ಬ್ರೇಕಿಂಗ್ ನ್ಯೂಸ್
01-08-24 07:57 pm HK News Desk ದೇಶ - ವಿದೇಶ
ವಯನಾಡ್, ಆಗಸ್ಟ್.1: ದೇವರನಾಡು ಕೇರಳದ ವಯನಾಡು ಜಿಲ್ಲೆಯ ನಾಲ್ಕು ಗ್ರಾಮಗಳ ಸ್ಥಿತಿ ಅಕ್ಷರಶಃ ಸ್ಮಶಾನ ಸದೃಶವಾಗಿದೆ. ಎಲ್ಲಿ ನೋಡಿದರೂ ಹೆಣಗಳ ರಾಶಿ, ತಮ್ಮವರನ್ನು ಕಳೆದುಕೊಂಡು ಅನಾಥರಾದವರ ರೋದನ. ಸದ್ಯಕ್ಕೆ ಪತ್ತೆಯಾದ ಶವಗಳ ಸಂಖ್ಯೆ 270 ದಾಟಿದ್ದರೆ, 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. 400ಕ್ಕೂ ಹೆಚ್ಚು ಮನೆಗಳಿದ್ದ ಮುಂಡಕೈ ಗ್ರಾಮ ಪೂರ್ತಿ ನೆಲಸಮವಾಗಿದ್ದು, ಅಲ್ಲೀಗ 40ರಷ್ಟು ಮನೆಗಳು ಮಾತ್ರ ಉಳಿದುಕೊಂಡಿವೆ ಎಂದರೆ, ಅಲ್ಲಿನ ಘೋರ ಸ್ಥಿತಿ ಅರ್ಥವಾಗುತ್ತದೆ.
ದುರಂತ ನಡೆದಿರುವ ಗ್ರಾಮಗಳಲ್ಲಿ ಒಬ್ಬೊಬ್ಬರದ್ದು ಒಂದೊಂದು ನೋವಿನ ಕಥೆಯಾಗಿದೆ. ಸತ್ತವರಿಗಿಂತಲೂ ಬದುಕುಳಿದವರ ಸ್ಥಿತಿಯೇ ಘೋರ ಅನ್ನಿಸುವಂತಿದೆ. ತಮ್ಮವರನ್ನೆಲ್ಲ ಕಳಕೊಂಡು ಉಳಿದುಕೊಂಡಿರುವ ಒಂದಿಬ್ಬರು ತಮ್ಮದೆನ್ನುವ ಯಾವುದನ್ನೂ ಉಳಿಸಿಕೊಂಡಿಲ್ಲ. ಉಟ್ಟ ಬಟ್ಟೆಯನ್ನಷ್ಟೇ ಉಳಿಸಿಕೊಂಡಿದ್ದು, ಮನೆ, ಸೊತ್ತು, ಸಂಬಂಧಿಕರನ್ನೆಲ್ಲ ಕಳಕೊಂಡವರು ಗೋಳಿಡುತ್ತಿದ್ದಾರೆ. ಮುಂಡಕೈ ಗ್ರಾಮದ ಜಿಷ್ಣು ರಂಜನ್ ತಮ್ಮವರನ್ನು ಸಾಹಿ ಸಲಹುವುದಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದವರು. ಆದರೆ, ಜಿಷ್ಣುವಿನ ಒಬ್ಬ ಸಣ್ಣ ಸೋದರ ಬಿಟ್ಟರೆ, ತಂದೆ, ತಾಯಿ, ಅಜ್ಜಿ, ಪತ್ನಿ ತನ್ನವರೆಲ್ಲರನ್ನೂ ಕಳಕೊಂಡಿದ್ದಾರೆ.













ಜಿಷ್ಣು ರಂಜನ್ ಸೌದಿ ಅರೇಬಿಯಾದಲ್ಲಿ ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದ. ದುರಂತಕ್ಕೀಡಾದ ಮುಂಡಕೈ ಗ್ರಾಮದ ಪುಂಜಿರಿವಟ್ಟಂ ಎಂಬಲ್ಲಿ ಅವರಿದ್ದ ಮನೆಯೇ ಮಣ್ಣಿನಲ್ಲಿ ಸಮಾಧಿಯಾಗಿದೆ. ಆತನ ಮನೆಯಲ್ಲಿ ತಂದೆ ರಾಜನ್, ತಾಯಿ ಮರುತೈ, ಸೋದರರಾದ ಜಿನು (27), ಜಿಬಿನ್ (18), ಸೋದರಿ ಆಯಂಡ್ರಿಯಾ (16), ಜಿನು ಅವರ ಪತ್ನಿ ಪ್ರಿಯಾಂಕಾ (25) ಮತ್ತು ಅಜ್ಜಿ ನಾಗಮ್ಮ ವಾಸವಿದ್ದರು. ಇದೀಗ ಅವರೆಲ್ಲರೂ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಮನೆಯಲ್ಲಿದ್ದ ಸಣ್ಣ ಸೋದರ ಶಿಜು (25) ಮಾತ್ರ ದುರಂತದಲ್ಲಿ ಬದುಕುಳಿದಿದ್ದಾನೆ. ಮುಂಡಕೈ ಭಾಗದಲ್ಲಿ ಜುಲೈ 28ರಂದು ಸಣ್ಣ ಮಟ್ಟಿನ ಭೂಕುಸಿತ ಉಂಟಾಗಿತ್ತು. ಇದನ್ನರಿತ ಸೌದಿ ಅರೇಬಿಯಾದಲ್ಲಿದ್ದ ಜಿಷ್ಣು ಗಾಬರಿಯಿಂದ ಮನೆಯವರಿಗೆ ಕರೆ ಮಾಡಿದ್ದರೂ ಸಂಪರ್ಕ ಸಿಕ್ಕಿರಲಿಲ್ಲ.
ಗಾಬರಿಗೊಂಡಿದ್ದ ಜಿಷ್ಣು ಮನೆಯವರ ಸಂಪರ್ಕಕ್ಕಾಗಿ ಪ್ರಯತ್ನಿಸುತ್ತಲೇ ಇದ್ದರು. ಜುಲೈ 30ರ ಸಂಜೆ ತನಕವೂ ಮನೆಯವರ ಸಂಪರ್ಕ ಸಾಧ್ಯವಾಗಿರಲಿಲ್ಲ. ಆಗಲೇ ಅವರಿಗೆ ಮನೆ ಕೊಚ್ಚಿ ಹೋಗಿರುವ ಬಗ್ಗೆ ತಿಳಿದುಬಂದಿತ್ತು. ಅಂದು ಮನೆಯವರು ಸಂಬಂಧಿಕರ ಮನೆಯಲ್ಲಿದ್ದಾರೆಂದು ತಿಳಿದು ನಿಟ್ಟುಸಿರು ಬಿಟ್ಟಿದ್ದರೂ, ಆನಂತರ ತಿಳಿದ ಮಾಹಿತಿ ಅವರನ್ನೇ ದಂಗುಬಡಿಸಿತ್ತು. ಭೂಕುಸಿತದಿಂದ ಎರಡೂ ಮನೆಯವರು ಕೊಚ್ಚಿಕೊಂಡು ಹೋಗಿದ್ದಾರೆನ್ನುವ ಸುದ್ದಿ ಸಿಕ್ಕಿತ್ತು. ಆನಂತರ, ಸೌದಿಯಿಂದ ಮರಳಿ ಬಂದಿದ್ದ ಜಿಷ್ಣು ತನ್ನವರಿಗಾಗಿ ಹುಡುಕಾಟ ನಡೆಸಿದ್ದಾರೆ. ತಂದೆ, ತಾಯಿಯ ಶವ ಸಿಕ್ಕಿದ್ದರೆ, ಉಳಿದವರ ಶವವೂ ಸಿಗಲಿಲ್ಲ. ಒಬ್ಬ ಸೋದರನೊಂದಿಗೆ ಜಿಷ್ಣುಗೆ ಕಣ್ಣೀರಿಡುವುದು ಬಿಟ್ಟರೆ ಬೇರೇನೂ ಉಳಿದಿಲ್ಲ.
At least 256 people have died and over 200 were injured after massive landslides struck the hilly areas near Meppadi in Kerela's Wayanad, Health Minister Veena George said. The Army has rescued around 1,000 people and 220 people are still missing, as rescue operations entered the third day.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm