ಬ್ರೇಕಿಂಗ್ ನ್ಯೂಸ್
04-07-24 05:57 pm HK News Desk ದೇಶ - ವಿದೇಶ
ರಾಂಚಿ, ಜುಲೈ 4: ಜಾರ್ಖಂಡ್ 13ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೈಲಿನಿಂದ ಹೊರಬಂದ ನಾಲ್ಕೇ ದಿನದಲ್ಲಿ ಮತ್ತೆ ಅಧಿಕಾರ ಗಿಟ್ಟಿಸಿದ ಸೊರೇನ್ ಅವರಿಗೆ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಪ್ರಮಾಣ ವಚನ ಬೋಧಿಸಿದರು.
ನಿನ್ನೆಯಷ್ಟೇ ಚಂಪೈ ಸೊರೆನ್ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಮತ್ತು ಆರ್ಜೆಡಿ ಮುಖಂಡ ಸತ್ಯಾನಂದ್ ಭೋಕ್ತಾ ಅವರೊಂದಿಗೆ ರಾಜಭವನಕ್ಕೆ ತೆರಳಿ ರಾಜಿನಾಮೆ ನೀಡಿದ್ದರು.
ಭೂಹಗರಣ, ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನಿನಲ್ಲಿ ಜೈಲಿನಿಂದ ಹೊರಗೆ ಬಂದಿರುವ ಹೇಮಂತ್ ಸೊರೇನ್ ಮತ್ತೆ ಅಧಿಕಾರಕ್ಕೇರಲು ತನ್ನ ಪರವಾಗಿದ್ದ ಚಂಪೈ ಸೊರೇನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದರು.
ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜೈಲು ಸೇರಿದ್ದ ಸೊರೇನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿದ ಜೂನ್ 28 ರಂದು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಜನವರಿ 31 ರಂದು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಂಧನಕ್ಕೂ ಮುನ್ನ ಸೊರೇನ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೊರೇನ್ ಜೈಲಿನಿಂದ ಹೊರಬಂದ ಕೂಡಲೇ ಜುಲೈ 2ರಂದು ಸಭೆ ಸೇರಿದ್ದ ಶಾಸಕರು ಸೊರೇನ್ ಅವರನ್ನೇ ತಮ್ಮ ಶಾಸಕಾಂಗ ನಾಯಕನಾಗಿ ಆಯ್ಕೆ ಮಾಡಿದ್ದರು.
ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಇಡಿ ಅಧಿಕಾರಿಗಳು ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದರೆ ಮತ್ತೆ ಜೈಲು ಸೇರುವ ಸಾಧ್ಯತೆಯಿದೆ.
Jharkhand chief minister Champai Soren resigned on Wednesday and Hemant Soren, who is out on bail in a money laundering case, staked claim to form the government, hours after leaders of the JMM-led alliance in the state unanimously elected him as the legislature party leader.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm