ಬ್ರೇಕಿಂಗ್ ನ್ಯೂಸ್
14-07-24 03:16 pm HK News Desk ದೇಶ - ವಿದೇಶ
ಜೈಪುರ, ಜುಲೈ.14: ರಾಜಸ್ಥಾನದ ಪಾಲಿ ಜಿಲ್ಲೆಯ ಜೋಗ್ಮಂಡಿ ರೈಲ್ವೇ ಸೇತುವೆಯಲ್ಲಿ ನವ ವಿವಾಹಿತ ಜೋಡಿ ಫೋಟೋ ಶೂಟ್ ಮಾಡುತ್ತಿದ್ದಾಗ ರೈಲು ಬಂದಿದ್ದು ಇದನ್ನು ನೋಡಿ ಪತಿ- ಪತ್ನಿ ಸೇತುವೆಯಿಂದಲೇ 90 ಅಡಿ ಆಳದ ಕಂದಕಕ್ಕೆ ಹಾರಿದ ಘಟನೆ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದೆ. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ರಾಹುಲ್ ಮೇವಾಡಾ (22) ಮತ್ತು ಅವರ ಪತ್ನಿ ಜಾಹ್ನವಿ (20) ಮದುವೆಯಾದ ಬಳಿಕ ಗೋರಂಘಾಟ್ ಗೆ ಭೇಟಿ ನೀಡಲು ಬಂದಿದ್ದರು. ಜೋಗಮಂಡಿ ಸೇತುವೆಯ ಮೀಟರ್ ಗೇಜ್ ರೈಲ್ವೇ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸೇತುವೆ ಮಧ್ಯದಲ್ಲಿ ನಿಂತು ಫೋಟೊ ಶೂಟ್ ಮಾಡ ತೊಡಗಿದ್ದರು. ಇದೇ ವೇಳೆ, ಮಾರ್ವಾರ್ ಪ್ಯಾಸೆಂಜರ್ ರೈಲು ಕಮ್ಲಿಘಾಟ್ ರೈಲ್ವೆ ನಿಲ್ದಾಣದಿಂದ ಬಂದಿತ್ತು. ರೈಲು ನಿಧಾನಕ್ಕೆ ಬರುತ್ತಿದ್ದರೂ ದಂಪತಿ ಭಯಗೊಂಡು ಸೇತುವೆಯಿಂದ ಕೆಳಗೆ ಹಾರಿದ್ದರು.


ಇಬ್ಬರು ಸಂಬಂಧಿಕರು ರೈಲ್ವೇ ಸೇತುವೆಯ ಬಳಿ ನಿಂತು ಫೋಟೊ ತೆಗೆಯುತ್ತಿದ್ದರೆ, ಹಠಾತ್ ರೈಲು ಬಂದಾಗ ಏನು ಮಾಡುವುದೆಂದು ತೋಚಲಿಲ್ಲ. ಸಂಬಂಧಿಕರು ಬೊಬ್ಬೆ ಹೊಡೆಯ ತೊಡಗಿದ್ದರೆ, ದಂಪತಿ ನೇರವಾಗಿ ಸೇತುವೆಯಿಂದ ಹೊರಕ್ಕೆ ಜಿಗಿದಿದ್ದಾರೆ. ಇದು ಸಂಬಂಧಿಕರ ಮೊಬೈಲಿನಲ್ಲಿ ಸೆರೆಯಾಗಿದ್ದು ವೀಡಿಯೊ ಜಾಲತಾಣದಲ್ಲಿ ವೈರಲ್ ಆಗಿದೆ.
ರೈಲು ನಿಲ್ಲುತ್ತಿದ್ದಂತೆ ಚಾಲಕ ಮತ್ತು ಗಾರ್ಡ್ ಸೇತುವೆಯಿಂದ ಇಳಿದು, ಗಂಭೀರ ಗಾಯಗೊಂಡ ದಂಪತಿಯನ್ನು ಎತ್ತಿ ಫುಲಾಡ್ ರೈಲ್ವೇ ನಿಲ್ದಾಣಕ್ಕೆ ಕರೆದೊಯ್ದರು. ಅಲ್ಲಿಂದ ಆಂಬ್ಯುಲೆನ್ಸ್ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
A young couple jumped from the Jogmandi railway bridge in Pali after seeing the train approaching towards them on Saturday, police said.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am