ಬ್ರೇಕಿಂಗ್ ನ್ಯೂಸ್
21-07-24 08:40 pm HK News Desk ದೇಶ - ವಿದೇಶ
ಢಾಕಾ, ಜುಲೈ.21: ತೀವ್ರ ಹಿಂಸಾಚಾರದ ಬೆನ್ನಲ್ಲೇ ವಿವಾದಾತ್ಮಕ ಉದ್ಯೋಗ ಮೀಸಲು ನೀತಿಯನ್ನು ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಹಿಂಪಡೆದಿದೆ. ಇದಲ್ಲದೆ, ಶೇಕಡಾ 56ರಷ್ಟಿದ್ದ ಮೀಸಲಾತಿ ಪ್ರಮಾಣವನ್ನು ಶೇ.7ಕ್ಕೆ ಇಳಿಸಿದೆ. ಆದರೆ ಜನರ ವಿರೋಧಕ್ಕೆ ಕಾರಣವಾಗಿದ್ದ ಸ್ವಾತಂತ್ರ್ಯ ಯೋಧರ ಕುಟುಂಬದ ಮೀಸಲಾತಿಯನ್ನು ಕೋರ್ಟ್ ಕೈಬಿಟ್ಟಿಲ್ಲ. ಬದಲಿಗೆ ಶೇ. 30ರಷ್ಟಿದ್ದ ಇವರ ಮೀಸಲಾತಿಯನ್ನು ಶೇ.5ಕ್ಕೆ ಸೀಮಿತಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ.
ನಾಗರಿಕ ಸೇವಾ ಉದ್ಯೋಗಗಳಲ್ಲಿ ಶೇಕಡ 5ರಷ್ಟು ಸ್ವಾತಂತ್ರ್ಯ ಹೋರಾಟದ ಯೋಧರ ಮಕ್ಕಳಿಗೆ ಮತ್ತು ಶೇಕಡ 2ರಷ್ಟು ಇತರ ವರ್ಗಗಳಿಗೆ ಮೀಸಲಿಡಲಾಗುವುದು ಎಂದು ಕೋರ್ಟ್ ಹೇಳಿದೆ. ಈ ಹಿಂದೆ, 30 ಪ್ರತಿಶತದಷ್ಟು ಉದ್ಯೋಗಗಳನ್ನು ಯುದ್ಧದಲ್ಲಿ ಪಾಲ್ಗೊಂಡ ಯೋಧರ ಸಂಬಂಧಿಕರಿಗೆ ಮೀಸಲಿಡಲಾಗಿತ್ತು. ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರ ಸರ್ಕಾರವು 2018 ರಲ್ಲಿ ಮೀಸಲು ಕೋಟಾ ವ್ಯವಸ್ಥೆಯನ್ನು ರದ್ದುಗೊಳಿಸಿತ್ತು. ಆದರೆ ಕೆಳಗಿನ ನ್ಯಾಯಾಲಯವು ಕಳೆದ ತಿಂಗಳು ಅದನ್ನು ಮರು ಸ್ಥಾಪಿಸಿತ್ತು. ಇದನ್ನು ವಿರೋಧಿಸಿ ದೇಶದಲ್ಲಿ ಹಿಂಸಾಚಾರ ನಡೆದಿತ್ತು.
ಬಾಂಗ್ಲಾದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಶೇ 30ರಷ್ಟು ಮೀಸಲಾತಿ ನೀಡುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹಿಂಸಾಚಾರದಲ್ಲಿ ಇಲ್ಲಿಯವರೆಗೆ 150 ಜನರು ಸಾವನ್ನಪ್ಪಿದ್ದಾರೆ. 2500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು, ಸರ್ಕಾರವು ದೇಶಾದ್ಯಂತ ಕರ್ಫ್ಯೂವನ್ನು ಹೇರಿದ್ದು ಹಿಂಸಾನಿರತರ ಮೇಲೆ ಗುಂಡಿಕ್ಕಲು ಆದೇಶ ನೀಡಿದೆ. ಕೆಲವು ನಗರಗಳಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಲಾಗಿದೆ.
Bangladesh's top court has scrapped most of the quotas on government jobs that had sparked violent clashes across the country that have killed more than 150 people. A third of public sector jobs had been reserved for the relatives of veterans from the country’s war for independence from Pakistan in 1971. But now the court has ruled just 5% of the roles can be reserved for veterans' relatives.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am