ಬ್ರೇಕಿಂಗ್ ನ್ಯೂಸ್
08-08-24 10:42 am HK News Desk ದೇಶ - ವಿದೇಶ
ಪ್ಯಾರಿಸ್, ಆಗಸ್ಟ್.8: ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆಲ್ಲುವತ್ತ ದಾಪುಗಾಲಿಟ್ಟು ಕೇವಲ ನೂರು ಗ್ರಾಮ್ ಭಾರಕ್ಕೆ ಅನರ್ಹಗೊಂಡಿದ್ದ ಕುಸ್ತಿಪಟು ವಿನೇಶ್ ಫೋಗಟ್ ಕುಸ್ತಿ ಪಂದ್ಯಾಟಕ್ಕೇ ನಿವೃತ್ತಿ ಘೋಷಿಸಿದ್ದಾರೆ. ಇನ್ನೇನು ಚಿನ್ನದ ಪದಕಕ್ಕೆ ಒಂದೇ ಹೆಜ್ಜೆ ಎನ್ನುವಷ್ಟರಲ್ಲಿ ಅನರ್ಹತೆಯ ಬರಸಿಡಿಲು ಎದುರಿಸಿದ್ದ ಹೆಣ್ಣುಹುಲಿ ವಿನೇಶ್ ಫೋಗಟ್ ಕೋಟ್ಯಂತರ ಭಾರತೀಯರಿಗೆ ಶಾಕ್ ನೀಡಿದ್ದಾರೆ.
ಕೇವಲ 100 ಗ್ರಾಮ್ ಹೆಚ್ಚುವರಿ ತೂಕದ ಕಾರಣಕ್ಕೆ ಅನರ್ಹಗೊಂಡಿದ್ದು ತೀವ್ರ ನಿರಾಸೆ ಉಂಟುಮಾಡಿತ್ತು. ಹೀಗಾಗಿ ಅದಾದ ಒಂದೇ ದಿನದಲ್ಲಿ ಕುಸ್ತಿಗೆ ವಿದಾಯ ಹೇಳಿದ್ದಾರೆ. ನನ್ನಲ್ಲಿ ಮುಂದೆ ಕುಸ್ತಿ ಆಡುವ ಶಕ್ತಿ ಇಲ್ಲ. ಬಾಯ್ ಬಾಯ್ ರಸ್ಲಿಂಗ್ ಎಂದು ಭಾವನಾತ್ಮಕ ಸಂದೇಶ ಹಾಕಿದ್ದು, ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ್ದಾರೆ.
“ನನ್ನ ಮುಂದೆ ಕುಸ್ತಿ ಗೆದ್ದಿತು, ನಾನು ಸೋತು ಹೋದೆ... ನಿಮ್ಮ ಕನಸುಗಳೊಂದಿಗೆ ನನ್ನ ಧೈರ್ಯವೂ ಛಿದ್ರವಾಗಿದೆ. ನನ್ನಲ್ಲಿ ಇನ್ನೂ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ. ನಿಮ್ಮೆಲ್ಲರಿಗೂ ನಾನು ಚಿರಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಬರೆದುಕೊಂಡಿದ್ದಾರೆ.
ಆಮೂಲಕ ಭಾರತೀಯ ಕುಸ್ತಿ ಇತಿಹಾಸಲ್ಲಿ ವಿನೇಶ್ ಫೋಗಟ್ ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದ್ದಾರೆ. ಎದುರಾಳಿ ಎಷ್ಟೇ ಬಲಿಷ್ಠ ಕುಸ್ತಿಪಟುವಾದರೂ, ಧೈರ್ಯದಿಂದ ಎದುರಿಸಿ ಗೆಲ್ಲುವ ಛಾತಿ ಹೊಂದಿದ್ದ ವಿನೇಶ್ ಫೋಗಟ್ ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಶಾಕ್ ಎದುರಿಸಿದ್ದಾರೆ. ಸೋಲನ್ನೇ ಕಾಣದ ಜಪಾನ್ನ ಬಲಿಷ್ಠ ಕುಸ್ತಿಪಟು ಯೂಯು ಸುಸಾಕಿ ಅವರನ್ನು ಸೋಲಿಸಿದಾಗ, ಈ ಸಲ ಚಿನ್ನ ಖಚಿತ ಎನ್ನುವ ವಿಶ್ವಾಸ ಕುದುರಿತ್ತು. ಆದರೆ ಕೊನೆ ಕ್ಷಣದಲ್ಲಿ ಅನರ್ಹತೆಯ ಬೀಸು ಗತ್ತಿಯ ಇರಿತಕ್ಕೆ ಫೋಗಟ್ ಸೇರಿದಂತೆ ಕೋಟ್ಯಂತರ ಭಾರತೀಯರು ತೀವ್ರ ಶಾಕ್ ಆಗಿದ್ದಾರೆ.
ಮೂರು ಒಲಿಂಪಿಕ್ಸ್ಗಳಲ್ಲಿ ಆಡಿರುವ ವಿನೇಶ್, ಮೂರು ಬಾರಿ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ವಿಶ್ವ ಚಾಂಪಿಯನ್ ಶಿಪ್ನಲ್ಲಿ ಎರಡು ಕಂಚು ಮತ್ತು ಒಂದು ಬಾರಿ ಏಷ್ಯನ್ ಗೇಮ್ಸ್ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದರೊಂದಿಗೆ ಒಮ್ಮೆ ಏಷ್ಯನ್ ಚಾಂಪಿಯನ್ ಕೂಡ ಆಗಿದ್ದಾರೆ. 2014ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ 48 ಕೆಜಿ ವಿಭಾಗದಲ್ಲಿ ಚಿನ್ನ ಗೆಲ್ಲುವ ಮೂಲಕ ವಿನೇಶ್ ಅವರ ಅಂತಾರಾಷ್ಟ್ರೀಯ ಪದಕಗಳ ಬೇಟೆ ಆರಂಭವಾಗಿತ್ತು. 2016ರ ರಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಫೋಗಟ್, ಕ್ವಾರ್ಟರ್ ಫೈನಲ್ ತಲುಪಿದರೂ ಪದಕ ಒಲಿಯಲಿಲ್ಲ. ಬಲ ಮೊಣಕಾಲಿಗೆ ಗಾಯಗೊಂಡು ಕೂಟದಿಂದ ಹೊರಬಿದ್ದಿದ್ದರು. ಮತ್ತೆ ಹಠ ಹಿಡಿದು ಬಂಗಾರ ಗೆಲ್ಲುವ ಪಣತೊಟ್ಟ ವಿನೇಶ್, 2018ರ ಕಾಮನ್ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ಬಂಗಾರ ಜಯಿಸಿದ್ದರು.
Wrestler Vinesh Phogat announced her retirement on Thursday, a day after she was disqualified from the gold medal bout in the 50 kg women's category at the Paris Olympics 2024.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm