ಬ್ರೇಕಿಂಗ್ ನ್ಯೂಸ್
19-07-24 10:50 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 19: ಕೆಲವರು ಸೂಪರ್ಮ್ಯಾನ್ ಆಗಲು ಬಯಸುತ್ತಾರೆ, ನಂತರ ದೇವರಾಗಲು ಬಯಸುತ್ತಾರೆ, ಆದರೆ ಭವಿಷ್ಯದ ಅನಿಶ್ಚಿತತೆಗಳ ಬಗ್ಗೆ ಅವರಿಗೆ ಅರಿವು ಇರುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಜಾರ್ಖಂಡ್ ರಾಜ್ಯದ ಬಿಷ್ಣಾಪುರದಲ್ಲಿ ಗ್ರಾಮ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮೋಹನ್ ಭಾಗವತ್ ಅವರು ಭಾಷಣ ಮಾಡಿದರು. ಈ ವೇಳೆ ಕೆಲವು ಜನರು ಸೂಪರ್ ಮ್ಯಾನ್ಗಳಾಗಲು ಬಯಸುತ್ತಾರೆ. ಆದರೆ ಅದು ಅಲ್ಲಿಗೆ ನಿಲ್ಲುವುದಿಲ್ಲ. ಬಳಿಕ ಜನರು ದೇವರಾಗಲು ಬಯಸುತ್ತಾರೆ. ಆದರೆ ಭಗವಂತ ಹೇಳುತ್ತಾರೆ, ತಾನು ವಿಶ್ವರೂಪ ಅಂತ. ಆದರೆ ವಿಶ್ವರೂಪಕ್ಕೂ ದೊಡ್ಡದು ಇದೆ ಅನ್ನೋದು ಯಾರಿಗೂ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಅಂತಿಮವಾಗಿ ಅಭಿವೃದ್ದಿಗೆ ಯಾವುದೇ ಕೊನೆ ಎಂಬುದೇ ಇಲ್ಲ. ಇದನ್ನು ಪ್ರತಿಯೊಬ್ಬ ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು. ಯಾರೇ ಆಗಲಿ ಹೆಚ್ಚಿನದ್ದನ್ನು ಸಾಧಿಸಲು ದುಡಿಯಬೇಕು ಎಂದು ಹೇಳಿದ್ದಾರೆ. ಮೋಹನ್ ಭಾಗವತ್ ಅವರು ಹೇಳಿರುವ ಈ ಮಾತು ಸಾಕಷ್ಟು ಸಂಚಲನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷ ಇದು ದೆಹಲಿಯ 7 ಲೋಕಕಲ್ಯಾಣ್ ಮಾರ್ಗವನ್ನು ಗುರಿಯಾಗಿಸಿಕೊಂಡು ಭಾಗವತ್ ಹೇಳಿಕೆ ನೀಡಿದ್ದಾರೆ ಎಂದು ಕಟಕಿಯಾಡಿದೆ. ಭಾಗವತ್ ಅವರ ವಿಶ್ವರೂಪದ ಮಾತು ಪರೋಕ್ಷವಾಗಿ ಮೋದಿ ಅವರನ್ನೇ ಗುರಿಯಾಗಿಸಿರೋದು ಎಂಬ ರೀತಿಯಲ್ಲಿ ಬಹಳ ಚರ್ಚೆಗೆ ಗುರಿಯಾಗಿದೆ. ಆರೆಸ್ಸೆಸ್ ಮುಖ್ಯಸ್ಥರ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಪರೋಕ್ಷ ದಾಳಿ ಎಂದು ಕಾಂಗ್ರೆಸ್ ಹೇಳಿದೆ.
ಆಂತರಿಕ ಮತ್ತು ಬಾಹ್ಯ ಆತ್ಮದ ಬೆಳವಣಿಗೆ ಎಂದಿಗೂ ಅಂತ್ಯವಿಲ್ಲದ ಪ್ರಕ್ರಿಯೆಯಾಗಿದೆ. ಅದಕ್ಕಾಗಿಯೇ ಮಾನವೀಯತೆಗಾಗಿ ಪಟ್ಟು ಬಿಡದೆ ಕೆಲಸ ಮಾಡಬೇಕು. ಒಬ್ಬ ಕೆಲಸಗಾರ ತನ್ನ ಕೆಲಸದಿಂದ ಎಂದಿಗೂ ತೃಪ್ತನಾಗಬಾರದು ಎಂದು ಅವರು ಹೇಳಿದರು.
ಸನಾತನ ಧರ್ಮದ ಸಾರದ ಕುರಿತು ಮಾತನಾಡಿದ ಅವರು, “ಸನಾತನ ಸಂಸ್ಕೃತಿ ಮತ್ತು ಧರ್ಮವು ರಾಜ ಮನೆತನದಿಂದ ಬಂದಿಲ್ಲ. ಆದರೆ ಆಶ್ರಮಗಳು ಮತ್ತು ಕಾಡುಗಳಿಂದ ಬಂದಿದೆ. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ನಮ್ಮ ಉಡುಪುಗಳು ಬದಲಾಗಬಹುದು, ಆದರೆ ನಮ್ಮ ಸ್ವಭಾವವು ಎಂದಿಗೂ ಬದಲಾಗುವುದಿಲ್ಲ ಎಂದಿದ್ದಾರೆ.
Stating that men want to become “superman”, then “devta”, “bhagwan” and even aspire for “vishwaroop”, RSS chief Mohan Bhagwat Thursday said that people should work for the welfare of mankind since there is no end to the pursuit of development.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am