ಬ್ರೇಕಿಂಗ್ ನ್ಯೂಸ್
21-07-24 05:45 pm HK News Desk ದೇಶ - ವಿದೇಶ
ಕುವೈತ್, ಜುಲೈ 21: ಕುವೈತ್ ಸಿಟಿಯ ಅಪಾರ್ಟ್ಮೆಂಟ್ ಒಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿ ಇಬ್ಬರು ಮಕ್ಕಳು ಸೇರಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ದುರಂತ ಸಾವಿಗೀಡಾಗಿದ್ದಾರೆ.
ಆಲಪ್ಪುಝ ಜಿಲ್ಲೆಯ ನೀರಾಟ್ಟುಪುರಂ ನಿವಾಸಿಗಳಾದ ಮ್ಯಾಥ್ಯೂಸ್ ಮುಲಕ್ಕಲ್, ಅವರ ಪತ್ನಿ ಲೀನ್ ಅಬ್ರಹಾಂ ಮತ್ತವರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಏರ್ ಕಂಡೀಶನರಲ್ಲಿ ಶಾರ್ಟ್ ಸರ್ಕಿಟ್ ಆಗಿ ಬೆಂಕಿ ಹತ್ತಿಕೊಂಡಿದ್ದು ಹೊಗೆಯಿಂದಾಗಿ ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ. ಮ್ಯಾಥ್ಯೂಸ್ ಮುಲಕ್ಕಲ್ ಕುವೈತ್ ಸಿಟಿಯಲ್ಲಿ ಕಳೆದ 15 ವರ್ಷಗಳಿಂದ ಉದ್ಯೋಗಿಯಾಗಿದ್ದು, ಬೇಸಿಗೆಯ ರಜೆಯಲ್ಲಿ ಊರಿಗೆ ತೆರಳಿ ಜುಲೈ19ರಂದು ಸಂಜೆ 4 ಗಂಟೆಗೆ ಕುವೈತ್ ತಲುಪಿದ್ದರು. ಅದೇ ದಿನ ರಾತ್ರಿ ಅಪಾರ್ಟ್ಮೆಂಟಿನ ಎರಡನೇ ಮಹಡಿಯಲ್ಲಿದ್ದಾಗಲೇ ಬೆಂಕಿ ಹತ್ತಿಕೊಂಡಿತ್ತು. ಪತ್ನಿ ಲೀನಿ ನರ್ಸ್ ಆಗಿದ್ದರೆ, ಇಬ್ಬರು ಮಕ್ಕಳು ಅಲ್ಲಿಯೇ ಶಾಲೆಗೆ ಹೋಗುತ್ತಿದ್ದರು.
ಭಾರತದ ರಾಯಭಾರ ಕಚೇರಿಯವರು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಬೇಸಿಗೆ ರಜೆ ಮುಗಿಸಿ ಮರಳಿದ ದಿನವೇ ದುರಂತ ನಡೆದುಹೋಗಿದೆ. ಒಂದು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ಭಾರತೀಯರು ವಾಸವಿದ್ದ ಅಪಾರ್ಟ್ಮೆಂಟಿಗೆ ಬೆಂಕಿ ಹತ್ತಿಕೊಂಡು 45 ಮಂದಿ ಸಾವಿಗೀಡಾಗಿದ್ದರು. ಈಗ ಅದೇ ಪರಿಸರದ ಮತ್ತೊಂದು ಕಟ್ಟಡದಲ್ಲಿ ಶಾರ್ಟ್ ಸರ್ಕಿಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
In a tragic incident, an Indian couple and their two children were killed in a fire that broke out in their flat in Kuwait City, local authorities said on Saturday. The tragedy happened on Friday night, the same day they returned from Kerala after vacation.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm