ಬ್ರೇಕಿಂಗ್ ನ್ಯೂಸ್
04-08-24 01:32 pm HK News Desk ದೇಶ - ವಿದೇಶ
ವಯನಾಡ್, ಆ.04: ಭೂಕುಸಿತ ಸಂಭವಿಸಿ ಇಂದಿಗೆ 6 ದಿನ ಕಳೆದಿದೆ. 360ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ. ಅತ್ತ ಬದುಕುಳಿದವರು ನೋವನ್ನು ಅರಗಿಸಿಕೊಳ್ಳುತ್ತಿರುವುದರ ಜೊತೆಗೆ ಕಳ್ಳರ ಕಾಟದಿಂದ ಕೂಡ ಬೇಸತ್ತಿದ್ದಾರೆ.
ವಯನಾಡು ಜುಲೈ 30ರಂದು ಭೂಕುಸಿತದಿಂದ ಸಂಭವಿಸಿತ್ತು. ಸದ್ಯ ಅಲ್ಲಿನ ಪ್ರದೇಶ ಅಕ್ಷರಶಃ ಸ್ಮಶಾನದಂತಾಗಿದೆ. ಇಂಥಾ ಸಂಕಷ್ಟದ ಸಮಯದಲ್ಲೂ ಕೆಲವರು ಮನೆ ಮನೆ ನುಗ್ಗಿ ಚಿನ್ನಾಭರಣ ದೋಚುತ್ತಿದ್ದಾರಂತೆ. ರಕ್ಷಣಾ ಕಾರ್ಯಚರಣೆ ಎಂಬ ನೆಪದಲ್ಲಿ ಕದಿಯುತ್ತಿದ್ದಾರಂತೆ. ಮನೆಯ ಡೋರ್ ಒಡೆದು ಬೆಲೆ ಬಾಳುವ ವಸ್ತುಗಳನ್ನು ಕದಿಯುತ್ತಿದ್ದಾರಂತೆ. ಸದ್ಯ ಈ ವಿಚಾರ ಬೆಳಕಿಗೆ ಬಂದಂತೆ ಪೊಲೀಸರು ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದಾರೆ.
ಭೂಕುಸಿತದಿಂದ ನಾವು ಎಲ್ಲವನ್ನೂ ಕಳೆದುಕೊಂಡಿದ್ದೇವೆ, ದುರಂತದ ಸಮಯದಲ್ಲಿ ನಮ್ಮ ಸುರಕ್ಷತೆಯ ಉದ್ದೇಶದಿಂದ ಮನೆಗಳನ್ನು ಬಿಟ್ಟು ಹೋಗಿದ್ದೆವು. ನಮ್ಮ ಮನೆಯ ಸ್ಥಿತಿಯನ್ನು ಪರಿಶೀಲಿಸಲು ನಾವು ಹಿಂತಿರುಗಿದಾಗ, ಬಾಗಿಲು ಮುರಿದು ತೆರೆದಿರುವುದನ್ನು ನೋಡಿದ್ದೇವೆ. ಸದ್ಯ ಅವರು ತಂಗಿರುವ ರೆಸಾರ್ಟ್ನಲ್ಲಿರುವ ಅವರ ಕೊಠಡಿಯನ್ನು ಕೂಡ ಕಳ್ಳರು ಗುರಿಯಾಗಿಸಿಕೊಂಡು ಅವರ ಬಟ್ಟೆಗಳನ್ನು ಕದ್ದೊಯ್ದಿದ್ದಾರೆ ಎಂದು ದೂರಿದರು. ಶನಿವಾರ ಸಂಜೆ ಹೇಳಿಕೆ ನೀಡಿರುವ ಅಧಿಕಾರಿಗಳು, ಚೂರಲ್ಮಲಾ, ಮುಂಡಕ್ಕೈ ಸೇರಿದಂತೆ ವಿಪತ್ತು ಪೀಡಿತ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ ಎಂದು ವರದಿ ಹೇಳಿದೆ.




ರಾತ್ರಿ ವೇಳೆ ಅನುಮತಿ ಇಲ್ಲದೆ ಓಡಾಡುವಂತಿಲ್ಲ ;
ಭೂಕುಸಿತ ಪೀಡಿತ ಪ್ರದೇಶಗಳಿಗೆ ಅಥವಾ ಸಂತ್ರಸ್ತರ ಮನೆಗಳಿಗೆ ರಾತ್ರಿಯಲ್ಲಿ ಅನುಮತಿಯಿಲ್ಲದೆ ಪ್ರವೇಶಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಯ ಹೆಸರಿನಲ್ಲಿ ಅಥವಾ ರಾತ್ರಿಯಲ್ಲಿ ಪೊಲೀಸರ ಅನುಮತಿಯಿಲ್ಲದೆ ಪೀಡಿತ ಪ್ರದೇಶಗಳಿಗೆ ಅಥವಾ ಮನೆಗಳಿಗೆ ಪ್ರವೇಶಿಸಲು ಯಾರಿಗೂ ಅವಕಾಶವಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ವಯನಾಡಿನ ಭೂಕುಸಿತದಲ್ಲಿ ಇದುವರೆಗೆ 219 ಮೃತದೇಹಗಳು ಪತ್ತೆಯಾಗಿದ್ದು, ಅದರಲ್ಲಿ 154 ಪ್ರತ್ಯೇಕ ದೇಹದ ಭಾಗಗಳು ಸಿಕ್ಕಿವೆ. ಮೃತಪಟ್ಟವರಲ್ಲಿ 96 ಪುರುಷರು, 87 ಮಹಿಳೆಯರು ಮತ್ತು 36 ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.
Residents of landslide-devastated villages in Kerala's Wayanad district who were forced to flee their homes have reported thefts from their abandoned properties, prompting police to increase night patrols. The displaced residents suspect that thieves might be taking advantage of the state's biggest humanitarian crisis to steal valuables.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am