ಬ್ರೇಕಿಂಗ್ ನ್ಯೂಸ್
05-08-24 10:42 pm HK News Desk ದೇಶ - ವಿದೇಶ
ಢಾಕಾ, ಆಗಸ್ಟ್.5: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಉದ್ರಿಕ್ತರ ಗುಂಪೊಂದು ಸೋಮವಾರ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಿದ್ದು, ನಾಲ್ಕು ಹಿಂದೂ ದೇವಾಲಯಗಳಿಗೆ ಹಾನಿ ಮಾಡಿದೆ ಎಂದು ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ತಿಳಿಸಿದ್ದಾರೆ.
ಪ್ರಧಾನಿ ಶೇಖ್ ಹಸೀನಾ ಪದಚ್ಯುತಿ ನಂತರ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಿಂದೂ ಸಮುದಾಯದ ಮುಖಂಡರು ಭಯಭೀತರಾಗಿದ್ದಾರೆ. ಢಾಕಾದ ಧನ್ಮಂಡಿ ಪ್ರದೇಶದಲ್ಲಿರುವ ಇಂದಿರಾಗಾಂಧಿ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.





ಬಂಗಬಂಧು ಸ್ಮಾರಕ ಮ್ಯೂಸಿಯಂ ಸೇರಿದಂತೆ ಢಾಕಾದಲ್ಲಿ ಹಲವು ಕಡೆಗಳಲ್ಲಿ ಸರ್ಕಾರಿ ಕಚೇರಿಗಳಿಗೂ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. 1975 ರಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವಾಗ ಹತ್ಯೆಗೀಡಾದ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ಸ್ಮರಣಾರ್ಥ ಈ ಮ್ಯೂಸಿಯಂ ಸ್ಥಾಪಿಸಲಾಗಿತ್ತು.
ಮಾರ್ಚ್ 2010 ರಲ್ಲಿ ಉದ್ಘಾಟನೆಗೊಂಡ ಇಂದಿರಾ ಗಾಂಧಿ ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರ ಆಯೋಜಿಸುವ ಮೂಲಕ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ದ್ವಿಪಕ್ಷೀಯ ಸಾಂಸ್ಕೃತಿಕ ವಿನಿಮಯವನ್ನು ಪ್ರೋತ್ಸಾಹಿಸಲಾಗುತಿತ್ತು. ಯೋಗ, ಹಿಂದಿ, ಭಾರತೀಯ ಶಾಸ್ತ್ರೀಯ ಗಾಯನ, ಸಂಗೀತ, ಕಥಕ್ ಮತ್ತು ಮಣಿಪುರಿಯಂತಹ ಭಾರತೀಯ ನೃತ್ಯಗಳಿಗೆ ಭಾರತ ಮೂಲದ ವೃತ್ತಿಪರರು ಮತ್ತು ತರಬೇತುದಾರರು ಇಲ್ಲಿ ತರಬೇತಿ ನೀಡುತ್ತಿದ್ದರು. ಭಾರತೀಯ ಕಲೆ, ಸಂಸ್ಕೃತಿ, ರಾಜಕೀಯ, ಅರ್ಥಶಾಸ್ತ್ರ ಮತ್ತು ಕಾದಂಬರಿ ಕ್ಷೇತ್ರಗಳಲ್ಲಿ 21,000 ಕ್ಕೂ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ ಈ ಕೇಂದ್ರದಲ್ಲಿತ್ತು.
An unruly mob on Monday damaged the Indira Gandhi Cultural Centre (IGCC) and the Bangabandhu Memorial Museum located at the Dhanmondi area in the Bangladesh capital, eyewitnesses said.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm