ಬ್ರೇಕಿಂಗ್ ನ್ಯೂಸ್
05-08-24 10:42 pm HK News Desk ದೇಶ - ವಿದೇಶ
ಢಾಕಾ, ಆಗಸ್ಟ್.5: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಉದ್ರಿಕ್ತರ ಗುಂಪೊಂದು ಸೋಮವಾರ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಿದ್ದು, ನಾಲ್ಕು ಹಿಂದೂ ದೇವಾಲಯಗಳಿಗೆ ಹಾನಿ ಮಾಡಿದೆ ಎಂದು ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ತಿಳಿಸಿದ್ದಾರೆ.
ಪ್ರಧಾನಿ ಶೇಖ್ ಹಸೀನಾ ಪದಚ್ಯುತಿ ನಂತರ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಿಂದೂ ಸಮುದಾಯದ ಮುಖಂಡರು ಭಯಭೀತರಾಗಿದ್ದಾರೆ. ಢಾಕಾದ ಧನ್ಮಂಡಿ ಪ್ರದೇಶದಲ್ಲಿರುವ ಇಂದಿರಾಗಾಂಧಿ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬಂಗಬಂಧು ಸ್ಮಾರಕ ಮ್ಯೂಸಿಯಂ ಸೇರಿದಂತೆ ಢಾಕಾದಲ್ಲಿ ಹಲವು ಕಡೆಗಳಲ್ಲಿ ಸರ್ಕಾರಿ ಕಚೇರಿಗಳಿಗೂ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. 1975 ರಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವಾಗ ಹತ್ಯೆಗೀಡಾದ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ಸ್ಮರಣಾರ್ಥ ಈ ಮ್ಯೂಸಿಯಂ ಸ್ಥಾಪಿಸಲಾಗಿತ್ತು.
ಮಾರ್ಚ್ 2010 ರಲ್ಲಿ ಉದ್ಘಾಟನೆಗೊಂಡ ಇಂದಿರಾ ಗಾಂಧಿ ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರ ಆಯೋಜಿಸುವ ಮೂಲಕ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ದ್ವಿಪಕ್ಷೀಯ ಸಾಂಸ್ಕೃತಿಕ ವಿನಿಮಯವನ್ನು ಪ್ರೋತ್ಸಾಹಿಸಲಾಗುತಿತ್ತು. ಯೋಗ, ಹಿಂದಿ, ಭಾರತೀಯ ಶಾಸ್ತ್ರೀಯ ಗಾಯನ, ಸಂಗೀತ, ಕಥಕ್ ಮತ್ತು ಮಣಿಪುರಿಯಂತಹ ಭಾರತೀಯ ನೃತ್ಯಗಳಿಗೆ ಭಾರತ ಮೂಲದ ವೃತ್ತಿಪರರು ಮತ್ತು ತರಬೇತುದಾರರು ಇಲ್ಲಿ ತರಬೇತಿ ನೀಡುತ್ತಿದ್ದರು. ಭಾರತೀಯ ಕಲೆ, ಸಂಸ್ಕೃತಿ, ರಾಜಕೀಯ, ಅರ್ಥಶಾಸ್ತ್ರ ಮತ್ತು ಕಾದಂಬರಿ ಕ್ಷೇತ್ರಗಳಲ್ಲಿ 21,000 ಕ್ಕೂ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ ಈ ಕೇಂದ್ರದಲ್ಲಿತ್ತು.
An unruly mob on Monday damaged the Indira Gandhi Cultural Centre (IGCC) and the Bangabandhu Memorial Museum located at the Dhanmondi area in the Bangladesh capital, eyewitnesses said.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 10:47 pm
Mangalore Correspondent
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm