ಬ್ರೇಕಿಂಗ್ ನ್ಯೂಸ್
01-08-24 01:07 pm HK News Desk ದೇಶ - ವಿದೇಶ
ಲಕ್ನೋ, ಆಗಸ್ಟ್.1: ಲವ್ ಜಿಹಾದ್, ಧಾರ್ಮಿಕ ಮತಾಂತರ ಸಂಬಂಧಿಸಿ ಹೊಸ ಮಸೂದೆಯೊಂದನ್ನು ಉತ್ತರಪ್ರದೇಶ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಮಸೂದೆ ಮೂಲಕ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವ ಅವಕಾಶವಿದ್ದು, ಕಾನೂನಿನಲ್ಲಿ ಲವ್ ಜಿಹಾದ್ ಸಂಬಂಧಿಸಿದ ಹಲವು ಅಪರಾಧಗಳಿಗೆ ಶಿಕ್ಷೆಯನ್ನು ದ್ವಿಗುಣಗೊಳಿಸಲಾಗಿದೆ.
ಹೊಸ ಮಸೂದೆಯಲ್ಲಿನ ನಿಬಂಧನೆಗಳು
ಹೊಸ ಕಾನೂನಿನಲ್ಲಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಯ ಅವಕಾಶವಿದೆ. ಮತಾಂತರದ ಪ್ರಕರಣಗಳಲ್ಲಿ ಈಗ ಯಾವುದೇ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲಿಸಬಹುದು. ಈ ಮೊದಲು ಮಾಹಿತಿ ಅಥವಾ ದೂರು ನೀಡಲು ಸಂತ್ರಸ್ತೆ, ಪೋಷಕರು ಅಥವಾ ಒಡಹುಟ್ಟಿದವರ ಉಪಸ್ಥಿತಿ ಅಗತ್ಯವಾಗಿತ್ತು.
ಸೆಷನ್ಸ್ ನ್ಯಾಯಾಲಯದ ಕೆಳಗಿರುವ ಯಾವುದೇ ನ್ಯಾಯಾಲಯವು ಲವ್ ಜಿಹಾದ್ ಪ್ರಕರಣಗಳ ವಿಚಾರಣೆ ನಡೆಸುವಂತಿಲ್ಲ. ಲವ್ ಜಿಹಾದ್ ಪ್ರಕರಣದಲ್ಲಿ ಸರ್ಕಾರಿ ವಕೀಲರಿಗೆ ಅವಕಾಶ ನೀಡದೆ ಜಾಮೀನು ಅರ್ಜಿಯನ್ನು ಪರಿಗಣಿಸುವುದಿಲ್ಲ. ಇದಲ್ಲದೆ, ಮಸೂದೆ ಪ್ರಕಾರ ಸಂಬಂಧಿತ ಎಲ್ಲ ಅಪರಾಧಗಳನ್ನು ಜಾಮೀನು ರಹಿತವನ್ನಾಗಿ ಮಾಡಲಾಗಿದೆ.
ಉತ್ತರ ಪ್ರದೇಶದ ಯೋಗಿ ಸರ್ಕಾರವು 2020ರಲ್ಲಿ ಲವ್ ಜಿಹಾದ್ ವಿರುದ್ಧ ಮೊದಲ ಬಾರಿಗೆ ಕಾನೂನನ್ನು ಮಾಡಿತ್ತು. ಇದರ ನಂತರ, ಯುಪಿ ಸರ್ಕಾರವು ಅಸೆಂಬ್ಲಿಯಲ್ಲಿ ಧಾರ್ಮಿಕ ಮತಾಂತರ ನಿಷೇಧ ಮಸೂದೆ 2021 ಅನ್ನು ಅಂಗೀಕರಿಸಿತ್ತು. ಈ ಮಸೂದೆಯಲ್ಲಿ 1 ರಿಂದ 10 ವರ್ಷಗಳವರೆಗೆ ಶಿಕ್ಷೆಗೆ ಅವಕಾಶವಿತ್ತಲ್ಲದೆ, ಮದುವೆ ಉದ್ದೇಶಕ್ಕಾಗಿ ಮಾತ್ರ ಮಾಡುವ ಧಾರ್ಮಿಕ ಮತಾಂತರವನ್ನು ಅಸಿಂಧು ಎಂದು ಪರಿಗಣಿಸುವ ಅವಕಾಶವಿತ್ತು. ಈಗ ಅದೇ ಮಸೂದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲಾಗಿದೆ.
ಈ ಹಿಂದೆ, ಯುಪಿಯಲ್ಲಿ ಮಾಡಿದ ಹಳೆಯ ಕಾನೂನಿನ ಪ್ರಕಾರ, ಸುಳ್ಳು ಅಥವಾ ಮೋಸ ಮಾಡುವ ಮೂಲಕ ಧರ್ಮ ಪರಿವರ್ತಿಸುವುದನ್ನು ಅಪರಾಧವೆಂದು ಪರಿಗಣಿಸಲಾಗುತ್ತದೆ. ಯಾರಾದರೂ ಸ್ವಯಂಪ್ರೇರಣೆಯಿಂದ ಮತಾಂತರಗೊಳ್ಳಲು ಬಯಸಿದರೆ, ಎರಡು ತಿಂಗಳ ಮುಂಚಿತವಾಗಿ ಮ್ಯಾಜಿಸ್ಟ್ರೇಟ್ಗೆ ತಿಳಿಸಬೇಕಾಗುತ್ತದೆ. ಮಸೂದೆಯ ಪ್ರಕಾರ, ಬಲವಂತದ ಅಥವಾ ಮೋಸದ ಧಾರ್ಮಿಕ ಮತಾಂತರಕ್ಕೆ 1-5 ವರ್ಷಗಳ ಜೈಲು ಶಿಕ್ಷೆಯೊಂದಿಗೆ 15,000 ರೂ. ದಂಡ ಇತ್ತು. ದಲಿತ ಯುವತಿಗೆ ಸಂಬಂಧಿಸಿದ ಪ್ರಕರಣವಾಗಿದ್ದರೆ, 3 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆಯೊಂದಿಗೆ 25 ಸಾವಿರ ರೂಪಾಯಿ ದಂಡ ಇತ್ತು.
The Uttar Pradesh Assembly on Tuesday passed the UP Prohibition of Unlawful Conversion of Religion (Amendment) Bill, 2024, providing for a maximum punishment of life imprisonment to the offenders convicted under certain circumstances.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm