ಬ್ರೇಕಿಂಗ್ ನ್ಯೂಸ್
31-07-24 03:36 pm HK News Desk ದೇಶ - ವಿದೇಶ
ವಯನಾಡ್, ಜುಲೈ.31: ಭೀಕರ ಭೂಕುಸಿತ ಸಂಭವಿಸಿದ್ದರಿಂದ ಚೂರಲ್ಮಲ ಎಸ್ಟೇಟ್ ಕ್ವಾಟರ್ಸ್ ಕೊಚ್ಚಿಕೊಂಡು ಹೋಗಿ 9 ಜನ ಕನ್ನಡಿಗರು ನಾಪತ್ತೆಯಗಿದ್ದಾರೆ.
ಗುರುಮಲ್ಲಣ್ಣ (60), ಸಾವಿತ್ರಿ (54), ಸಬೀತಾ (43), ಶಿವಣ್ಣ (50), ಅಪ್ಪಣ್ಣ (39), ಅಶ್ವಿನ್ (13), ಜೀತು (11), ದಿವ್ಯ (35), ರತ್ನ (48) ಜಲಪ್ರಳಯದಲ್ಲಿ ನಾಪತ್ತೆಯಾಗಿರುವ ಕನ್ನಡಿಗರು.
ಘಟನೆಯಲ್ಲಿ 11 ಜನ ನಾಪತ್ತೆಯಾಗಿದ್ದು, ಇಬ್ಬರ ಮೃತದೇಹ ಸಿಕ್ಕಿದೆ. ಇನ್ನೂ 9 ಜನರ ಮೃತದೇಹ ಸಿಗಲಿಲ್ಲ ಎಂದು ತಿಳಿದು ಬಂದಿದೆ.



ನೀರಲ್ಲಿ ಯಾರಿಗೂ ಇಳಿಯುವುದಕ್ಕೆ ಆಗುತ್ತಿಲ್ಲ. ಅವರನ್ನು ಹುಡುಕಬೇಕೆಂದರೆ 90 ಕಿ.ಮೀ. ದೂರ ಹೋಗಿ ಹುಡುಕಬೇಕು. ಆದರೆ ಅವರು ಅಲ್ಲಿ ಇದ್ದಾರೋ, ಇಲ್ವೋ ಗೊತ್ತಿಲ್ಲ? ಇವಾಗ 30-40 ಶವಗಳು ಸಿಕ್ಕಿದ್ದಾವೆ ಎಂದು ಹೇಳುತ್ತಿದ್ದಾರೆ ನೋಡಬೇಕು ಎಂದು ನಾಪತ್ತೆಯಾದವರ ಸಂಬಂಧಿಕ ರವಿ ಅಸಾಹಾಯಕತೆಯನ್ನು ತೊಡಿಕೊಂಡಿದ್ದಾರೆ.
ನಾವು ಸರಕಾರದಿಂದ ಕೊಡಿಸಲಾಗಿದ್ದ ಮನೆಯಲ್ಲಿದ್ದಿವಿ. ನಮ್ಮ ಸಂಬಂಧಿಕರು ಅವರಿದ್ದ ಸ್ವಂತ ಮನೆಯಿಂದ ಕೊಚ್ಚಿಕೊಂಡು ಹೋಗಿದ್ದಾರೆ. ಮನೆಯಲ್ಲಿರುವುದರಿಂದ ಹೀಗೆ ಆಗುವುದಿಲ್ಲವೆಂದು ನಂಬಿ ಅವರು ಅಲ್ಲೇ ಉಳಿದುಕೊಂಡಿದ್ದರು. ಹೀಗೆ ಆಗುತ್ತೆ ಎಂದು ಯಾರು ತಿಳಿದುಕೊಂಡಿಲ್ಲ. ಇವಾಗ ಹೋದವರು ನಮ್ಮ ನಾದಿನಿಯ ಕುಟುಂಬದವರು ಎಂದು ಹೇಳುತ್ತಾ, ನಮ್ಮ ದೊಡ್ಡಪ್ಪನ ಮಗಳು ಮತ್ತು ಭಾವನಿಗೆ ಆಶ್ರಮಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ದುಃಖತಪ್ತರಾಗಿ ತಿಳಿಸಿದರು.
2018-19 ರಲ್ಲಿಯೂ ಕೂಡ ಇಲ್ಲಿ ಸ್ವಲ್ಪ ಭೂಕುಸಿತ ಸಂಭವಿಸಿತ್ತು. ಅದರ ಅನುಭವ ನಮಗಿದೆ. ಆ ಹೆದರಿಕೆಯಿಂದ ಜನರು ಬೇರೆ ಕಡೆಗೆ ಸ್ಥಳಾಂತರ ಆಗಿದ್ದರು. ನಾವು ಬಂದಾಗ ಹೆಚ್ಚು ಜನ ಕನ್ನಡಿಗರು ಇಲ್ಲಿ ಇದ್ದರು. ಹೀಗೆ ಆಗಿದ್ದರಿಂದ ಇವಾಗ ಎಲ್ಲರೂ ವಾಪಸ್ ಹೋಗಿದ್ದಾರೆ. ಇವಾಗ 500 ಜನ ಕನ್ನಡಿಗರು ಇಲ್ಲಿ ಇರಬಹುದು ಎಂದವರು ನೆನಪಿಸಿಕೊಂಡರು.
ರವಿ ಮತ್ತು ಅವರ ಸಂಬಂಧಿಕರು ಮೂಲತಃ ಕರ್ನಾಟಕದ ಗುಂಡ್ಲುಪೇಟೆಯ ನಿವಾಸಿಯಾಗಿದ್ದಾರೆ. ಕನ್ನಡಿಗರ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಇನ್ನು ಕೇರಳದಲ್ಲಿ ಉಂಟಾಗಿರುವ ಭೂ ಕುಸಿತದಲ್ಲಿ ಒಟ್ಟು 9 ಮಂದಿ ಕನ್ನಡಿಗರ ಶವ ಪತ್ತೆಯಾಗಿವೆ. ಚಾಮರಾಜನಗರ ಮೂಲದ ನಾಲ್ವರು, ಮಂಡ್ಯ ಜಿಲ್ಲೆಯ ಮೂವರು, ಕೆಆರ್ ಪೇಟೆ ಮೂಲದ ಇಬ್ಬರು ಕನ್ನಡಿಗರು ಸಾವನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Kerala Wayanad landslide, nine from Karnataka found dead. Four people from chamarajanagar, three from mandya and two from KR Pete.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm