ಬ್ರೇಕಿಂಗ್ ನ್ಯೂಸ್
07-08-20 02:20 pm Headline Karnataka News Network ದೇಶ - ವಿದೇಶ
ಮುನ್ನಾರ್: ಕೇರಳಕ್ಕೆ ಮತ್ತೆ ಆಗಸ್ಟ್ ಶಾಪ ವಕ್ಕರಿಸಿದೆ. ರಾಜ್ಯಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು ಇದುವರೆಗೆ 15 ಜೀವಗಳನ್ನು ಬಲಿಪಡೆದುಕೊಂಡಿದೆ. ರಕ್ಷಣಾ ಪಡೆಗಳು ಆರು ಜನರನ್ನು ಮಣ್ಣಿನಡಿಯಿಂದ ಮೇಲಕ್ಕೆತ್ತಿದ್ದು ಅವರಲ್ಲಿ ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ.
ಕುಸಿದ ಗುಡ್ಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರಬಹುದಾಗಿರುವವರಿಗಾಗಿ ಶೋಧ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ.
ಮುನ್ನಾರು ಪಟ್ಟಣದಿಂದ 28 ಕಿಲೋಮೀಟರ್ ದೂರದಲ್ಲಿರುವ ಹಾಗೂ ಇರವಿಕುಲಂ ರಾಷ್ಟ್ರೀಯ ವನ್ಯಧಾಮಕ್ಕಿಂತ 20 ಕಿಲೋಮೀಟರ್ ಅಂತರದಲ್ಲಿರುವ ಈ ಚಹಾ ಪ್ಲಾಂಟೇಷನ್ ನ ಆಸುಪಾಸಿನಲ್ಲಿ ಸುಮಾರು 80 ಜನರು ವಾಸಿಸುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಇವರೆಲ್ಲರೂ ಕಣ್ಣನ್ ದೇವನ್ ಕಂಪೆನಿಗಾಗಿ ಕೆಲಸ ಮಾಡುತ್ತಿದ್ದರು.
ರಾಜಾಮಲೆಯನ್ನು ಮುನ್ನಾರ್ ನೊಂದಿಗೆ ಸಂಪರ್ಕಿಸುವ ಪೆರಿಯಾರ್ ಸೇತುವೆಯೂ ಸಹ ಈ ಗುಡ್ಡ ಕುಸಿತದಿಂದ ಹಾನಿಗೀಡಾಗಿದೆ. ಮತ್ತು ಈ ಭಾಗದಲ್ಲಿದ್ದ ಮೊಬೈಲ್ ಟವರ್ ಸಹ ಘಟನೆಯಿಂದ ಹಾನಿಗೊಳಗಾದ ಕಾರಣ ಈ ಭೀಕರ ಗುಡ್ಡ ಕುಸಿತದ ವಿಚಾರ ಹೊರಜಗತ್ತಿಗೆ ತಿಳಿಯಲು ಸರಿಸುಮಾರು 5 ಗಂಟೆಗಳು ಬೇಕಾಗಿತ್ತು. ಅದೂ ಘಟನಾ ಸ್ಥಳದಿಂದ ತಮ್ಮನ್ನು ರಕ್ಷಿಸಿಕೊಂಡ ಕೆಲವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಈ ಭೀಕರ ಘಟನೆ ಬೆಳಕಿಗೆ ಬಂದಿತ್ತು.
06-07-26 04:40 pm
HK News Staffer
ಬೆಂಗಳೂರು ಕೆ.ಆರ್ ವೃತ್ತದಲ್ಲಿ ಬಿಎಂಟಿಸಿ ಬಸ್ಸುಗಳ ಡ...
04-07-26 02:51 pm
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
06-07-26 10:00 pm
HK News Desk
ಮಂಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಎಸ್ ಐಆರ್ ಪ್ರಕ್ರ...
06-07-26 09:13 pm
ಧರ್ಮ ಕಾರ್ಯಗಳ ಅನುಷ್ಠಾನದಿಂದ ವ್ಯವಹಾರದಲ್ಲಿ ಯಶಸ್ಸು...
05-07-26 10:15 pm
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
06-07-26 04:49 pm
HK News Staffer
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm