ಬ್ರೇಕಿಂಗ್ ನ್ಯೂಸ್
17-07-24 10:31 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 17: ಮುಸ್ಲಿಮರಲ್ಲಿ ಪುರುಷರದ್ದೇ ಅಧಿಪತ್ಯ. ಪತ್ನಿಯ ಮೇಲೆ ತಲಾಖ್ ಹೇಳಿಯೂ ಸಂಬಂಧವನ್ನು ಕಡಿದುಕೊಳ್ಳಬಹುದು. ಹಿಂದೆಲ್ಲಾ ತ್ರಿಬಲ್ ತಲಾಖ್ ಎನ್ನುವುದು ಮುಸ್ಲಿಮ್ ಮಹಿಳೆಯರ ಮೇಲಿನ ಶೋಷಣೆಯ ಅಸ್ತ್ರವೇ ಆಗಿತ್ತು. ಇದೀಗ ದುಬೈ ರಾಜನ ಮಗಳು, ಅರ್ಥಾತ್ ರಾಜಕುಮಾರಿ ತನ್ನ ಗಂಡ ಬೇರೊಬ್ಬಾಕೆಯನ್ನು ಕಟ್ಟಿಕೊಂಡಿದ್ದಾಳೆಂದು ತಿಳಿಯುತ್ತಲೇ ಸೋಶಿಯಲ್ ಮೀಡಿಯಾದಲ್ಲೇ ಗಂಡನಿಗೆ ತ್ರಿಬಲ್ ತಲಾಖ್ ಹೇಳಿ ಸುದ್ದಿಯಾಗಿದ್ದಾರೆ.
ದುಬೈ ರಾಜ ಮಹಮ್ಮದ್ ರಶೀದ್ ಅಲ್ ಮಕ್ತುಮ್ ಅವರ ಪುತ್ರಿಯಾಗಿರುವ ಶೈಖಾ ಮಹ್ರಾ ಅಲ್ ಮಕ್ತುಮ್ ಅವರು ತನ್ನ ಗಂಡ ಮಹಮ್ಮದ್ ಬಿನ್ ರಶೀದ್ ಬಿನ್ ಮನಾ ಅಲ್ ಮಕ್ತುಮ್ ವಿರುದ್ಧ ಇನ್ ಸ್ಟಾ ಗ್ರಾಮ್ ಪೇಜಿನಲ್ಲೇ ಡೈವರ್ಸ್ ಮಾಡಿರುವುದನ್ನು ಹೇಳಿಕೊಂಡಿದ್ದಾರೆ. ಜುಲೈ 16ರಂದು ಆಕೆ ಈ ಪೋಸ್ಟ್ ಹಾಕಿದ್ದು ಬರೆದಿರುವ ರೀತಿ ಹೀಗಿದೆ. ಪ್ರೀತಿಯ ಪತಿಯೇ, ನೀವು ಬೇರೊಬ್ಬ ಸಂಗಾತಿಯನ್ನು ಕಟ್ಟಿಕೊಂಡಿದ್ದೀರಾ.. ಹೀಗಾಗಿ ನಾನು ಈ ಮೂಲಕ ಸಂಬಂಧ ಕಡಿಕೊಳ್ಳುವ ವಿಚ್ಛೇದನ ಘೋಷಣೆ ಮಾಡುತ್ತಿದ್ದೇನೆ. ಡೈವರ್ಸ್ ಮಾಡುತ್ತೇನೆ, ಡೈವರ್ಸ್ ಮಾಡುತ್ತೇನೆ, ಡೈವರ್ಸ್ ಮಾಡುತ್ತೇನೆ. ನಿಮ್ಮ ಹಳೆ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಪುರುಷರು ತಲಾಖ್ ಹೇಳಿದ ರೀತಿಯಲ್ಲೇ ಮೂರು ಬಾರಿ ಡೈವರ್ಸ್ ಘೋಷಣೆ ಮಾಡಿಕೊಂಡು ಪೋಸ್ಟ್ ಮಾಡಿದ್ದಾರೆ.


ಇಸ್ಲಾಮಿಕ್ ಪದ್ಧತಿಯಲ್ಲಿ ಪುರುಷನು ತನ್ನ ಪತ್ನಿಗೆ ಮೂರು ಬಾರಿ ತಲಾಖ್ ಘೋಷಣೆ ಮಾಡಿ, ಸಂಬಂಧವನ್ನೇ ಕಡಿದುಕೊಳ್ಳಲು ಅವಕಾಶ ಇದೆ. ಈ ರೀತಿಯ ತ್ರಿಬಲ್ ತಲಾಖ್ ಮುಸ್ಲಿಮರಲ್ಲಿ ಹಿಂದಿನಿಂದಲೂ ಚಾಲ್ತಿಯಲ್ಲಿದೆ. ಭಾರತದಲ್ಲಿ ಮಾತ್ರ ಈ ಪದ್ಧತಿಯನ್ನು ಇತ್ತೀಚೆಗೆ ನಿಷೇಧಿಸಲಾಗಿದೆ. ಇಸ್ಲಾಮಿನಲ್ಲಿ ಮಹಿಳೆಯರಿಗೆ ಡೈವರ್ಸ್ ಮಾಡಿಕೊಳ್ಳುವ ಅವಕಾಶ ಇದ್ದರೂ, ಅದರಲ್ಲಿ ಪುರುಷನಷ್ಟು ಸ್ವಾತಂತ್ರ್ಯ ಇಲ್ಲ. ಮಹಿಳೆ ವಿಚ್ಛೇದನ ಬಯಸುವುದನ್ನು ಖುಲಾ ಎಂದು ಕರೆಯುತ್ತಾರೆ. ಆದರೆ, ತನಗೆ ಡೈವರ್ಸ್ ಬೇಕೆಂದು ಕೋರ್ಟಿನಲ್ಲಿ ಅಥವಾ ಆತನಲ್ಲಿ ವಿನಂತಿ ಮಾಡಿಕೊಳ್ಳಬೇಕು.
ದುಬೈ ರಾಜ ಮಹಮ್ಮದ್ ಬಿನ್ ರಶೀದ್ ಅವರ ಪುತ್ರಿ ಶೈಖಾ ಮಹ್ರಾಗೆ 2023ರ ಮೇ ತಿಂಗಳಲ್ಲಿ ಮದುವೆಯಾಗಿತ್ತು. ಒಂದು ವರ್ಷದ ನಂತರ ಅಂದರೆ, ಇದೇ ಜೂನ್ ತಿಂಗಳ ಆರಂಭದಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಳು. ತನಗೆ ಮಗುವಾಗಿದ್ದನ್ನೂ ಆಕೆ ಇನ್ ಸ್ಟಾ ಪೇಜಿನಲ್ಲಿ ಹಾಕ್ಕೊಂಡಿದ್ದಳು. ಇದೀಗ ಒಂದೇ ತಿಂಗಳಲ್ಲಿ ಆಕೆಯೇ ವಿಚ್ಛೇದನ ಘೋಷಣೆ ಮಾಡಿಕೊಂಡಿದ್ದಾರೆ. ದುಬೈನಲ್ಲಿ ಅರಬ್ಬಿಗಳದ್ದೇ ಸಾಮ್ರಾಜ್ಯ ಆಗಿದ್ದರೂ, ರಾಜಕುಮಾರಿ ಆಗಿರುವ ಶೈಖಾ ಮಹ್ರಾ ಅವರು ವಿಚ್ಛೇದನ ಘೋಷಣೆ ಮಾಡಿ ಸುದ್ದಿಯಾಗಿದ್ದಾಳೆ.
Dubai princess Shaikha Mahra Mohammed Rashed Al Maktoum gave 'instant divorce' to her husband Sheikh Mana bin Mohammed bin Rashid bin Mana Al Maktoum on Instagram, two months after the couple welcomed their first child.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm