ಬ್ರೇಕಿಂಗ್ ನ್ಯೂಸ್
04-08-24 06:12 pm HK News Desk ದೇಶ - ವಿದೇಶ
ಪ್ಯಾರಿಸ್, ಆಗಸ್ಟ್.4: ಹತ್ತೇ ಮಂದಿ ಆಡಿದರೂ, ಅದ್ಭುತ ಪ್ರದರ್ಶನ ನೀಡಿದ ಹರ್ಮನ್ ಪ್ರೀತ್ ಸಿಂಗ್ ನೇತೃತ್ವದ ಭಾರತ ಹಾಕಿ ತಂಡ ಪ್ಯಾರಿಸ್ ಒಲಿಂಪಿಕ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಗ್ರೇಟ್ ಬ್ರಿಟನ್ ತಂಡವನ್ನು ಪೆನಾಲ್ಟಿ ಶೂಟೌಟ್ ನಲ್ಲಿ 4-2ರಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದೆ. ಈ ಮಧ್ಯೆ ಬಾಕ್ಸಿಂಗ್ ನಲ್ಲಿ ಭಾರತದ ಭರವಸೆಯ ಬಾಕ್ಸರ್ ಲವ್ಲೀನಾ ಬೊರ್ಗೊಹಾವ್ ಕ್ವಾರ್ಟರ್ ಫೈನಲ್ ನಲ್ಲಿ ಸೋಲನುಭವಿಸಿ ಆಘಾತಕಾರಿ ಫಲಿತಾಂಶ ದಾಖಲಾಯಿತು.
ಹಾಕಿ ಟೂರ್ನಿಯ ಅಂತಿಮ ಎಂಟರ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತ ಪೂರ್ಣಾವಧಿ ಮುಗಿದಾಗ ಗ್ರೇಟ್ ಬ್ರಿಟನ್ ಜೊತೆ 1-1ರಿಂದ ಸಮಬಲದಲ್ಲಿತ್ತು. ಮೊದಲಾರ್ಧದಲ್ಲಿ ಉಭಯ ತಂಡಗಳು ಗೋಲು ಬಾರಿಸಲು ವಿಫಲವಾಗಿತ್ತು. ಈ ಮಧ್ಯೆ ಎರಡನೇ ಅವಧಿಯಲ್ಲಿ ಭಾರತ ತಂಡದ ಅಮಿತ್ ರೋಹಿದಾಸ್ ರೆಡ್ ಕಾರ್ಡ್ ಪಡೆದು ಪಂದ್ಯದಿಂದಲೇ ಹೊರಗುಳಿಯಬೇಕಾಯಿತು. ಇದರ ಬಳಿಕ 10 ಆಟಗಾರರಿಂದಲೇ ಆಟ ಮುಂದುವರಿಸಿದ ಭಾರತವನ್ನು ಆಧರಿಸಿದ್ದು ಗೋಲ್ ಕೀಪರ್ ಪಿ.ಆರ್.ಶ್ರೀಜೇಶ್. ಉಳಿದ ಮೂರೂ ಅವಧಿಯಲ್ಲಿ ಹಲವು ಗೋಲುಗಳನ್ನು ತಡೆಯುವಲ್ಲಿ ಯಶಸ್ವಿಯಾದರು.
ಈ ನಡುವೆ ಭಾರತದ ನಾಯಕ ಹರ್ಮನ್ ಪ್ರೀತ್ ಸಿಂಗ್ ಗೋಲು ಬಾರಿಸಿ ಭಾರತಕ್ಕೆ ಮುನ್ನಡೆ ಒದಗಿಸಿದರು. ಇದು ಹರ್ಮನ್ ಪ್ರೀತ್ ಈ ಟೂರ್ನಿಯಲ್ಲಿ ಬಾರಿಸಿದ 7ನೇ ಗೋಲಾಗಿತ್ತು. ಐದೇ ನಿಮಿಷಗಳಲ್ಲಿ ಗ್ರೇಟ್ ಬ್ರಿಟನ್ ಗೋಲು ಸರಿಗಟ್ಟಿತು. ಮುಂದೆ ಪೂರ್ಣಾವಧಿ ತನಕ ಉಭಯ ತಂಡಗಳು ಗೋಲು ಬಾರಿಸದ ಕಾರಣ ಫಲಿತಾಂಶ ನಿರ್ಣಯಕ್ಕೆ ಪೆನಾಲ್ಟಿ ಶೂಟೌಟ್ ಮೊರೆ ಹೋಗಲಾಯಿತು.
ಶೂಟೌಟ್ ನಲ್ಲಿ ಹರ್ಮನ್ ಪ್ರೀತ್, ಸುಖಜೀತ್ ಸಿಂಗ್, ಲಲಿತ್ ಮತ್ತು ರಾಜ್ ಕುಮಾರ್ ಪಾಲ್ ಗೋಲು ಬಾರಿಸಿದರು. ಗ್ರೇಟ್ ಬ್ರಿಟನ್ ಬಾರಿಸಿದ ಎರಡು ಗೋಲುಗಳನ್ನು ಶ್ರೀಜೇಶ್ ತಡೆದ ಕಾರಣ ಭಾರತ ಗೆಲುವಿನ ನಗು ಬೀರಿತು.
ಮಹಿಳೆಯರ ಬಾಕ್ಸಿಂಗ್ ನಲ್ಲಿ ಭಾರತದ ಲವ್ಲೀನಾ ಬೊರ್ಗೊಹಾವ್ 1-4ರಿಂದ ಚೀನಾದ ಕ್ವಿಯಾನ್ ವಿರುದ್ಧ ಸೋಲು ಕಂಡರು.
Paris Olympic Games 2024! Today, the India Men's Hockey team faces Great Britain in a crucial quarterfinal match. Boxer Lovlina Borgohain will also be in the spotlight as she takes on Li Qian in her quarterfinal bout. In Badminton, Lakshya Sen is set to compete against defending Olympic champion Viktor Axelsen in the semifinals.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm