ಬ್ರೇಕಿಂಗ್ ನ್ಯೂಸ್
04-07-24 05:57 pm HK News Desk ದೇಶ - ವಿದೇಶ
ರಾಂಚಿ, ಜುಲೈ 4: ಜಾರ್ಖಂಡ್ 13ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೈಲಿನಿಂದ ಹೊರಬಂದ ನಾಲ್ಕೇ ದಿನದಲ್ಲಿ ಮತ್ತೆ ಅಧಿಕಾರ ಗಿಟ್ಟಿಸಿದ ಸೊರೇನ್ ಅವರಿಗೆ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಪ್ರಮಾಣ ವಚನ ಬೋಧಿಸಿದರು.
ನಿನ್ನೆಯಷ್ಟೇ ಚಂಪೈ ಸೊರೆನ್ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಮತ್ತು ಆರ್ಜೆಡಿ ಮುಖಂಡ ಸತ್ಯಾನಂದ್ ಭೋಕ್ತಾ ಅವರೊಂದಿಗೆ ರಾಜಭವನಕ್ಕೆ ತೆರಳಿ ರಾಜಿನಾಮೆ ನೀಡಿದ್ದರು.
ಭೂಹಗರಣ, ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನಿನಲ್ಲಿ ಜೈಲಿನಿಂದ ಹೊರಗೆ ಬಂದಿರುವ ಹೇಮಂತ್ ಸೊರೇನ್ ಮತ್ತೆ ಅಧಿಕಾರಕ್ಕೇರಲು ತನ್ನ ಪರವಾಗಿದ್ದ ಚಂಪೈ ಸೊರೇನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದರು.
ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜೈಲು ಸೇರಿದ್ದ ಸೊರೇನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿದ ಜೂನ್ 28 ರಂದು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಜನವರಿ 31 ರಂದು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಂಧನಕ್ಕೂ ಮುನ್ನ ಸೊರೇನ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೊರೇನ್ ಜೈಲಿನಿಂದ ಹೊರಬಂದ ಕೂಡಲೇ ಜುಲೈ 2ರಂದು ಸಭೆ ಸೇರಿದ್ದ ಶಾಸಕರು ಸೊರೇನ್ ಅವರನ್ನೇ ತಮ್ಮ ಶಾಸಕಾಂಗ ನಾಯಕನಾಗಿ ಆಯ್ಕೆ ಮಾಡಿದ್ದರು.
ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಇಡಿ ಅಧಿಕಾರಿಗಳು ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದರೆ ಮತ್ತೆ ಜೈಲು ಸೇರುವ ಸಾಧ್ಯತೆಯಿದೆ.
Jharkhand chief minister Champai Soren resigned on Wednesday and Hemant Soren, who is out on bail in a money laundering case, staked claim to form the government, hours after leaders of the JMM-led alliance in the state unanimously elected him as the legislature party leader.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm