ಬ್ರೇಕಿಂಗ್ ನ್ಯೂಸ್
14-07-24 03:16 pm HK News Desk ದೇಶ - ವಿದೇಶ
ಜೈಪುರ, ಜುಲೈ.14: ರಾಜಸ್ಥಾನದ ಪಾಲಿ ಜಿಲ್ಲೆಯ ಜೋಗ್ಮಂಡಿ ರೈಲ್ವೇ ಸೇತುವೆಯಲ್ಲಿ ನವ ವಿವಾಹಿತ ಜೋಡಿ ಫೋಟೋ ಶೂಟ್ ಮಾಡುತ್ತಿದ್ದಾಗ ರೈಲು ಬಂದಿದ್ದು ಇದನ್ನು ನೋಡಿ ಪತಿ- ಪತ್ನಿ ಸೇತುವೆಯಿಂದಲೇ 90 ಅಡಿ ಆಳದ ಕಂದಕಕ್ಕೆ ಹಾರಿದ ಘಟನೆ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದೆ. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ರಾಹುಲ್ ಮೇವಾಡಾ (22) ಮತ್ತು ಅವರ ಪತ್ನಿ ಜಾಹ್ನವಿ (20) ಮದುವೆಯಾದ ಬಳಿಕ ಗೋರಂಘಾಟ್ ಗೆ ಭೇಟಿ ನೀಡಲು ಬಂದಿದ್ದರು. ಜೋಗಮಂಡಿ ಸೇತುವೆಯ ಮೀಟರ್ ಗೇಜ್ ರೈಲ್ವೇ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸೇತುವೆ ಮಧ್ಯದಲ್ಲಿ ನಿಂತು ಫೋಟೊ ಶೂಟ್ ಮಾಡ ತೊಡಗಿದ್ದರು. ಇದೇ ವೇಳೆ, ಮಾರ್ವಾರ್ ಪ್ಯಾಸೆಂಜರ್ ರೈಲು ಕಮ್ಲಿಘಾಟ್ ರೈಲ್ವೆ ನಿಲ್ದಾಣದಿಂದ ಬಂದಿತ್ತು. ರೈಲು ನಿಧಾನಕ್ಕೆ ಬರುತ್ತಿದ್ದರೂ ದಂಪತಿ ಭಯಗೊಂಡು ಸೇತುವೆಯಿಂದ ಕೆಳಗೆ ಹಾರಿದ್ದರು.


ಇಬ್ಬರು ಸಂಬಂಧಿಕರು ರೈಲ್ವೇ ಸೇತುವೆಯ ಬಳಿ ನಿಂತು ಫೋಟೊ ತೆಗೆಯುತ್ತಿದ್ದರೆ, ಹಠಾತ್ ರೈಲು ಬಂದಾಗ ಏನು ಮಾಡುವುದೆಂದು ತೋಚಲಿಲ್ಲ. ಸಂಬಂಧಿಕರು ಬೊಬ್ಬೆ ಹೊಡೆಯ ತೊಡಗಿದ್ದರೆ, ದಂಪತಿ ನೇರವಾಗಿ ಸೇತುವೆಯಿಂದ ಹೊರಕ್ಕೆ ಜಿಗಿದಿದ್ದಾರೆ. ಇದು ಸಂಬಂಧಿಕರ ಮೊಬೈಲಿನಲ್ಲಿ ಸೆರೆಯಾಗಿದ್ದು ವೀಡಿಯೊ ಜಾಲತಾಣದಲ್ಲಿ ವೈರಲ್ ಆಗಿದೆ.
ರೈಲು ನಿಲ್ಲುತ್ತಿದ್ದಂತೆ ಚಾಲಕ ಮತ್ತು ಗಾರ್ಡ್ ಸೇತುವೆಯಿಂದ ಇಳಿದು, ಗಂಭೀರ ಗಾಯಗೊಂಡ ದಂಪತಿಯನ್ನು ಎತ್ತಿ ಫುಲಾಡ್ ರೈಲ್ವೇ ನಿಲ್ದಾಣಕ್ಕೆ ಕರೆದೊಯ್ದರು. ಅಲ್ಲಿಂದ ಆಂಬ್ಯುಲೆನ್ಸ್ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
A young couple jumped from the Jogmandi railway bridge in Pali after seeing the train approaching towards them on Saturday, police said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm