ಬ್ರೇಕಿಂಗ್ ನ್ಯೂಸ್
07-08-20 02:20 pm Headline Karnataka News Network ದೇಶ - ವಿದೇಶ
ಮುನ್ನಾರ್: ಕೇರಳಕ್ಕೆ ಮತ್ತೆ ಆಗಸ್ಟ್ ಶಾಪ ವಕ್ಕರಿಸಿದೆ. ರಾಜ್ಯಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು ಇದುವರೆಗೆ 15 ಜೀವಗಳನ್ನು ಬಲಿಪಡೆದುಕೊಂಡಿದೆ. ರಕ್ಷಣಾ ಪಡೆಗಳು ಆರು ಜನರನ್ನು ಮಣ್ಣಿನಡಿಯಿಂದ ಮೇಲಕ್ಕೆತ್ತಿದ್ದು ಅವರಲ್ಲಿ ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ.
ಕುಸಿದ ಗುಡ್ಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರಬಹುದಾಗಿರುವವರಿಗಾಗಿ ಶೋಧ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ.
ಮುನ್ನಾರು ಪಟ್ಟಣದಿಂದ 28 ಕಿಲೋಮೀಟರ್ ದೂರದಲ್ಲಿರುವ ಹಾಗೂ ಇರವಿಕುಲಂ ರಾಷ್ಟ್ರೀಯ ವನ್ಯಧಾಮಕ್ಕಿಂತ 20 ಕಿಲೋಮೀಟರ್ ಅಂತರದಲ್ಲಿರುವ ಈ ಚಹಾ ಪ್ಲಾಂಟೇಷನ್ ನ ಆಸುಪಾಸಿನಲ್ಲಿ ಸುಮಾರು 80 ಜನರು ವಾಸಿಸುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಇವರೆಲ್ಲರೂ ಕಣ್ಣನ್ ದೇವನ್ ಕಂಪೆನಿಗಾಗಿ ಕೆಲಸ ಮಾಡುತ್ತಿದ್ದರು.
ರಾಜಾಮಲೆಯನ್ನು ಮುನ್ನಾರ್ ನೊಂದಿಗೆ ಸಂಪರ್ಕಿಸುವ ಪೆರಿಯಾರ್ ಸೇತುವೆಯೂ ಸಹ ಈ ಗುಡ್ಡ ಕುಸಿತದಿಂದ ಹಾನಿಗೀಡಾಗಿದೆ. ಮತ್ತು ಈ ಭಾಗದಲ್ಲಿದ್ದ ಮೊಬೈಲ್ ಟವರ್ ಸಹ ಘಟನೆಯಿಂದ ಹಾನಿಗೊಳಗಾದ ಕಾರಣ ಈ ಭೀಕರ ಗುಡ್ಡ ಕುಸಿತದ ವಿಚಾರ ಹೊರಜಗತ್ತಿಗೆ ತಿಳಿಯಲು ಸರಿಸುಮಾರು 5 ಗಂಟೆಗಳು ಬೇಕಾಗಿತ್ತು. ಅದೂ ಘಟನಾ ಸ್ಥಳದಿಂದ ತಮ್ಮನ್ನು ರಕ್ಷಿಸಿಕೊಂಡ ಕೆಲವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಈ ಭೀಕರ ಘಟನೆ ಬೆಳಕಿಗೆ ಬಂದಿತ್ತು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm