ಬ್ರೇಕಿಂಗ್ ನ್ಯೂಸ್
10-08-24 09:35 pm HK News Desk ದೇಶ - ವಿದೇಶ
ಢಾಕಾ, ಆಗಸ್ಟ್ 10: ಶೇಖ್ ಹಸೀನಾ ದೇಶ ಬಿಟ್ಟು ಹೋದ ಬಳಿಕ ಅವರ ಪರವಾಗಿದ್ದರು ಎನ್ನಲಾದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಒಬೈದುಲ್ ಹಸನ್ ಈಗ ಹೋರಾಟಗಾರರ ಟಾರ್ಗೆಟ್ ಆಗಿದ್ದಾರೆ. ಮುಖ್ಯ ನ್ಯಾಯಮೂರ್ತಿ ಹಾಗೂ ಇತರ ನ್ಯಾಯಾಧೀಶರು ರಾಜೀನಾಮೆ ನೀಡುವಂತೆ ಆಗ್ರಹಿಸಿ ಶನಿವಾರ ಬೆಳಗ್ಗೆ ವಿದ್ಯಾರ್ಥಿ ಮುಖಂಡರು, ವಕೀಲರು ಸುಪ್ರೀಂ ಕೋರ್ಟ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಹೊರಗೆ ನಿಂತು ಪ್ರತಿಭಟಿಸಿದ್ದು, ರಾಜಿನಾಮೆ ನೀಡದೇ ಇದ್ದರೆ ನ್ಯಾಯಾಧೀಶರ ನಿವಾಸಗಳ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಧ್ಯಾಹ್ನ ಒಂದು ಗಂಟೆ ವರೆಗೆ ಗಡುವು ನೀಡಿದ್ದರು. ಆನಂತರ, ಹೋರಾಟಗಾರರ ಭಯದಿಂದಾಗಿ ನ್ಯಾಯಾಧೀಶರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೆ ಒಪ್ಪಿದ್ದಾರೆ.
ಕಳೆದ ವರ್ಷವಷ್ಟೇ ಒಬೈದುಲ್ ಹಸನ್ ಅವರನ್ನು ಶೇಖ್ ಹಸೀನಾ ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಿದ್ದರು. ಶೇಖ್ ಹಸೀನಾ ಅವರ ನಿರ್ಗಮನದ ನಂತರ, ರಾಷ್ಟ್ರೀಯ ಪೊಲೀಸ್ ಮುಖ್ಯಸ್ಥ ಮತ್ತು ಕೇಂದ್ರ ಬ್ಯಾಂಕ್ ಗವರ್ನರ್ ಸೇರಿದಂತೆ ಬಾಂಗ್ಲಾದೇಶದ ಅನೇಕ ಉನ್ನತ ಅಧಿಕಾರಿಗಳನ್ನು ಕಚೇರಿಯಿಂದ ಹೊರಹಾಕಲಾಗಿದೆ. ಇದರ ಬೆನ್ನಲ್ಲೇ ಮುಖ್ಯ ನ್ಯಾಯಾಧೀಶರ ವಿರುದ್ಧ ಆಕ್ರೋಶ ತಿರುಗಿತ್ತು.
ಕಳೆದ ವರ್ಷ ನೇಮಕಗೊಂಡ ಒಬೈದುಲ್ ಹಸನ್ ಅವರು ಈ ಹಿಂದೆ ಯುದ್ಧ ಅಪರಾಧಗಳ ನ್ಯಾಯಮಂಡಳಿ ಪ್ರಕರಣವನ್ನು ಆಲಿಸಿದ್ದರು. ಈ ವೇಳೆ ಶೇಖ್ ಹಸೀನಾ ಅವರ ವಿರೋಧಿಗಳನ್ನು ಗಲ್ಲಿಗೇರಿಸಲು ಆದೇಶ ನೀಡಲಾಗಿತ್ತು. ಇದು ಸಾಕಷ್ಟು ಟೀಕೆಗೂ ಒಳಗಾಗಿತ್ತು. ಅಂದಿನಿಂದ ಒಬೇದುಲ್ಲಾ ಅವರು ಶೇಖ್ ಹಸೀನಾ ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಯೂನಸ್ ಸರ್ಕಾರದ ಭಾಗವಾಗಿರುವ ವಿದ್ಯಾರ್ಥಿ ನಾಯಕ ಆಸಿಫ್ ನಜ್ರುಲ್ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಜನರ ದೊಡ್ಡ ಪ್ರಮಾಣದ ದಂಗೆಗೆ ಹಾನಿಯಾಗುವ ಯಾವುದನ್ನೂ ಯಾರೂ ಮಾಡಬಾರದು ಎಂದು ಹೇಳಿದ್ದಾರೆ.
The chief justice of Bangladesh’s top court has said he agreed “in principle” to resign after an ultimatum from protesters, days after Prime Minister Sheikh Hasina fled to neighbouring India.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm