ಬ್ರೇಕಿಂಗ್ ನ್ಯೂಸ್
31-07-24 08:15 pm HK News Desk ದೇಶ - ವಿದೇಶ
ಮುಂಬೈ, ಜುಲೈ.31: ಮಹಾರಾಷ್ಟ್ರದ ವಿವಾದಿತ ಪ್ರೊಬೇಶನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ನೇಮಕಾತಿಯನ್ನು ಕೇಂದ್ರ ಲೋಕಸೇವಾ ಆಯೋಗವು ರದ್ದುಪಡಿಸಿದ್ದು, ಆಕೆ ಭವಿಷ್ಯದಲ್ಲಿ ಯಾವುದೇ ಲೋಕಸೇವಾ ಆಯೋಗದ ಪರೀಕ್ಷೆಯನ್ನು ತೆಗೆದುಕೊಳ್ಳುವುದನ್ನ ನಿರ್ಬಂಧಿಸಿದೆ. ಇತ್ತೀಚೆಗಷ್ಟೇ ಪೂಜಾಗೆ ಯುಪಿಎಸ್ಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಖೇಡ್ಕರ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿತ್ತು. ನಕಲಿ ದಾಖಲೆಗಳ ಮೂಲಕ ಸಿವಿಲ್ ಸರ್ವೀಸ್ ಪರೀಕ್ಷೆಯನ್ನು ನಿಗದಿಗಿಂತ ಹೆಚ್ಚಿನ ಪ್ರಯತ್ನಗಳನ್ನು ಪಡೆದಿದ್ದಾಳೆ ಎಂದು ಆರೋಪಿಸಲಾಗಿತ್ತು.
ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಜುಲೈ 19 ರಂದು ಖೇಡ್ಕರ್ ಅವರನ್ನು ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಉಮೇದುವಾರಿಕೆ ಪಡೆಯಲು ಅಂಗವೈಕಲ್ಯ ಮತ್ತು ಇತರ ಹಿಂದುಳಿದ ವರ್ಗಗಳ (ಕೆನೆಪದರವಲ್ಲದ) ಕೋಟಾಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕೇಸ್ ದಾಖಲಿಸಿತ್ತು.
ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಿದ ಬಳಿಕ, ಯುಪಿಎಸ್ಸಿ-2022 ನಿಯಮಗಳ ನಿಬಂಧನೆಗಳಿಗೆ ವಿರುದ್ಧವಾಗಿ ವರ್ತಿಸಿದ್ದು ಮೇಲ್ನೋಟಕ್ಕೆ ತಪ್ಪಿತಸ್ಥರೆಂದು ಕಂಡುಬಂದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಯುಪಿಎಸ್ ಸಿ ಹೇಳಿದೆ. 2022 ರಲ್ಲಿ ಆಯ್ಕೆಯಾದ ಪೂಜಾ ಖೇಡ್ಕರ್ ಅವರ ತಾತ್ಕಾಲಿಕ ನೇಮಕಾತಿಯನ್ನು ರದ್ದುಗೊಳಿಸಲಾಗಿದೆ ಮತ್ತು ಮುಂದಿನ ಎಲ್ಲಾ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್ ಮಾಡಲಾಗಿದೆ ಎಂದು ಯುಪಿಎಸ್ಸಿ ಅಧಿಕೃತ ಹೇಳಿಕೆ ನೀಡಿದೆ.
The selection of Puja Khedkar as a trainee IAS officer has been cancelled and she has been barred for taking the entrance exam for life after the Union Public Service Commission (UPSC) found her guilty of faking her identity to take the exam multiple times.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm