ಬ್ರೇಕಿಂಗ್ ನ್ಯೂಸ್
05-08-24 10:42 pm HK News Desk ದೇಶ - ವಿದೇಶ
ಢಾಕಾ, ಆಗಸ್ಟ್.5: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಉದ್ರಿಕ್ತರ ಗುಂಪೊಂದು ಸೋಮವಾರ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಿದ್ದು, ನಾಲ್ಕು ಹಿಂದೂ ದೇವಾಲಯಗಳಿಗೆ ಹಾನಿ ಮಾಡಿದೆ ಎಂದು ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ತಿಳಿಸಿದ್ದಾರೆ.
ಪ್ರಧಾನಿ ಶೇಖ್ ಹಸೀನಾ ಪದಚ್ಯುತಿ ನಂತರ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಿಂದೂ ಸಮುದಾಯದ ಮುಖಂಡರು ಭಯಭೀತರಾಗಿದ್ದಾರೆ. ಢಾಕಾದ ಧನ್ಮಂಡಿ ಪ್ರದೇಶದಲ್ಲಿರುವ ಇಂದಿರಾಗಾಂಧಿ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬಂಗಬಂಧು ಸ್ಮಾರಕ ಮ್ಯೂಸಿಯಂ ಸೇರಿದಂತೆ ಢಾಕಾದಲ್ಲಿ ಹಲವು ಕಡೆಗಳಲ್ಲಿ ಸರ್ಕಾರಿ ಕಚೇರಿಗಳಿಗೂ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. 1975 ರಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವಾಗ ಹತ್ಯೆಗೀಡಾದ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ಸ್ಮರಣಾರ್ಥ ಈ ಮ್ಯೂಸಿಯಂ ಸ್ಥಾಪಿಸಲಾಗಿತ್ತು.
ಮಾರ್ಚ್ 2010 ರಲ್ಲಿ ಉದ್ಘಾಟನೆಗೊಂಡ ಇಂದಿರಾ ಗಾಂಧಿ ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರ ಆಯೋಜಿಸುವ ಮೂಲಕ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ದ್ವಿಪಕ್ಷೀಯ ಸಾಂಸ್ಕೃತಿಕ ವಿನಿಮಯವನ್ನು ಪ್ರೋತ್ಸಾಹಿಸಲಾಗುತಿತ್ತು. ಯೋಗ, ಹಿಂದಿ, ಭಾರತೀಯ ಶಾಸ್ತ್ರೀಯ ಗಾಯನ, ಸಂಗೀತ, ಕಥಕ್ ಮತ್ತು ಮಣಿಪುರಿಯಂತಹ ಭಾರತೀಯ ನೃತ್ಯಗಳಿಗೆ ಭಾರತ ಮೂಲದ ವೃತ್ತಿಪರರು ಮತ್ತು ತರಬೇತುದಾರರು ಇಲ್ಲಿ ತರಬೇತಿ ನೀಡುತ್ತಿದ್ದರು. ಭಾರತೀಯ ಕಲೆ, ಸಂಸ್ಕೃತಿ, ರಾಜಕೀಯ, ಅರ್ಥಶಾಸ್ತ್ರ ಮತ್ತು ಕಾದಂಬರಿ ಕ್ಷೇತ್ರಗಳಲ್ಲಿ 21,000 ಕ್ಕೂ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ ಈ ಕೇಂದ್ರದಲ್ಲಿತ್ತು.
An unruly mob on Monday damaged the Indira Gandhi Cultural Centre (IGCC) and the Bangabandhu Memorial Museum located at the Dhanmondi area in the Bangladesh capital, eyewitnesses said.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm