ಬ್ರೇಕಿಂಗ್ ನ್ಯೂಸ್
21-07-24 05:45 pm HK News Desk ದೇಶ - ವಿದೇಶ
ಕುವೈತ್, ಜುಲೈ 21: ಕುವೈತ್ ಸಿಟಿಯ ಅಪಾರ್ಟ್ಮೆಂಟ್ ಒಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿ ಇಬ್ಬರು ಮಕ್ಕಳು ಸೇರಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ದುರಂತ ಸಾವಿಗೀಡಾಗಿದ್ದಾರೆ.
ಆಲಪ್ಪುಝ ಜಿಲ್ಲೆಯ ನೀರಾಟ್ಟುಪುರಂ ನಿವಾಸಿಗಳಾದ ಮ್ಯಾಥ್ಯೂಸ್ ಮುಲಕ್ಕಲ್, ಅವರ ಪತ್ನಿ ಲೀನ್ ಅಬ್ರಹಾಂ ಮತ್ತವರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಏರ್ ಕಂಡೀಶನರಲ್ಲಿ ಶಾರ್ಟ್ ಸರ್ಕಿಟ್ ಆಗಿ ಬೆಂಕಿ ಹತ್ತಿಕೊಂಡಿದ್ದು ಹೊಗೆಯಿಂದಾಗಿ ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ. ಮ್ಯಾಥ್ಯೂಸ್ ಮುಲಕ್ಕಲ್ ಕುವೈತ್ ಸಿಟಿಯಲ್ಲಿ ಕಳೆದ 15 ವರ್ಷಗಳಿಂದ ಉದ್ಯೋಗಿಯಾಗಿದ್ದು, ಬೇಸಿಗೆಯ ರಜೆಯಲ್ಲಿ ಊರಿಗೆ ತೆರಳಿ ಜುಲೈ19ರಂದು ಸಂಜೆ 4 ಗಂಟೆಗೆ ಕುವೈತ್ ತಲುಪಿದ್ದರು. ಅದೇ ದಿನ ರಾತ್ರಿ ಅಪಾರ್ಟ್ಮೆಂಟಿನ ಎರಡನೇ ಮಹಡಿಯಲ್ಲಿದ್ದಾಗಲೇ ಬೆಂಕಿ ಹತ್ತಿಕೊಂಡಿತ್ತು. ಪತ್ನಿ ಲೀನಿ ನರ್ಸ್ ಆಗಿದ್ದರೆ, ಇಬ್ಬರು ಮಕ್ಕಳು ಅಲ್ಲಿಯೇ ಶಾಲೆಗೆ ಹೋಗುತ್ತಿದ್ದರು.
ಭಾರತದ ರಾಯಭಾರ ಕಚೇರಿಯವರು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಬೇಸಿಗೆ ರಜೆ ಮುಗಿಸಿ ಮರಳಿದ ದಿನವೇ ದುರಂತ ನಡೆದುಹೋಗಿದೆ. ಒಂದು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ಭಾರತೀಯರು ವಾಸವಿದ್ದ ಅಪಾರ್ಟ್ಮೆಂಟಿಗೆ ಬೆಂಕಿ ಹತ್ತಿಕೊಂಡು 45 ಮಂದಿ ಸಾವಿಗೀಡಾಗಿದ್ದರು. ಈಗ ಅದೇ ಪರಿಸರದ ಮತ್ತೊಂದು ಕಟ್ಟಡದಲ್ಲಿ ಶಾರ್ಟ್ ಸರ್ಕಿಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
In a tragic incident, an Indian couple and their two children were killed in a fire that broke out in their flat in Kuwait City, local authorities said on Saturday. The tragedy happened on Friday night, the same day they returned from Kerala after vacation.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am