ಬ್ರೇಕಿಂಗ್ ನ್ಯೂಸ್
08-12-20 03:59 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.8: ಜಾಗತಿಕ ಆರೋಗ್ಯ ತಜ್ಞನೆಂದು ಹೆಸರಾಗಿರುವ ಭಾರತ ಮೂಲದ ಅನಿಲ್ ಸೋನಿ ಅವರನ್ನು ವಿಶ್ವ ಆರೋಗ್ಯ ಸಂಸ್ಥೆಯ ಅಧೀನ ಸಂಸ್ಥೆ ದಿ ಡಬ್ಲ್ಯುಎಚ್ ಓ ಫೌಂಡೇಶನ್ ಇದರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಭಾರತ ಮೂಲದ ವ್ಯಕ್ತಿ ಈ ಉನ್ನತ ಹುದ್ದೆಗೇರಿದ್ದು ಇದೇ ಮೊದಲು.
ಜಾಗತಿಕ ಆರೋಗ್ಯ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊಸ ಮಾದರಿಯ ಫೌಂಡೇಶನ್ ಒಂದನ್ನು ಇತ್ತೀಚೆಗೆ ಸ್ಥಾಪನೆ ಮಾಡಲಾಗಿತ್ತು. ಅನಿಲ್ ಸೋನಿ, ಮುಂದಿನ ಜನವರಿ ಒಂದರಂದು ಫೌಂಡೇಶನ್ ಸಿಇಓ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಅನಿಲ್ ಸೋನಿ ಈ ಮೊದಲು ಬಹುರಾಷ್ಟ್ರೀಯ ಫಾರ್ಮಾಸುಟಿಕಲ್ ಸಂಸ್ಥೆ ವಿಯಾಟ್ರಿಸ್ ನಲ್ಲಿ ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ವಿಯಾಟ್ರಿಸ್ ನಲ್ಲಿ ಜಾಗತಿಕ ಸಾಂಕ್ರಾಮಿಕ ರೋಗಗಳ ವಿಭಾಗದ ಪ್ರಮುಖರಾಗಿ ಕಾರ್ಯ ನಿರ್ವಹಿಸಿದ್ದರು. ವಿಶ್ವ ಆರೋಗ್ಯ ಸಂಸ್ಥೆಯ ಡೈರೆಕ್ಟರ್ ಜನರಲ್ ಡಾ.ಟೆಡ್ರಾಸ್ ಅಧಾನಮ್, ಅನಿಲ್ ಸೋನಿಯವರ ನೇಮಕದ ಬಗ್ಗೆ ಘೋಷಣೆ ಮಾಡಿದ್ದು, ಎರಡು ದಶಕಗಳಲ್ಲಿ ಅನಿಲ್ ಸೋನಿ ಜಾಗತಿಕವಾಗಿ ಎಚ್ಐವಿ, ಏಡ್ಸ್ ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಸೇವೆ ಸಲ್ಲಿಸಿದ್ದಾರೆ. ಅವರೊಬ್ಬ ಯಶಸ್ವೀ ಆವಿಷ್ಕಾರಿ ಎಂದು ಹೇಳಿದ್ದಾರೆ.
The World Health Organization Foundation has appointed an Indian-origin health expert, Anil Soni, as its first Chief Executive Officer (CEO) to address the most vital health challenges all across the globe.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm