ಬ್ರೇಕಿಂಗ್ ನ್ಯೂಸ್
10-08-24 09:35 pm HK News Desk ದೇಶ - ವಿದೇಶ
ಢಾಕಾ, ಆಗಸ್ಟ್ 10: ಶೇಖ್ ಹಸೀನಾ ದೇಶ ಬಿಟ್ಟು ಹೋದ ಬಳಿಕ ಅವರ ಪರವಾಗಿದ್ದರು ಎನ್ನಲಾದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಒಬೈದುಲ್ ಹಸನ್ ಈಗ ಹೋರಾಟಗಾರರ ಟಾರ್ಗೆಟ್ ಆಗಿದ್ದಾರೆ. ಮುಖ್ಯ ನ್ಯಾಯಮೂರ್ತಿ ಹಾಗೂ ಇತರ ನ್ಯಾಯಾಧೀಶರು ರಾಜೀನಾಮೆ ನೀಡುವಂತೆ ಆಗ್ರಹಿಸಿ ಶನಿವಾರ ಬೆಳಗ್ಗೆ ವಿದ್ಯಾರ್ಥಿ ಮುಖಂಡರು, ವಕೀಲರು ಸುಪ್ರೀಂ ಕೋರ್ಟ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಹೊರಗೆ ನಿಂತು ಪ್ರತಿಭಟಿಸಿದ್ದು, ರಾಜಿನಾಮೆ ನೀಡದೇ ಇದ್ದರೆ ನ್ಯಾಯಾಧೀಶರ ನಿವಾಸಗಳ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಧ್ಯಾಹ್ನ ಒಂದು ಗಂಟೆ ವರೆಗೆ ಗಡುವು ನೀಡಿದ್ದರು. ಆನಂತರ, ಹೋರಾಟಗಾರರ ಭಯದಿಂದಾಗಿ ನ್ಯಾಯಾಧೀಶರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೆ ಒಪ್ಪಿದ್ದಾರೆ.
ಕಳೆದ ವರ್ಷವಷ್ಟೇ ಒಬೈದುಲ್ ಹಸನ್ ಅವರನ್ನು ಶೇಖ್ ಹಸೀನಾ ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಿದ್ದರು. ಶೇಖ್ ಹಸೀನಾ ಅವರ ನಿರ್ಗಮನದ ನಂತರ, ರಾಷ್ಟ್ರೀಯ ಪೊಲೀಸ್ ಮುಖ್ಯಸ್ಥ ಮತ್ತು ಕೇಂದ್ರ ಬ್ಯಾಂಕ್ ಗವರ್ನರ್ ಸೇರಿದಂತೆ ಬಾಂಗ್ಲಾದೇಶದ ಅನೇಕ ಉನ್ನತ ಅಧಿಕಾರಿಗಳನ್ನು ಕಚೇರಿಯಿಂದ ಹೊರಹಾಕಲಾಗಿದೆ. ಇದರ ಬೆನ್ನಲ್ಲೇ ಮುಖ್ಯ ನ್ಯಾಯಾಧೀಶರ ವಿರುದ್ಧ ಆಕ್ರೋಶ ತಿರುಗಿತ್ತು.
ಕಳೆದ ವರ್ಷ ನೇಮಕಗೊಂಡ ಒಬೈದುಲ್ ಹಸನ್ ಅವರು ಈ ಹಿಂದೆ ಯುದ್ಧ ಅಪರಾಧಗಳ ನ್ಯಾಯಮಂಡಳಿ ಪ್ರಕರಣವನ್ನು ಆಲಿಸಿದ್ದರು. ಈ ವೇಳೆ ಶೇಖ್ ಹಸೀನಾ ಅವರ ವಿರೋಧಿಗಳನ್ನು ಗಲ್ಲಿಗೇರಿಸಲು ಆದೇಶ ನೀಡಲಾಗಿತ್ತು. ಇದು ಸಾಕಷ್ಟು ಟೀಕೆಗೂ ಒಳಗಾಗಿತ್ತು. ಅಂದಿನಿಂದ ಒಬೇದುಲ್ಲಾ ಅವರು ಶೇಖ್ ಹಸೀನಾ ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಯೂನಸ್ ಸರ್ಕಾರದ ಭಾಗವಾಗಿರುವ ವಿದ್ಯಾರ್ಥಿ ನಾಯಕ ಆಸಿಫ್ ನಜ್ರುಲ್ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಜನರ ದೊಡ್ಡ ಪ್ರಮಾಣದ ದಂಗೆಗೆ ಹಾನಿಯಾಗುವ ಯಾವುದನ್ನೂ ಯಾರೂ ಮಾಡಬಾರದು ಎಂದು ಹೇಳಿದ್ದಾರೆ.
The chief justice of Bangladesh’s top court has said he agreed “in principle” to resign after an ultimatum from protesters, days after Prime Minister Sheikh Hasina fled to neighbouring India.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm