ಬ್ರೇಕಿಂಗ್ ನ್ಯೂಸ್
03-07-24 01:14 pm HK News Desk ದೇಶ - ವಿದೇಶ
ಲಕ್ನೋ, ಜುಲೈ.3: ಮತಾಂತರ ಉದ್ದೇಶದ ಸಮಾವೇಶಗಳನ್ನು ತಕ್ಷಣದಿಂದಲೇ ನಿಲ್ಲಿಸಬೇಕು. ಇದೇ ರೀತಿ ಸಮಾವೇಶಗಳಿಗೆ, ಮತಾಂತರಕ್ಕೆ ಅವಕಾಶ ನೀಡಿದಲ್ಲಿ ದೇಶದ ಬಹುಸಂಖ್ಯಾತರು ಒಂದು ದಿನ ಅಲ್ಪಸಂಖ್ಯಾತರಾಗುತ್ತಾರೆ ಎಂದು ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರು ಕಳವಳ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶದ ಹಮೀರ್ ಪುರ್ ಗ್ರಾಮದ ನಿವಾಸಿಗಳನ್ನು ದೆಹಲಿಯಲ್ಲಿ ಮತಾಂತರ ಉದ್ದೇಶದ ಸಮಾವೇಶಕ್ಕೆ ಕರೆದೊಯ್ದಿದ್ದ ಕೈಲಾಶ್ ಕುರಿತ ಪ್ರಕರಣದಲ್ಲಿ ಕೋರ್ಟ್ ಈ ಅಭಿಪ್ರಾಯ ಪಟ್ಟಿದೆ. ರಾಮಪಾಲ್ ಎನ್ನುವ ವ್ಯಕ್ತಿಯನ್ನು ಕೈಲಾಶ್ ದೆಹಲಿಗೆ ಕರೆದೊಯ್ದಿದ್ದು, ಆತನಿಗೆ ಮಾನಸಿಕ ಅಸ್ವಸ್ಥತೆ ಇತ್ತು. ದೆಹಲಿಯ ಸಮಾವೇಶಕ್ಕೆ ಒಯ್ದಲ್ಲಿ ಎಲ್ಲವೂ ಸರಿಯಾಗುತ್ತದೆ ಎಂದು ಹೇಳಿ ಒಯ್ಯಲಾಗಿತ್ತು. ಆದರೆ, ಅಲ್ಲಿಂದ ಮರಳಿ ಬಂದಿಲ್ಲ. ಅಲ್ಲಿ ಮತಾಂತರ ಮಾಡಿರುವ ಸಾಧ್ಯತೆಯಿದೆ ಎಂದು ರಾಮಪಾಲ್ ಸೋದರ ಪೊಲೀಸ್ ದೂರು ನೀಡಿದ್ದು ಮತಾಂತರ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆತನನ್ನು ಬಂಧಿಸಿದ್ದು ಕೈಲಾಶ್ ತನ್ನ ಜಾಮೀನಿಗಾಗಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದ. ವಿಚಾರಣೆ ನಡೆಸಿದ ನ್ಯಾಯಾಧೀಶರು ಮತಾಂತರ ಉದ್ದೇಶದ ಸಮಾವೇಶಕ್ಕೆ ಅವಕಾಶ ನೀಡಲೇಬಾರದು ಎಂದಿದ್ದಾರೆ.
ಹಮೀರ್ ಪುರ್ ಗ್ರಾಮದಿಂದ ಹಲವಾರು ಮಂದಿಯನ್ನು ಕೈಲಾಶ್ ದೆಹಲಿಗೆ ಕರೆದೊಯ್ದಿದ್ದು, ಹೆಚ್ಚಿನವರನ್ನು ಕ್ರೈಸ್ತರಾಗಿ ಮತಾಂತರ ಮಾಡಿರುವ ಶಂಕೆಯಿದೆ. ಈ ಬಗ್ಗೆ ಪೊಲೀಸರು ಕಿಡ್ನಾಪ್, ಮತಾಂತರ ಸೇರಿದಂತೆ ಹಲವು ಸೆಕ್ಷನ್ ಅಡಿ ಕೇಸು ದಾಖಲಿಸಿ ಕೈಲಾಶ್ ನನ್ನು ಬಂಧಿಸಿದ್ದಾರೆ. ಕೋರ್ಟಿಗೆ ಹಾಜರಾಗಿದ್ದ ಉತ್ತರ ಪ್ರದೇಶ ಹೆಚ್ಚುವರಿ ಅಡ್ವಕೇಟ್ ಜನರಲ್ ಪಿ.ಕೆ ಗಿರಿ, ಹಮೀರ್ ಪುರ್ ಗ್ರಾಮದಿಂದ ಹಲವರನ್ನು ಕ್ರೈಸ್ತರ ಸಮಾವೇಶಕ್ಕೆ ಕರೆದೊಯ್ಯಲಾಗಿದೆ. ಹಿಂತಿರುಗಿ ಬರುವಾಗ ಹಣವನ್ನೂ ನೀಡಿ ಕಳಿಸಿದ್ದಾರೆ. ಆರ್ಟಿಕಲ್ 25 ಪ್ರಕಾರ, ದೇಶದಲ್ಲಿ ಯಾವುದೇ ಧರ್ಮವನ್ನು ಅನುಸರಿಸುವುದಕ್ಕೆ ಅವಕಾಶ ಇದೆ. ಆದರೆ ಯಾರನ್ನೂ ನಂಬಿಕೆ, ಆಮಿಷವೊಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶ ಇಲ್ಲ ಎಂದು ಹೇಳಿದರು.
ರಾಮಪಾಲ್ ಮಾತ್ರವಲ್ಲದೆ, ಹಮೀರ್ ಪುರ್ ಜಿಲ್ಲೆಯಿಂದ ತೆರಳಿರುವ ಹಲವಾರು ಮತಾಂತರ ಆಗಿದ್ದಾರೆಂದು ಕೋರ್ಟ್ ಮುಂದೆ ಕೆಲವರು ಸಾಕ್ಷಿ ಹೇಳಿದ್ದಾರೆ. ಇದನ್ನು ಆಧರಿಸಿ ತೀರ್ಪು ನೀಡಿದ ನ್ಯಾಯಾಧೀಶರು, ಮತಾಂತರ ಉದ್ದೇಶದ ಸಮಾವೇಶಗಳನ್ನು ಕೂಡಲೇ ತಡೆಯಬೇಕು. ಈ ರೀತಿ ಮುಂದುವರಿದಲ್ಲಿ ದೇಶದಲ್ಲಿ ಮುಂದೊಂದು ದಿನ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗಲಿದ್ದಾರೆ. ಉತ್ತರ ಪ್ರದೇಶದಲ್ಲಿ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡದ ಜನರನ್ನು ಆಮಿಷವೊಡ್ಡಿ ಮತಾಂತರಿಸುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಪ್ರಕ್ರಿಯೆಗಳಿಗೆ ತಕ್ಷಣದಿಂದಲೇ ತಡೆ ಒಡ್ಡಬೇಕು ಎಂದು ಹೇಳಿದ್ದಲ್ಲದೆ ಕೈಲಾಶ್ ಪರವಾಗಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ.
Religious congregations where conversions are taking place must be stopped, the Allahabad High Court has said, adding that the country's "majority population would be in minority" if such gatherings are allowed. The high court was hearing yesterday the bail petition of Kailash, who has been accused of taking people from Hamirpur in Uttar Pradesh to a gathering in Delhi for conversions.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm