ಬ್ರೇಕಿಂಗ್ ನ್ಯೂಸ್
28-07-24 04:59 pm HK News Desk ದೇಶ - ವಿದೇಶ
ಪ್ಯಾರಿಸ್, ಜುಲೈ 28: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಮೊದಲ ಪದಕ ಗೆದ್ದುಕೊಂಡಿದ್ದು, ಶೂಟಿಂಗ್ ನಲ್ಲಿ ಮನು ಭಾಕರ್ ಕಂಚಿನ ಪದಕಕ್ಕೆ ಗುರಿಯಿಟ್ಟಿದ್ದಾರೆ.
10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಮನು ಬಾಕರ್ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಈ ಸಾಧನೆಯ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲಿ ಶೂಟಿಂಗ್ ವಿಭಾಗದಲ್ಲಿ ಪದಕ ಜಯಿಸಿದ ಭಾರತದ ಮೊದಲ ಮಹಿಳೆ ಎನಿಸಿಕೊಂಡರು. ಈ ಮಧ್ಯೆ ಅರ್ಜುನ್ ಬಬುಟಾ ಮತ್ತು ರಮಿತಾ ಜಿಂದಾಲ್ ಪುರುಷರ ಮತ್ತು ಮಹಿಳೆಯರ ಏರ್ ರೈಪಲ್ ವಿಭಾಗದಲ್ಲಿ ಪೈನಲ್ ಪ್ರವೇಶಿಸಿದ್ದು ಭಾರತದ ಪದಕದ ಆಸೆಯನ್ನು ಜೀವಂತವಿರಿಸಿಕೊಂಡಿದ್ದಾರೆ. ರೋವಿಂಗ್ ಸ್ಪರ್ಧೆಯಲ್ಲಿ ಬಲರಾಜ್ ಪನ್ವಲ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಒಲಿಂಪಿಕ್ಸ್ ಹಾಕಿ, ಭಾರತ ಶುಭಾರಂಭ
ಒಲಿಂಪಿಕ್ಸ್ ಕ್ರೀಡಾಕೂಟದ ಹಾಕಿ ಟೂರ್ನಿಯಲ್ಲಿ ಭಾರತ ನ್ಯೂಜಿಲೆಂಡ್ ತಂಡವನ್ನು 3-2ರಿಂದ ಸೋಲಿಸಿ ಶುಭಾರಂಭ ಮಾಡಿದೆ.
ಮೊದಲಾರ್ಧದಲ್ಲಿ ಒಂದು ಗೋಲಿನ ಹಿನ್ನಡೆ ಕಂಡಿದ್ದ ಟೋಕಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಭಾರತ ಮುಂದಿನ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ, ಹಿನ್ನಡೆ ನೀಗಿಸಿ ಗೆಲುವು ಸಾಧಿಸಿತು. ಎಂಟನೇ ನಿಮಿಷದಲ್ಲೇ ಸಿಕ್ಕ ಪೆನಾಲ್ಟಿ ಅವಕಾಶದಲ್ಲಿ ನ್ಯೂಜಿಲೆಂಡ್ ಮುನ್ನಡೆ ಸಾಧಿಸಿತು.
ದ್ವಿತೀಯ ಅವಧಿಯಲ್ಲಿ ಭಾರತ, ನ್ಯೂಜಿಲೆಂಡ್ ತಂಡದ ರಕ್ಷಣೆಯನ್ನು ಬೇಧಿಸಿತು. ದ್ವಿತೀಯ ಅವಧಿ ಮುಗಿಯಲು ಕೆಲವೇ ಕ್ಷಣಗಳಿರುವಾಗ ಮಂದೀಪ್ ಸಿಂಗ್ ಗೋಲು ಬಾರಿಸಿ ಸಮಬಲಕ್ಕೆ ತಂದರು. ಮೂರನೇ ಅವಧಿಯ ನಾಲ್ಕನೇ ನಿಮಿಷದಲ್ಲಿ ವಿವೇಕ್ ಸಾಗರ್ ಪ್ರಸಾದ್ ಗೋಲು ಬಾರಿಸಿ ಮುನ್ನಡೆ ಒದಗಿಸಿದರು. ಅಂತಿಮ ಅವಧಿಯಲ್ಲಿ ಮೊದಲಿಗೆ ನ್ಯೂಜಿಲೆಂಡ್ ಗೋಲು ಬಾರಿಸಿ ಅಂತರ ಸಮಬಲ ಮಾಡಿದರೂ, ನಾಯಕ ಹರ್ಮನ್ ಪ್ರೀತ್ ಸಿಂಗ್ ಕೊನೆಯ ಕ್ಷಣದಲ್ಲಿ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ಬಾರಿಸಿ ಭಾರತದ ಗೆಲುವಿಗೆ ಕಾರಣರಾದರು.
Indian shooter Manu Bhaker and the women's archery team are set to compete for India's first medal at the Paris 2024 Olympics on Sunday, July 28. Additionally, badminton star PV Sindhu and two-time boxing world champion Nikhat Zareen will begin their quests for Olympic glory on the same day.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm