ಬ್ರೇಕಿಂಗ್ ನ್ಯೂಸ್
27-07-24 10:50 pm HK News Desk ದೇಶ - ವಿದೇಶ
ಪ್ಯಾರಿಸ್, ಜುಲೈ 27 : ಒಲಿಂಪಿಕ್ಸ್ ಕ್ರೀಡಾಕೂಟದ ಮೊದಲ ದಿನ ಆರಂಭದಲ್ಲಿ ಭಾರತೀಯರಿಗೆ ನಿರಾಸೆ ಉಂಟಾಗಿದ್ದು ಬಳಿಕ ಹೊಸ ಭರವಸೆ ಮೂಡಿದೆ. ಟೋಕಿಯೋ ಒಲಿಂಪಿಕ್ಸ್ನಲ್ಲಿ ಪಿಸ್ತೂಲ್ ದೋಷದಿಂದ ಫೈನಲ್ ಪ್ರವೇಶಿಸಲು ವಿಫಲರಾಗಿದ್ದ ಮನು ಬಾಕರ್ ಈ ಬಾರಿ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ.
ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಮನು, ಮೊದಲ ಸೀರಿಸ್ನಲ್ಲಿ 100ಕ್ಕೆ 97 ಅಂಕ ಕಲೆಹಾಕಿದರು. ಎರಡನೇ ಸೀರಿಸ್ನಲ್ಲಿ 97 ಅಂಕ ಸಂಪಾದಿಸಿ, ಮೊದಲಾರ್ಧ ಮುಗಿಯುವ ವೇಳೆಗೆ 300ಕ್ಕೆ 292 ಅಂಕ ಪಡೆದಿದ್ದರು. ಇದೇ ಪ್ರದರ್ಶನ ಮಟ್ಟ ಕಾಯ್ದುಕೊಂಡು ಅಂತಿಮವಾಗಿ 580 ಅಂಕ ಪಡೆದು ಅರ್ಹತಾ ಸುತ್ತಿನಲ್ಲಿ ಮೂರನೇ ಸ್ಥಾನ ಪಡೆದು ಫೈನಲ್ ಪ್ರವೇಶಿಸಿದರು. ಪದಕ ನಿರ್ಣಯ ಸ್ಪರ್ಧೆ ಜುಲೈ 28ರ ಮಧ್ಯಾಹ್ನ 3.30ಕ್ಕೆ ನಡೆಯಲಿದೆ.




10 ಮೀಟರ್ ಏರ್ ರೈಫಲ್ ಮಿಶ್ರ ತಂಡ ವಿಭಾಗದಲ್ಲಿ ಭಾರತದ ಶೂಟರ್ಗಳು ಹಿನ್ನಡೆ ಅನುಭವಿಸಿದರು. ರಮಿತಾ ಮತ್ತು ಅರ್ಜುನ್ ಬಬುಟಾ ಜೋಡಿ 628.7 ಅಂಕಗಳೊಂದಿಗೆ ಕೇವಲ ಒಂದು ಅಂಕದಿಂದ ಫೈನಲ್ ಪ್ರವೇಶ ಪಡೆಯಲು ವಿಫಲರಾದರು. ಇದೇ ವಿಭಾಗದಲ್ಲಿ ಎಲವೆನಿಲ್ ವಲರಿವನ್ ಮತ್ತು ಸಂದೀಪ್ ಸಿಂಗ್ 626.3 ಅಂಕಗಳೊಂದಿಗೆ 12ನೇ ಸ್ಥಾನ ಪಡೆದರು.
ರೋವಿಂಗ್ ಸ್ಪರ್ಧೆಯ ಪುರುಷರ ಸಿಂಗಲ್ ಸ್ಕಲ್ ಸ್ಪರ್ಧೆಯ ಹೀಟ್ 1ರಲ್ಲಿ ಭಾರತದ ಏಕೈಕ ರೋವರ್ ಬಲರಾಜ್ ಪನ್ವಾರ್ ನಾಲ್ಕನೇ ಸ್ಥಾನ ಗಳಿಸಿದರು. ಇದರಿಂದ ಫೈನಲ್ ಗೇರಲು ವಿಫಲರಾದರು.
After a disappointing start to the opening day of the Olympic Games, the Indians got a new hope. Manu Bhaker, who failed to make it to the final of the Tokyo Olympics due to a pistol error, has qualified for the final this time.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm