ಬ್ರೇಕಿಂಗ್ ನ್ಯೂಸ್
08-12-20 11:55 am Headline Karnataka News Network ದೇಶ - ವಿದೇಶ
ಚೆನ್ನೈ, ಡಿ.7: ಶೌಚಕ್ಕೆಂದು ಹೊರಗಡೆ ಹೋದ ಸರ್ಕಾರಿ ಮಹಿಳಾ ಉದ್ಯೋಗಿಯೊಬ್ಬರು ದುರಂತವಾಗಿ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಮೃತರನ್ನು ಶರಣ್ಯ(24) ಎಂದು ಗುರುತಿಸಲಾಗಿದೆ. ಈಕೆ ಕಾಂಚೀಪುರಂ ಕೃಷಿ ಅಭಿವೃದ್ಧಿ ಇಲಾಖೆಯ ಗೋದಾಮಿನ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಶರಣ್ಯ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಕಚೇರಿಯಲ್ಲಿ ಮಹಿಳೆಯರಿಗೆಂದು ಪ್ರತ್ಯೇಕ ಶೌಚಾಲಯ ಇಲ್ಲದಿರುವುದೇ ಈ ದುರಂತಕ್ಕೆ ಕಾರಣವಾಗಿದೆ.
ಆಫೀಸಿನಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಮಹಿಳೆಯರು ಪಕ್ಕದ ಕಟ್ಟಡ ಅಥವಾ ಮನೆಗಳಿಗೆ ಹೋಗುತ್ತಿದ್ದರು. ಅಂತೆಯೇ ಶರಣ್ಯ ಅವರು ಶನಿವಾರ ಶೌಚಕ್ಕೆಂದು ಹೊರಗಡೆ ಹೋದವರು ಮತ್ತೆ ವಾಪಸ್ ಬರಲೇ ಇಲ್ಲ. ಹೊರಗಡೆ ಹೋದ ಶರಣ್ಯ ಆಫೀಸಿಗೆ ಬರದಿರುವುದರಿಂದ ಸಹೋದ್ಯೋಗಿಗಳು ಆಕೆಯನ್ನು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ಆಕೆ ನಿರ್ಮಾಣ ಹಂತದ ಮನೆಯೊಂದರ ತೆರೆದ ಸೆಪ್ಟಿಕ್ ಟ್ಯಾಂಕ್ ಒಳಗೆ ಬಿದ್ದು ಮೃತಪಟ್ಟಿದ್ದರು. ಈ ವಿಚಾರ ಶರಣ್ಯ ಕುಟುಂಬಕ್ಕೆ ಗೊತ್ತಾಗುತ್ತಿದ್ದಂತೆಯೇ ಪೋಷಕರ ಆಕ್ರಂದನ ಮುಗಿಲು ಮುಟ್ಟಿತು.
ಇಡೀ ಕುಟುಂಬವನ್ನು ಶರಣ್ಯ ನಿಭಾಯಿಸುತ್ತಿದ್ದರು. ಹೀಗಾಗಿ ತಂದೆ ಪಾಡು ಹೇಳತೀರದಾಗಿತ್ತು. ಶರಣ್ಯ ನನ್ನ ಜೀವ, ಆಕೆಯ ಸಾವನ್ನು ನನ್ನಿಂದ ಅರಗಿಸಿಕೊಳ್ಳಲು ಸಾಧ್ಯವಾಗ್ತಿಲ್ಲ. ನನ್ನ ಮಗಳು ಐಎಎಸ್ ಕನಸು ಕಂಡಿದ್ದಳು. ಕೆಲಸ ಮಾಡುತ್ತಲೇ ಐಎಎಸ್ ಗೆ ತಯಾರಾಗಲು ನಿರ್ಧರಿಸಿದ್ದಳು. ಆಕೆಯ ಕನಸು ಸಾವಿನೊಂದಿಗೆ ಕೊನೆಯಾಯಿತು ಎಂದು ಶರಣ್ಯ ತಂದೆ ಷಣ್ಮುಗಂ ಕಣ್ಣೀರು ಹಾಕಿದ್ದಾರೆ.
ಶರಣ್ಯ ಟಿಎಸ್ಪಿಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಇದೇ ವರ್ಷ ಮಾರ್ಚ್ ತಿಂಗಳಲ್ಲಿ ಸರ್ಕಾರಿ ಉದ್ಯೋಗಕ್ಕೆ ಸೇರಿಕೊಂಡಿದ್ದಳು. ಆಕೆ ಈ ಹಿಂದೆ ಒಂದು ಬಾರಿ ಕೆಲಸ ಬಿಡುವ ನಿರ್ಧಾರ ಕೂಡ ಮಾಡಿದ್ದಳು. ಪ್ರತಿ ದಿನ ಆಕೆ ತನ್ನ ಸಹೋದ್ಯೋಗಿಗಳ ಜೊತೆಯೇ ಶೌಚಕ್ಕೆ ಹೋಗುತ್ತಿದ್ದಳು. ಆದರೆ ಈ ಬಾರಿ ಯಾಕೆ ಹೀಗಾಯ್ತು ಅಂತ ಗೊತ್ತಾಗುತ್ತಿಲ್ಲ ಎಂದು ತಂದೆ ಕಣ್ಣೀರು ಹಾಕಿದರು.
A 24-year-old Tamil Nadu government employee on Saturday died after she slipped and fell into an unclosed septic tank in an under-construction house where she had gone to relieve herself.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm