ಬ್ರೇಕಿಂಗ್ ನ್ಯೂಸ್
12-07-24 03:49 pm HK News Desk ದೇಶ - ವಿದೇಶ
ಕಾಠ್ಮಂಡು, ಜುಲೈ 12: ಪರ್ವತಗಳ ನಡುವಿನ ಹೆದ್ದಾರಿಯಲ್ಲಿ ಭೂಕುಸಿತದಿಂದಾಗಿ ಎರಡು ಪ್ಯಾಸೆಂಜರ್ ಬಸ್ಸುಗಳು ನದಿಗೆ ಉರುಳಿ ಬಿದ್ದಿದ್ದು, ಅದರಲ್ಲಿದ್ದ ಸುಮಾರು 60 ಮಂದಿ ಕೊಚ್ಚಿ ಹೋಗಿರುವ ಘಟನೆ ನೇಪಾಳದ ರಾಜಧಾನಿ ಕಾಠ್ಮಂಡುವಿನಿಂದ 120 ಕಿಮೀ ದೂರದ ಸಿಮಲ್ಟಾಲ್ ಎಂಬಲ್ಲಿ ನಡೆದಿದೆ.
ದಕ್ಷಿಣ ನೇಪಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ತ್ರಿಶೂಲಿ ನದಿ ಪರ್ವತಗಳ ಎಡೆಯಿಂದ ಧುಮ್ಮಿಕ್ಕಿ ಹರಿಯುವ ಜಾಗದಲ್ಲೇ ಭೂಕುಸಿತ ಸಂಭವಿಸಿದೆ. ಶುಕ್ರವಾರ ನಸುಕಿನ ಜಾವ 3 ಗಂಟೆ ವೇಳೆಗೆ ಹಠಾತ್ ಭೂಕುಸಿತ ಆಗಿದ್ದು, ಹೆದ್ದಾರಿಯಲ್ಲಿ ಸಾಗುತ್ತಿದ್ದ ಎರಡು ಬಸ್ಸುಗಳು ನದಿಗೆ ಉರುಳಿ ಬಿದ್ದಿದೆ. ಕಾಠ್ಮಂಡುವಿನ ಏಂಜೆಲ್ ಬಸ್ಸಿನಲ್ಲಿ 24 ಮತ್ತು ಇನ್ನೊಂದು ಗಣಪತಿ ಡಿಲಕ್ಸ್ ಬಸ್ಸಿನಲ್ಲಿ 42 ಮಂದಿ ಇದ್ದರು ಎನ್ನಲಾಗಿದೆ. ಆದರೆ ದಾರಿ ಮಧ್ಯೆ ಬಸ್ಸನ್ನೇರಿದವರ ಲೆಕ್ಕ ಇಲ್ಲ. ಹೀಗಾಗಿ ಈ ಸಂಖ್ಯೆ ಹೆಚ್ಚಿರಲೂಬಹುದು. ಈ ಪೈಕಿ ಆರು ಮಂದಿ ಭಾರತೀಯ ಮೂಲದವರಿದ್ದಾರೆ. ಪೊಲೀಸರು, ಸ್ಕೂಬಾ ಡೈವರ್ ಗಳು ಇಳಿಜಾರಿನಲ್ಲಿ ಹರಿಯುವ ನದಿಯಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಯಾವುದೇ ಮೃತದೇಹ ಪತ್ತೆಯಾಗಿಲ್ಲ ಎಂದು ಚಿತ್ವಾನ್ ಜಿಲ್ಲೆಯ ಜಿಲ್ಲಾಧಿಕಾರಿ ಖಿಮಾನಂದ ಭೂಸಾಲ್ ತಿಳಿಸಿದ್ದಾರೆ.

ಗಣಪತಿ ಡಿಲಕ್ಸ್ ಬಸ್ ಉರುಳಿ ಬೀಳುತ್ತಿದ್ದಾಗಲೇ ಅದರಿಂದ ಮೂವರು ಪ್ರಯಾಣಿಕರು ಹೊರಗೆ ಹಾರಿದ್ದು, ನೀರಿನಲ್ಲಿ ಈಜಿ ದಡ ಸೇರಿದ್ದಾರೆ. ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹಿಮಾಲಯ ರಾಜ್ಯ ನೇಪಾಳದಲ್ಲಿ ಜೂನ್ ನಿಂದ ಸೆಪ್ಟಂಬರ್ ವರೆಗೆ ಭಾರೀ ಮಳೆಯಾಗುತ್ತಿದ್ದು, ಈ ಸಂದರ್ಭದಲ್ಲಿ ಪರ್ವತ ಮಧ್ಯೆ ಭೂಕುಸಿತ ಸಾಮಾನ್ಯ ಎನ್ನುವಂತಾಗಿದೆ. ತ್ರಿಶೂಲಿ ನದಿಯಿರುವ ಹೆದ್ದಾರಿಯಲ್ಲೇ ಶುಕ್ರವಾರ ಮುಂಜಾನೆ ಮತ್ತೊಂದು ಬಸ್ ಪ್ರವಾಹಕ್ಕೆ ಸಿಲುಕಿದ್ದು, ಅದರಲ್ಲಿ ಚಾಲಕ ಮೃತಪಟ್ಟಿದ್ದಾರೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ನೇಪಾಳ, ಹಿಮಾಚಲದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಅಸ್ಸಾಮ್ ನಲ್ಲಿ ಪ್ರವಾಹ ಸ್ಥಿತಿ ತಲೆದೋರಿದೆ.
A landslide swept two passenger buses carrying more than 50 people into a swollen river in central Nepal early Friday, while continuous rain and more landslides were making rescue efforts difficult.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm