ಬ್ರೇಕಿಂಗ್ ನ್ಯೂಸ್
01-08-24 01:07 pm HK News Desk ದೇಶ - ವಿದೇಶ
ಲಕ್ನೋ, ಆಗಸ್ಟ್.1: ಲವ್ ಜಿಹಾದ್, ಧಾರ್ಮಿಕ ಮತಾಂತರ ಸಂಬಂಧಿಸಿ ಹೊಸ ಮಸೂದೆಯೊಂದನ್ನು ಉತ್ತರಪ್ರದೇಶ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಮಸೂದೆ ಮೂಲಕ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವ ಅವಕಾಶವಿದ್ದು, ಕಾನೂನಿನಲ್ಲಿ ಲವ್ ಜಿಹಾದ್ ಸಂಬಂಧಿಸಿದ ಹಲವು ಅಪರಾಧಗಳಿಗೆ ಶಿಕ್ಷೆಯನ್ನು ದ್ವಿಗುಣಗೊಳಿಸಲಾಗಿದೆ.
ಹೊಸ ಮಸೂದೆಯಲ್ಲಿನ ನಿಬಂಧನೆಗಳು
ಹೊಸ ಕಾನೂನಿನಲ್ಲಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಯ ಅವಕಾಶವಿದೆ. ಮತಾಂತರದ ಪ್ರಕರಣಗಳಲ್ಲಿ ಈಗ ಯಾವುದೇ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲಿಸಬಹುದು. ಈ ಮೊದಲು ಮಾಹಿತಿ ಅಥವಾ ದೂರು ನೀಡಲು ಸಂತ್ರಸ್ತೆ, ಪೋಷಕರು ಅಥವಾ ಒಡಹುಟ್ಟಿದವರ ಉಪಸ್ಥಿತಿ ಅಗತ್ಯವಾಗಿತ್ತು.
ಸೆಷನ್ಸ್ ನ್ಯಾಯಾಲಯದ ಕೆಳಗಿರುವ ಯಾವುದೇ ನ್ಯಾಯಾಲಯವು ಲವ್ ಜಿಹಾದ್ ಪ್ರಕರಣಗಳ ವಿಚಾರಣೆ ನಡೆಸುವಂತಿಲ್ಲ. ಲವ್ ಜಿಹಾದ್ ಪ್ರಕರಣದಲ್ಲಿ ಸರ್ಕಾರಿ ವಕೀಲರಿಗೆ ಅವಕಾಶ ನೀಡದೆ ಜಾಮೀನು ಅರ್ಜಿಯನ್ನು ಪರಿಗಣಿಸುವುದಿಲ್ಲ. ಇದಲ್ಲದೆ, ಮಸೂದೆ ಪ್ರಕಾರ ಸಂಬಂಧಿತ ಎಲ್ಲ ಅಪರಾಧಗಳನ್ನು ಜಾಮೀನು ರಹಿತವನ್ನಾಗಿ ಮಾಡಲಾಗಿದೆ.
ಉತ್ತರ ಪ್ರದೇಶದ ಯೋಗಿ ಸರ್ಕಾರವು 2020ರಲ್ಲಿ ಲವ್ ಜಿಹಾದ್ ವಿರುದ್ಧ ಮೊದಲ ಬಾರಿಗೆ ಕಾನೂನನ್ನು ಮಾಡಿತ್ತು. ಇದರ ನಂತರ, ಯುಪಿ ಸರ್ಕಾರವು ಅಸೆಂಬ್ಲಿಯಲ್ಲಿ ಧಾರ್ಮಿಕ ಮತಾಂತರ ನಿಷೇಧ ಮಸೂದೆ 2021 ಅನ್ನು ಅಂಗೀಕರಿಸಿತ್ತು. ಈ ಮಸೂದೆಯಲ್ಲಿ 1 ರಿಂದ 10 ವರ್ಷಗಳವರೆಗೆ ಶಿಕ್ಷೆಗೆ ಅವಕಾಶವಿತ್ತಲ್ಲದೆ, ಮದುವೆ ಉದ್ದೇಶಕ್ಕಾಗಿ ಮಾತ್ರ ಮಾಡುವ ಧಾರ್ಮಿಕ ಮತಾಂತರವನ್ನು ಅಸಿಂಧು ಎಂದು ಪರಿಗಣಿಸುವ ಅವಕಾಶವಿತ್ತು. ಈಗ ಅದೇ ಮಸೂದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲಾಗಿದೆ.
ಈ ಹಿಂದೆ, ಯುಪಿಯಲ್ಲಿ ಮಾಡಿದ ಹಳೆಯ ಕಾನೂನಿನ ಪ್ರಕಾರ, ಸುಳ್ಳು ಅಥವಾ ಮೋಸ ಮಾಡುವ ಮೂಲಕ ಧರ್ಮ ಪರಿವರ್ತಿಸುವುದನ್ನು ಅಪರಾಧವೆಂದು ಪರಿಗಣಿಸಲಾಗುತ್ತದೆ. ಯಾರಾದರೂ ಸ್ವಯಂಪ್ರೇರಣೆಯಿಂದ ಮತಾಂತರಗೊಳ್ಳಲು ಬಯಸಿದರೆ, ಎರಡು ತಿಂಗಳ ಮುಂಚಿತವಾಗಿ ಮ್ಯಾಜಿಸ್ಟ್ರೇಟ್ಗೆ ತಿಳಿಸಬೇಕಾಗುತ್ತದೆ. ಮಸೂದೆಯ ಪ್ರಕಾರ, ಬಲವಂತದ ಅಥವಾ ಮೋಸದ ಧಾರ್ಮಿಕ ಮತಾಂತರಕ್ಕೆ 1-5 ವರ್ಷಗಳ ಜೈಲು ಶಿಕ್ಷೆಯೊಂದಿಗೆ 15,000 ರೂ. ದಂಡ ಇತ್ತು. ದಲಿತ ಯುವತಿಗೆ ಸಂಬಂಧಿಸಿದ ಪ್ರಕರಣವಾಗಿದ್ದರೆ, 3 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆಯೊಂದಿಗೆ 25 ಸಾವಿರ ರೂಪಾಯಿ ದಂಡ ಇತ್ತು.
The Uttar Pradesh Assembly on Tuesday passed the UP Prohibition of Unlawful Conversion of Religion (Amendment) Bill, 2024, providing for a maximum punishment of life imprisonment to the offenders convicted under certain circumstances.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 10:47 pm
Mangalore Correspondent
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm