ಬ್ರೇಕಿಂಗ್ ನ್ಯೂಸ್
18-07-24 11:25 am HK News Desk ದೇಶ - ವಿದೇಶ
ಲಕ್ನೋ, ಜುಲೈ.18: ಇಸ್ಲಾಂಗೆ ಮತಾಂತರಗೊಂಡ ಹಿಂದು ಧರ್ಮದ ಯುವಕ ಮತ್ತು ಯುವತಿಯರಿಗೆ ಸಾಮೂಹಿಕ ವಿವಾಹ ನಡೆಸಲು ಅನುಮತಿ ನೀಡುವಂತೆ ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ (ಐಎಂಸಿ) ಮಾಡಿದ್ದ ಪ್ರಸ್ತಾಪಕ್ಕೆ ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು ಸಾಮೂಹಿಕ ಮತಾಂತರ ಕಾರ್ಯಕ್ರಮ ವಿವಾದಕ್ಕೆ ಕಾರಣವಾಗಿದೆ.
ಐಎಂಸಿಯಿಂದ ಸರ್ಕಾರಿ ಶಾಲೆಯೊಂದರಲ್ಲಿ ಜುಲೈ 21ರಂದು ಸಾಮೂಹಿಕ ವಿವಾಹ ಮತ್ತು ಮತಾಂತರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿಂದು ಧರ್ಮದ ಐದು ಜೋಡಿಗಳನ್ನು ಇಸ್ಲಾಂ ಪದ್ಧತಿಯಂತೆ ನಿಕಾಹ್ ಮಾಡಿಸುವುದು ಯೋಜನೆಯಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದು ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದ್ದರಿಂದ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಐಎಂಸಿ ಮುಖ್ಯಸ್ಥ ಮೌಲಾನಾ ತೌಕೀರ್ ರಜಾ ಖಾನ್ ಪ್ರತಿಕ್ರಿಯೆ ನೀಡಿದ್ದು ಜಿಲ್ಲಾಡಳಿತದ ಅನುಮತಿ ಪಡೆದ ನಂತರವೇ ಸಾಮೂಹಿಕ ನಿಕಾಹ್ ಸಮಾರಂಭವನ್ನು ಆಯೋಜಿಸಲಾಗುವುದು. ಈ ಬಗ್ಗೆ ಆಡಳಿತದಿಂದ ಅನುಮತಿ ಕೋರಿದ್ದೆವು, ಆದರೆ ನಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.
ಸಾಮೂಹಿಕ ನಿಕಾಹ್ ಮತ್ತು ಮತಾಂತರ ಕಾರ್ಯಕ್ರಮಗಳನ್ನು ಆಯೋಜಿಸಲು ಐಎಂಸಿ ಅನುಮತಿ ಕೇಳಿದ್ದು ಅವಕಾಶ ನೀಡಲಾಗಿಲ್ಲ ಎಂದು ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಹೇಳಿದ್ದಾರೆ.
ಇಸ್ಲಾಂಗೆ ಮತಾಂತರಗೊಂಡ ಹಿಂದೂ ಯುವಕ-ಯುವತಿಯರಿಗೆ ನಿಕಾಹ್ ನಡೆಸಲಿದ್ದೇವೆ. ಮೊದಲ ಹಂತದಲ್ಲಿ ಐದು ಜೋಡಿಗಳ ವಿವಾಹ ನಡೆಸಲಾಗುವುದು ಎಂದು ಐಎಂಸಿ ಮುಖ್ಯಸ್ಥ ಖಾನ್ ತಿಳಿಸಿದ್ದು ಇದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಜುಲೈ 21ರಂದು ಬೆಳಗ್ಗೆ 11 ಗಂಟೆಗೆ ಖಲೀಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಾಮೂಹಿಕ ನಿಕಾಹ್ ಸಮಾರಂಭ ನಡೆಯಲಿದೆ ಎಂದು ಖಾನ್ ಹೇಳಿದ್ದರು. ಖಾನ್ ವಿರುದ್ಧ ಮಂಗಳವಾರ ಬರೇಲಿಯಲ್ಲಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದವು.
The Ittehad-e-Millat Council (IMC) has said that it would not hold the mass marriage ceremony of those who converted to Islam in Bareilly after the district administration denied permission.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm