ಬ್ರೇಕಿಂಗ್ ನ್ಯೂಸ್
01-08-24 02:10 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 1: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿಯೇ ಅತ್ಯಂತ ಹಿಂದುಳಿದ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠ, SC, ST ಒಳ ಮೀಸಲಾತಿ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ. ಹೆಚ್ಚು ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡುವುದನ್ನು ಖಚಿತ ಪಡಿಸಿಕೊಳ್ಳಲು ರಾಜ್ಯಗಳು ಎಸ್ಸಿ ಮತ್ತು ಎಸ್ಟಿಗಳಲ್ಲಿಯೇ ಒಳ ಮೀಸಲಾತಿ ನೀಡಬಹುದು ಮತ್ತು ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಈ ಮೀಸಲಾತಿ ಜಾರಿಗೆ ತರಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಏಳು ನ್ಯಾಯಮೂರ್ತಿಗಳ ಪೈಕಿ ಆರು ಮಂದಿ ಒಳಮೀಸಲಾತಿಯ ಪರ ತೀರ್ಪು ನೀಡಿದ್ದು, ಒಬ್ಬರು ಮಾತ್ರ(ನ್ಯಾ. ಬೇಲಾ ತ್ರಿವೇದಿ) ಒಳ ಮೀಸಲಾತಿ ವಿರುದ್ಧವಾಗಿ ತೀರ್ಪು ನೀಡಿದ್ದಾರೆ. ಹಾಗಾಗಿ 6:1 ರ ಅನುಪಾತದಡಿ, ಉಪ ವರ್ಗೀಕರಣ ಆಧಾರಿತ ಮೀಸಲಾತಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಬಹುಮತದ ತೀರ್ಪು ಈ ಹಿಂದೆ ಒಳ ಮೀಸಲಾತಿಯನ್ನು ತಿರಸ್ಕರಿಸಿದ್ದ ಇವಿ ಚಿನ್ನಯ್ಯ ವರ್ಸಸ್ ಆಂಧ್ರಪ್ರದೇಶ ಪ್ರಕರಣದಲ್ಲಿ ಐವರು ನ್ಯಾಯಾಧೀಶರ ಸಂವಿಧಾನ ಪೀಠ ನೀಡಿದ್ದ 2004 ರ ತೀರ್ಪನ್ನು ರದ್ದುಗೊಳಿಸಿದೆ. ಮೀಸಲಾತಿ ವರ್ಗದ ಸಮುದಾಯಗಳ ಒಳ ಮೀಸಲಾತಿ ಒಳಗೊಂಡಿರುವ ಪಂಜಾಬ್ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ(ಸೇವೆಗಳಲ್ಲಿ ಮೀಸಲಾತಿ) ಕಾಯಿದೆ, 2006 ರ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈ ತೀರ್ಪು ಪ್ರಕಟಿಸಿದೆ.
The Supreme Court on Thursday said individual States’ decision to provide preferential allotment of reservation benefits to the most backward groups or “the untouchables among the untouchables” will not amount to tinkering with the power of the Parliament to include or exclude Scheduled Castes or Scheduled Tribes from the Presidential list.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm