Oldie area of eastern Ladakh. The area is near the Line of Actual Control with China.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm