ಬ್ರೇಕಿಂಗ್ ನ್ಯೂಸ್
08-12-20 01:40 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಡಿ. 8 : ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತ್ ಬಂದ್ ನಡೆಸುತ್ತಿರುವ ರೈತ ಸಂಘಟನೆಗಳು ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಸುತ್ತಿವೆ.
ದೇಶದ ಬಹುತೇಕ ಕಡೆ ರಸ್ತೆ ತಡೆ, ರೈಲ್ ರೋಕೋ ಇತ್ಯಾದಿ ಪ್ರತಿಭಟನೆಗಳು ನಡೆಸಲಾಗುತ್ತಿದೆ. ಜನ ಸಾಮಾನ್ಯರಿಗೆ ತೊಂದರೆ ಆಗಬಾರದೆಂಬ ಉದ್ದೇಶದಿಂದ ರೈತರು ಎಲ್ಲಿಯೂ ಬಲವಂತದಿಂದ ಅಂಗಡಿ-ಮುಂಗಟ್ಟು, ಸಾರಿಗೆಯನ್ನು ಬಂದ್ ಮಾಡುವ ಕೆಲಸ ಮಾಡಿಲ್ಲ. ಆದರೆ, ಪ್ರತಿಯೊಂದು ಜಿಲ್ಲೆಗಳಲ್ಲೂ ರೈತರು ಅಲ್ಲಲ್ಲಿ ವಿವಿಧ ರೀತಿಯಲ್ಲಿ ಪ್ರತಿಭಟನೆಗಳನ್ನು ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಗಳ ಕೇಂದ್ರ ಬಿಂದುವಾಗಿರುವ ದಿಲ್ಲಿ -ಪಂಜಾಬ್-ಹರಿಯಾಣ ಗಡಿಭಾಗಗಳಲ್ಲಿ ಭಾರೀ ಬಿಗಿಭದ್ರತೆ ವಹಿಸಲಾಗಿದೆ. 13 ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿರುವ ದಿಲ್ಲಿ-ಹರಿಯಾಣ ಗಡಿಭಾಗವಾದ ಸಿಂಘು ಬಳಿ ಭದ್ರತೆ ಇಂದು ಇನ್ನಷ್ಟು ಹೆಚ್ಚಿಸಲಾಗಿದೆ. ದಿಲ್ಲಿಯೊಳಗೆ ಪ್ರತಿಭಟನಕಾರರು ನುಗ್ಗುವ ಸಾಧ್ಯತೆ ಇರುವುದರಿಂದ ಟಿಕ್ರಿ, ಝರೋಡಾ, ಧಾನ್ಸಾ ಗಡಿಭಾಗವನ್ನು ಪೊಲೀಸರು ಮುಚ್ಚಿದ್ದಾರೆ. ಬಡುಸರಾಯ್, ಝಟಿಕಾರ ಗಡಿಭಾಗಗಳಲ್ಲಿ ನಿರ್ಬಂಧ ಹೇರಿ ಕೆಲ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ತೆಲಂಗಾಣ, ಪಶ್ಚಿಮಬಂಗಾಳ ಮೊದಲಾದ ಕೆಲ ರಾಜ್ಯಗಳಲ್ಲಿ ಪ್ರತಿಭಟನೆಗಳು ಜೋರಾಗಿದೆ. ತೆಲಂಗಾಣದಲ್ಲಿ ಆಡಳಿತ ರೂಢ ಟಿಆರ್ಎಸ್ ಸೇರಿದಂತೆ ಎಲ್ಲಾ ಬಿಜೆಪಿಯೇತರ ಪಕ್ಷಗಳು ಬಂದ್ಗೆ ಬೆಂಬಲ ನೀಡಿದೆ. ಪಶ್ಚಿಮಬಂಗಾಳದಲ್ಲಿ ಎಡಪಕ್ಷಗಳು ರೈಲು ತಡೆ ಸೇರಿದಂತೆ ವಿವಿಧ ಪ್ರತಿಭಟನೆಗಳನ್ನು ನಡೆಸುತ್ತಿವೆ.
ಬಂದ್ಗೆ ಸುಮಾರು 15 ವಿರೋಧ ಪಕ್ಷಗಳು ಹಾಗೂ ಹಲವಾರು ಕಾರ್ಮಿಕ ಒಕ್ಕೂಟಗಳು ಬೆಂಬಲ ನೀಡಿವೆ. ಪಂಜಾಬ್, ಹರ್ಯಾಣ ಹಾಗೂ ಉತ್ತರಪ್ರದೇಶ ರೈತರುಗಳು ಇಂದು ಬೆಳಗ್ಗೆ 11ರಿಂದ ಅಪರಾಹ್ನ 3ರ ತನಕ ಚಕ್ಕ ಜಾಮ್ ಪ್ರತಿಭಟನೆ ನಡೆಸಲಿದ್ದಾರೆ. ರೈತರು ದೇಶಾದ್ಯಂತ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಶ್ಚಿಮಬಂಗಾಳದ ಜಾಧವ್ಪುರ ರೈಲ್ವೆ ಸ್ಟೇಶನ್ಲ್ಲಿ ಎಡ ಪಕ್ಷಗಳ ಬೆಂಬಲಿಗರು ರೈಲು ಓಡಾಟಕ್ಕೆ ತಡೆಯೊಡ್ಡಿದರು.
A country-wide strike by farmers in India has begun amid a standoff with the government over new farm laws. Tuesday's strike follows three rounds of inconclusive talks between the two sides over laws that farmers say are against their interests.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm